Homeಅಂಕಣಗಳುಗೌರಿ ಲಂಕೇಶ್‍ರ ಮರುಹುಟ್ಟಿನ ತಯಾರಿಯ ಮೊದಲ ಹಂತ ಮುಗಿಸಿ... ನಿಮ್ಮೊಡನೆ ಎರಡು ಮಾತು

ಗೌರಿ ಲಂಕೇಶ್‍ರ ಮರುಹುಟ್ಟಿನ ತಯಾರಿಯ ಮೊದಲ ಹಂತ ಮುಗಿಸಿ… ನಿಮ್ಮೊಡನೆ ಎರಡು ಮಾತು

- Advertisement -
- Advertisement -

ನಿಯತಕಾಲಿಕ ಪತ್ರಿಕೆಗಳ ಯುಗ ಮುಗಿದು ಹೋಗಿದೆಯಾ? ಅದರಲ್ಲೂ ಟ್ಯಾಬ್ಲಾಯ್ಡ್‍ಗಳು ನಡೆಯುವುದಿಲ್ಲವಾ? ಈ ಚರ್ಚೆ ಗೌರಿ ಲಂಕೇಶ್ ಪತ್ರಿಕಾ ಕಚೇರಿಯಲ್ಲಿ ವರ್ಷಕ್ಕೊಂದು ಬಾರಿಯಾದರೂ ನಡೆದಿತ್ತು. ಒಂದು ಲಕ್ಷದಷ್ಟು ಪ್ರಸಾರ ಹೊಂದಿದ್ದ ಪತ್ರಿಕೆಗಳೂ ಈಗ ಏದುಸಿರು ಬಿಡುತ್ತಿವೆ ಎಂಬ ವರ್ತಮಾನ ಮೊದಮೊದಲು ಆಶ್ಚರ್ಯ ತರುತ್ತಿದ್ದವು. ‘ಬೇರೇನೋ’ ಉದ್ದೇಶ ಅಥವಾ ‘ಬೇರೆ ರೀತಿಯ’ ಆದಾಯ ಇದ್ದವರು ಮಾತ್ರ ಟ್ಯಾಬ್ಲಾಯ್ಡ್ ತರಲು ಸಾಧ್ಯ ಎಂಬ ಕನ್‍ಕ್ಲೂಷನ್ ಗಾಬರಿ ತರುವ ಹೊತ್ತಿಗೆ, ಗೌರಿಯವರ ಪತ್ರಿಕೆ ಉಳಿಸಿಕೊಳ್ಳಲು ಗೈಡ್ ಪತ್ರಿಕೆಯನ್ನು ಆರಂಭಿಸಬೇಕಾಗಿ ಬಂದಿತು. ಗೈಡ್ ಪ್ರಕಾಶನವೂ ಆರಂಭವಾಗಿ ಇನ್ನೊಂದಷ್ಟು ಚೈತನ್ಯ ತಂದಿತು. ಲಂಕೇಶ್ ಪ್ರಕಾಶನ ಯಾವತ್ತೂ ಕೈಬಿಡಲಿಲ್ಲ.
ಇಷ್ಟೆಲ್ಲಾ ಇದ್ದರೂ, ಅಂತಿಮವಾಗಿ ಎಷ್ಟು ಜನರಿಗೆ ಪತ್ರಿಕೆ ತಲುಪುತ್ತಿದೆ ಎಂಬುದು ಯಾರಿಗೂ ಸಮಾಧಾನ ತಂದಿರಲಿಲ್ಲ; ಆರ್ಥಿಕ ನಿಭಾವಣೆಯೂ ಸುಲಭದ್ದಾಗಿರಲಿಲ್ಲ. ಹೀಗಾಗಿ ಪತ್ರಿಕೆಯ ಗುಣಮಟ್ಟದಲ್ಲೂ ದೊಡ್ಡ ಚೇತರಿಕೆ ಬರಲಿಲ್ಲ. ಅದೊಂಥರಾ ಕೋಳಿ ಮೊದಲೋ ಮೊಟ್ಟೆ ಮೊದಲೋ ಕಥೆಯಾಗಿತ್ತು. ಇನ್ನೂ ಬಹಳ ಚೆನ್ನಾಗಿ ತರಬೇಕೆಂದರೆ, ಹೆಚ್ಚಿನ ಹಣ ಹೂಡಿಕೆ ಮಾಡಬೇಕು. ಹೆಚ್ಚಿನ ಹಣ ಹೂಡಿಕೆ ಮಾಡಬೇಕೆಂದರೆ, ಪತ್ರಿಕೆ ಇನ್ನೂ ಚೆನ್ನಾಗಿ ಬರಬೇಕು. ಅದಕ್ಕಿಂತ ಮುಖ್ಯವಾದ ಪ್ರಶ್ನೆಯೆಂದರೆ ‘ಚೆನ್ನಾಗಿ’ ಬಂದರೂ ಕೊಂಡು ಓದುವವರಿದ್ದಾರಾ ಎಂಬುದು.
ಅಂತರ್ಜಾಲದಲ್ಲೇ ಬೇಕಾದಷ್ಟು ಸಿಗುತ್ತದೆ; ಅಂತರ್ಜಾಲವೂ ಸುಲಭಕ್ಕೆ ಸಿಗುತ್ತದೆ. ಆದರೆ, ಅಲ್ಲಿಯೂ ಅಂತರ್ಜಾಲದಲ್ಲಿ ನೋಡುಗರ ಸಂಖ್ಯೆಗೆ ಅನುಗುಣವಾಗಿ ದಕ್ಕುವ ಜಾಹೀರಾತಿನಿಂದ ಮಾಧ್ಯಮ ಸಂಸ್ಥೆ ಸ್ವಾವಲಂಬಿಯಾಗಿ ನಡೆಯುವುದು ಕಷ್ಟ. ಅದೇನೇ ಆದರೂ, ವೆಬ್ ಮ್ಯಾಗಝೀನೇ ಭವಿಷ್ಯದ ಮಾಧ್ಯಮ ಎಂಬುದರಲ್ಲಿ ಯಾರಿಗೂ ಸಂಶಯವಿರಲಿಲ್ಲ. ಹೀಗಿದ್ದರೂ 2019ರ ಮಧ್ಯಭಾಗದವರೆಗೆ ಪತ್ರಿಕೆಯನ್ನು ನಿಲ್ಲಿಸುವುದು ಬೇಡ ಎಂದು ಗೌರಿ ಮೇಡಂ ಇದ್ದಾಗಲೇ ನಡೆದ ಚರ್ಚೆಯ ಅಂತಿಮ ತೀರ್ಮಾನವಾಗಿತ್ತು. ಅಲ್ಲಿಯವರೆಗೂ ಮುದ್ರಿತ ಪತ್ರಿಕೆಯನ್ನು ನಡೆಸುವುದು, ನಂತರ ಸೂಕ್ತವಾದ ಮಾಧ್ಯಮಕ್ಕೆ ರೂಪಾಂತರ ಹೊಂದುವುದರ ಬಗ್ಗೆ ಬಳಗದ ಎಲ್ಲರಿಗೂ ಸಹಮತವಿತ್ತು. ಈ ಚರ್ಚೆಗಳೆಲ್ಲಾ ನಡೆದದ್ದು ಬಹುಶಃ 2017ರ ಜೂನ್, ಜುಲೈನಲ್ಲಿ.
ಆ ದಿಕ್ಕಿನಲ್ಲಿ ಕೆಲಸ ಶುರು ಮಾಡುವ ಹೊತ್ತಿಗೆ ದುರಂತ ನಡೆದು ಹೋಯಿತು. ಕ್ಯಾಪ್ಟನ್ ಇಲ್ಲವಾದರು. ತಾವು ನಂಬಿದ ಧ್ಯೇಯಕ್ಕೆ ಬದ್ಧರಾಗಿ ದುಡಿಯುವ ಹಾದಿಯಲ್ಲಿ ಅವರು ಹುತಾತ್ಮರಾದರು. ಆಘಾತ, ಆಕ್ರೋಶ, ತೀರದ ದುಃಖಗಳ ನಡುವೆಯೇ ಪತ್ರಿಕೆ ನಿಲ್ಲಿಸಬಾರದು ಎಂಬ ಚರ್ಚೆ ರಾಜರಾಜೇಶ್ವರಿನಗರದ ಮನೆಯ ಮುಂದೆಯೇ ನಡೆಯಿತು. ಮರುದಿನವೇ ಬರಬೇಕಿದ್ದ ಪತ್ರಿಕೆಯನ್ನು ರೂಪಿಸಲು ಕಚೇರಿಯನ್ನು ಬಳಸುವುದು ಸಾಧ್ಯವಿರಲಿಲ್ಲ. ಅದಾಗಲೇ ಪೊಲೀಸರ ವಶದಲ್ಲಿತ್ತು. ಸೆಪ್ಟೆಂಬರ್ 12ರ ‘ನಾನು ಗೌರಿ’ ಸಮಾವೇಶದಲ್ಲಿ ಸಂಪಾದಕರ ಫೋಟೋವನ್ನೇ ಮುಖಪುಟವಾಗಿಸಿಕೊಂಡು ‘ನನ್ನ ದನಿ ಅಡಗುವುದಿಲ್ಲ’ವೆಂಬ ಸಂದೇಶ ಹೊತ್ತ ಗೌರಿ ನೆನಪಿನ ಸಂಚಿಕೆ ಹೊರಬಂದಿತು.
ಅಲ್ಲಿಂದ ಮುಂದೆ ಹಲವು ಎಡರುತೊಡರುಗಳು. ಗೌರಿ ಸ್ಮಾರಕ ಟ್ರಸ್ಟ್ ರಚನೆ, ಪತ್ರಿಕೆ ತರಲಿಕ್ಕಾಗಿ ಮೀಡಿಯಾ ಟ್ರಸ್ಟ್ ರಚನೆ, ಆರ್‍ಎನ್‍ಐ ನೋಂದಣಿ ಪಡೆಯಲು ದೀರ್ಘವಾದ ಪ್ರಕ್ರಿಯೆ, ಒಂದು ರೀತಿಯಲ್ಲಿ ನಿರೀಕ್ಷಿತ ರೀತಿಯಲ್ಲಿ ಟೈಟಲ್ ನಿರಾಕರಣೆ …….. ಹೀಗೆ. ಆರ್‍ಎನ್‍ಐ ಸಮಸ್ಯೆ ಬಗೆಹರಿಸಿಕೊಳ್ಳಲು ಗಮನ ಕೊಡುತ್ತಲೇ ವೆಬ್ ಎಡಿಷನ್ ಆರಂಭಿಸುವುದೆಂದು ತೀರ್ಮಾನವಾಯಿತು. ಅಷ್ಟು ಹೊತ್ತಿಗೆ ವಾರ್ಷಿಕ ಚಂದಾ ಕೊಡಲು ಹಲವರು ಮುಂದೆ ಬಂದಿದ್ದರಿಂದಲೂ ಟ್ರಸ್ಟ್‍ನ ಅಧ್ಯಕ್ಷರು ಖಾಸಗಿ ಪ್ರಸಾರದ ಪತ್ರಿಕೆ ತರಬೇಕೆಂದು ಸೂಚಿಸಿದ್ದರಿಂದಲೂ, ಮುದ್ರಿತ ಪತ್ರಿಕೆಯನ್ನೂ ತರುವುದೆಂದು ನಿರ್ಧರಿಸಲಾಯಿತು.
ಇದುವರೆಗೆ 11 ಸಂಚಿಕೆಗಳು ಮುಗಿದು, 12ನೇ ಸಂಚಿಕೆ ನಿಮ್ಮ ಕೈಯ್ಯಲ್ಲಿದೆ. ಒಂದು ರೀತಿಯಲ್ಲಿ ಇವೆಲ್ಲವೂ ಮುಂದೆ ದೊಡ್ಡ ಪ್ರಮಾಣದಲ್ಲಿ ರೀ ಲಾಂಚ್ ಮಾಡಲು ನಡೆಸುತ್ತಿರುವ ತಯಾರಿ. ಪತ್ರಿಕೆಯ ಸ್ವರೂಪ, ಹೂರಣ, ಧೋರಣೆ, ಭಾಷೆಯನ್ನು ರೂಪಿಸಿಕೊಳ್ಳುವುದು ಮತ್ತು ವಾರದ ಡೆಡ್‍ಲೈನ್‍ಗೆ ಸರಿಯಾಗಿ ಪತ್ರಿಕೆಯ ಎಲ್ಲಾ ಪುಟಗಳ ಬರವಣಿಗೆ, ಟೈಪಿಂಗ್, ಡಿಸೈನ್ ಮುಗಿಸಿ ಮುದ್ರಣಕ್ಕೆ ಕಳಿಸುವುದು… ಇದರ ತಾಲೀಮು ನಡೆಯುತ್ತಿದೆ.
‘ಬಹಳ ಚೆನ್ನಾಗಿ ಬರುತ್ತಿದೆ’ ಎಂಬ ಅಭಿಪ್ರಾಯದಿಂದ ಹಿಡಿದು ‘ತುಂಬಾ ಅಕ್ಯಾಡೆಮಿಕ್ ಎನಿಸುತ್ತದೆ’ ಎನ್ನುವವರೆಗೆ, ‘ಪೊಲಿಟಿಕ್ಸ್ ಜಾಸ್ತಿ ಆಯಿತು’ ಎಂಬಲ್ಲಿಂದ, ‘ಇಷ್ಟೊಂದು ಪೊಲಿಟಿಕ್ಸ್ ಬೇಕಾ?’ ಎಂಬವರೆಗೆ ಭಿನ್ನವಾದ ಅಭಿಪ್ರಾಯಗಳು ಬಂದಿವೆ. ಖಾಸಗಿ ಪ್ರಸಾರದ ಪತ್ರಿಕೆಯಾದ್ದರಿಂದ ಸದ್ಯಕ್ಕೆ ಸ್ಟಾಂಡ್ ಮಾರಾಟ ಸಾಧ್ಯವಿಲ್ಲ; ಆದರೆ ಪೋಸ್ಟ್‍ನಲ್ಲಿ (ಪೋಸ್ಟಲ್ ರಿಯಾಯಿತಿಯೂ ಇಲ್ಲದೇ) ಕಳಿಸಿದ್ದು ತಲುಪುತ್ತಿಲ್ಲ ಎಂಬ ದೂರು ಇದೆ. ಇವೆಲ್ಲವೂ ಹಿಂದಿನಿಂದಲೂ ಇದ್ದಂಥದ್ದೇ.
ಮಾರುಕಟ್ಟೆಯ ಅಧ್ಯಯನ ಹೇಳುವುದೇ ಬೇರೆ. ಈಗ ಡಜನ್‍ಗಟ್ಟಲೆ ಸುದ್ದಿ ಚಾನೆಲ್‍ಗಳಿವೆ. ಅಲ್ಲದೆ ದಿನಪತ್ರಿಕೆಗಳೇ ಟ್ಯಾಬ್ಲಾಯ್ಡ್ ರೀತಿಯ ಶೈಲಿಯಲ್ಲಿ ಬರತೊಡಗಿದ ಮೇಲೆ ಎಲ್ಲಾ ಟ್ಯಾಬ್ಲಾಯ್ಡ್‍ಗಳ ಪ್ರಸಾರವೂ ಕಡಿಮೆಯಾಗುತ್ತಾ ಸಾಗಿದೆ. ಇದೀಗ (ನಮ್ಮ ಮ್ಯಾನೇಜರ್ ಪ್ರಕಾರ – ಟಿವಿ ಸೀರಿಯಲ್‍ಗಳು ಹೆಚ್ಚಾದ ಮೇಲೆ) ಕೌಟುಂಬಿಕ ನಿಯತಕಾಲಿಕಗಳ ಪ್ರಸಾರವೂ ಗಣನೀಯವಾಗಿ ಇಳಿದುಹೋಗಿದೆ. ಏನು ಬೇಕೋ ಎಲ್ಲವೂ ಅವರವರ ಸ್ಮಾರ್ಟ್ ಫೋನ್‍ನಲ್ಲೇ ಲಭ್ಯ. ಹೀಗೆ ಟ್ಯಾಬ್ಲಾಯ್ಡ್ ಪತ್ರಿಕೋದ್ಯಮ ಸಂಕೀರ್ಣ ಸವಾಲುಗಳನ್ನು ಎದುರಿಸುತ್ತಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಬೇಕೆಂದರೆ ಪತ್ರಿಕೆಯ ಸ್ವರೂಪ, ಹೂರಣ, ಧೋರಣೆ, ಭಾಷೆ ಏನಿರಬೇಕು ಎಂಬ ಕುರಿತು ಓದುಗರಾದ ಮತ್ತು ಗೌರಿಯವರ ಬಳಗದ ಭಾಗವೂ ಆದ ನಿಮ್ಮನ್ನೇ ಕೇಳಬೇಕೆಂದುಕೊಂಡಿದ್ದೇವೆ.
ಸದ್ಯದಲ್ಲೇ ಈ ಪತ್ರಿಕೆಯು ಪೂರ್ಣ ಪ್ರಮಾಣದಲ್ಲಿ ರೀಲಾಂಚ್ ಆಗಲಿದೆ. ಇಷ್ಟು ದಿನಗಳ ಅನುಭವದಿಂದ ನಮಗೂ (ಪತ್ರಿಕೆಯ ತಂಡಕ್ಕೂ) ಕೆಲವು ಅಭಿಪ್ರಾಯಗಳಿವೆ. ಆದರೆ, ಹೊಸ ಪತ್ರಿಕೆ/ವೆಬ್ ಮ್ಯಾಗಜೀನ್ ನಮ್ಮೆಲ್ಲರದ್ದೂ ಆಗಿದೆ. ಗೌರಿಯವರ ಆಶಯವನ್ನು ಮುಂದುವರೆಸಿಕೊಂಡು ಹೋಗಬೇಕೆಂದು ಬಯಸುವ ಎಲ್ಲರದ್ದೂ.. ಹಾಗಾಗಿ ಇದನ್ನು ರೂಪಿಸುವುದರಲ್ಲಿ ಹಾಗೂ ಮುಂದಕ್ಕೊಯ್ಯುವುದರಲ್ಲಿ ನಾವೆಲ್ಲರೂ ಜೊತೆಯಾಗಬೇಕು. ನಿಮಗೆ ಪತ್ರಿಕೆ ಹೇಗೆ ಬಂದರೆ ಚೆನ್ನ ಅನಿಸುತ್ತದೆ ಎಂಬುದನ್ನೂ ತಿಳಿಸಿ, ಮಾರುಕಟ್ಟೆಯಲ್ಲಿ ವಿಶಿಷ್ಟ ಛಾಪು ಮೂಡಿಸಬೇಕೆಂದರೆ ಏನು ಮಾಡಬೇಕೆಂಬುದನ್ನೂ ತಿಳಿಸಿ.
ನಮ್ಮ ಕಚೇರಿಯ ವಿಳಾಸಕ್ಕೆ (ಕಡೆಯ ಪುಟದ ಕೆಳಭಾಗದಲ್ಲಿ ಲಭ್ಯ) ಪತ್ರ ಬರೆಯಬಹುದು, 9880302817 ಈ ನಂಬರ್‍ಗೆ ವಾಟ್ಸಾಪ್ ಮಾಡಬಹುದು, ಇಲ್ಲವೇ ನಮ್ಮ ಫೇಸ್‍ಬುಕ್ ಪುಟ ‘Naanu Gauri magazine ನಾನು ಗೌರಿ ಪತ್ರಿಕೆ’ಯಲ್ಲಿ ತಿಳಿಸಬಹುದು ಅಥವಾ [email protected] ಗೆ ಇ-ಮೇಲ್ ಸಹಾ ಮಾಡಬಹುದು. ನಿಮ್ಮ ಪ್ರತಿಕ್ರಿಯೆಗಾಗಿ ಎದುರು ನೋಡುತ್ತಿರುತ್ತೇವೆ.

– ಸಂಪಾದಕ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...