HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...