HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...