HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...