HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...