Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...