HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...