Homeಕರ್ನಾಟಕಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌'ನಂತಹ ಸಿನಿಮಾ ಮಾಡಲು ಕೈ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

- Advertisement -
- Advertisement -

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು ‘ಲ್ಯಾಂಡ್‍ಲಾರ್ಡ್’ ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು.

ಗುರುವಾರ (ಜ.29) ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಗೌರಿ ಮೀಡಿಯಾ ಟ್ರಸ್ಟ್ ವತಿಯಿಂದ ಗೌರಿ ಲಂಕೇಶ್ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ‘ನಾವೆಲ್ಲ ಗೌರಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೋರಾಟವನ್ನು ಯಾರೂ ನಿಲ್ಲಿಸಲಿಕ್ಕೆ ಆಗುವುದಿಲ್ಲ, ಅದನ್ನು ನಿಲ್ಲಿಸುವುದೂ ಇಲ್ಲ. ನಾನು ಇಲ್ಲ ಎಂದರೆ ಇನ್ನೊಬ್ಬರು, ಇನ್ನೊಬ್ಬರು ಇಲ್ಲ ಎಂದರೆ ಮತ್ತೊಬ್ಬರು ಬರುತ್ತಾ ಇರುತ್ತಾರೆ ಎಂದು ವಿಜಯ್ ಹೇಳಿದರು.

ನಾನು ಜಿಮ್ ಟ್ರೈನರ್ ಆಗಿದ್ದಾಗ 1,500 ರೂ.ಸಂಬಳ. ಪ್ರತಿ ತಿಂಗಳು ಗೌರಿ ಲಂಕೇಶ್ ಅವರು ನನಗೆ 500ರೂ. ಹೆಚ್ಚು ಕೊಡುತ್ತಿದ್ದರು. ಆವಾಗ ನನಗೆ 500ರೂ. 5 ಕೋಟಿ ರೂ.ಗಳಿಗೆ ಸಮವಾಗಿತ್ತು ಎಂದು ವಿಜಯ್ ನೆನಪು ಮಾಡಿಕೊಂಡರು.

ಅಂಕಣಕಾರ ಶಿವಸುಂದರ್ ಮಾತನಾಡಿ, ಪತ್ರಕರ್ತೆ ಗೌರಿ ಲಂಕೇಶ್ ಅವರು ಶೋಷಣೆಯನ್ನು ಅನುಭವಿಸಿ ಬಂದವರಲ್ಲ. ಆದರೆ, ಚಳವಳಿಗೆ ಬಂದ ನಂತರ ಅವರು ಬಹಿರಂಗದ ಮೌಲ್ಯವನ್ನು ಅಂತರಂಗಕ್ಕೆ ಇಳಿಸಿಕೊಂಡ ವಿಧಾನ ನಮ್ಮೆಲ್ಲರಿಗೂ ಮಾದರಿ. ಅವರು ಸಮಾಜವನ್ನು ಬದಲಿಸಬೇಕು ಎಂದುಕೊಂಡವರಿಗೆ ಬಹಳ ದೊಡ್ಡ ಮಾದರಿ ಎಂದರು.

ಗೌರಿ ಲಂಕೇಶ್ ಅವರ ಬಗ್ಗೆ ಮಾತನಾಡುವಾಗ ಅತ್ಯಂತ ಬಾವುಕನಾಗುತ್ತೇನೆ. ನನ್ನಂತಹ ಸಾಮಾಜಿಕ ಹಿನ್ನೆಲೆಯಿಂದ ಬಂದ, ಯಾವುದೇ ಬಗೆಯ ವ್ಯಕ್ತಿಗತ ಶೋಷಣೆಯ ಅನುಭವ ಪಡೆಯದೇ ಇರುವುವರು ಮಾತನಾಡುವುದು ಸುಲಭ, ಆದರೆ ಅದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಅವರು ಹೇಳಿದರು.

ಬದಲಾವಣೆಯ ಪ್ರಶ್ನೆ ಬಂದಾಗ ತನ್ನ ಬಗ್ಗೆ ಹಾಗೂ ಶತ್ರು, ಮಿತ್ರರ ಬಗ್ಗೆಯೂ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ಅವರು ತಿಳಿಸಿದರು.

ಚಲನಚಿತ್ರ ನಿರ್ದೇಶಕಿ ಹಾಗೂ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಮಾತನಾಡಿ, ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ಪ್ರಶಸ್ತಿ ಕೊಡುತ್ತಿದ್ದೆವು. ಸುಮಾರು ವರ್ಷದಿಂದ ಅದನ್ನು ನಿಲ್ಲಿಸಲಾಗಿತ್ತು. ಅದನ್ನು ಮತ್ತೆ ಪ್ರಾರಂಭಿಸಬೇಕು. ಸ್ವತಂತ್ರ ಪತ್ರಿಕೋದ್ಯಮದ ಉಳಿವಿಗಾಗಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಎಂದು ಕೊಂಡಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷ ಪ್ರೊ.ನಗರಗೆರೆ ರಮೇಶ್, ಕಾರ್ಯದರ್ಶಿ ರಾಜಲಕ್ಷ್ಮೀ ಅಂಕಲಗಿ, ಹೋರಾಟಗಾರ ನೂರ್ ಶ್ರೀಧರ್, ಗೌರಿ ಲಂಕೇಶ್ ನ್ಯಾಯಪಥ ಪತ್ರಿಕೆಯ ಸಂಪಾದಕ ಗರುಪ್ರಸಾದ್, ಗೌರಿ ಮೀಡಿಯಾ ಟ್ರಸ್ಟ್‌ನ ಅರುಣ್ ಕುಮಾರ್, ಪತ್ರಕರ್ತ ಚಂದ್ರು ತರಹುಣಸೆ ಹಾಗೂ ಅಪಾರ ಸಂಖ್ಯೆಯಲ್ಲಿ ಗೌರಿ ಒಡನಾಡಿಗಳು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...