HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...