Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...