Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...