HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...