Homeಕರ್ನಾಟಕಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌'ನಂತಹ ಸಿನಿಮಾ ಮಾಡಲು ಕೈ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

- Advertisement -
- Advertisement -

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು ‘ಲ್ಯಾಂಡ್‍ಲಾರ್ಡ್’ ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು.

ಗುರುವಾರ (ಜ.29) ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಗೌರಿ ಮೀಡಿಯಾ ಟ್ರಸ್ಟ್ ವತಿಯಿಂದ ಗೌರಿ ಲಂಕೇಶ್ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ‘ನಾವೆಲ್ಲ ಗೌರಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೋರಾಟವನ್ನು ಯಾರೂ ನಿಲ್ಲಿಸಲಿಕ್ಕೆ ಆಗುವುದಿಲ್ಲ, ಅದನ್ನು ನಿಲ್ಲಿಸುವುದೂ ಇಲ್ಲ. ನಾನು ಇಲ್ಲ ಎಂದರೆ ಇನ್ನೊಬ್ಬರು, ಇನ್ನೊಬ್ಬರು ಇಲ್ಲ ಎಂದರೆ ಮತ್ತೊಬ್ಬರು ಬರುತ್ತಾ ಇರುತ್ತಾರೆ ಎಂದು ವಿಜಯ್ ಹೇಳಿದರು.

ನಾನು ಜಿಮ್ ಟ್ರೈನರ್ ಆಗಿದ್ದಾಗ 1,500 ರೂ.ಸಂಬಳ. ಪ್ರತಿ ತಿಂಗಳು ಗೌರಿ ಲಂಕೇಶ್ ಅವರು ನನಗೆ 500ರೂ. ಹೆಚ್ಚು ಕೊಡುತ್ತಿದ್ದರು. ಆವಾಗ ನನಗೆ 500ರೂ. 5 ಕೋಟಿ ರೂ.ಗಳಿಗೆ ಸಮವಾಗಿತ್ತು ಎಂದು ವಿಜಯ್ ನೆನಪು ಮಾಡಿಕೊಂಡರು.

ಅಂಕಣಕಾರ ಶಿವಸುಂದರ್ ಮಾತನಾಡಿ, ಪತ್ರಕರ್ತೆ ಗೌರಿ ಲಂಕೇಶ್ ಅವರು ಶೋಷಣೆಯನ್ನು ಅನುಭವಿಸಿ ಬಂದವರಲ್ಲ. ಆದರೆ, ಚಳವಳಿಗೆ ಬಂದ ನಂತರ ಅವರು ಬಹಿರಂಗದ ಮೌಲ್ಯವನ್ನು ಅಂತರಂಗಕ್ಕೆ ಇಳಿಸಿಕೊಂಡ ವಿಧಾನ ನಮ್ಮೆಲ್ಲರಿಗೂ ಮಾದರಿ. ಅವರು ಸಮಾಜವನ್ನು ಬದಲಿಸಬೇಕು ಎಂದುಕೊಂಡವರಿಗೆ ಬಹಳ ದೊಡ್ಡ ಮಾದರಿ ಎಂದರು.

ಗೌರಿ ಲಂಕೇಶ್ ಅವರ ಬಗ್ಗೆ ಮಾತನಾಡುವಾಗ ಅತ್ಯಂತ ಬಾವುಕನಾಗುತ್ತೇನೆ. ನನ್ನಂತಹ ಸಾಮಾಜಿಕ ಹಿನ್ನೆಲೆಯಿಂದ ಬಂದ, ಯಾವುದೇ ಬಗೆಯ ವ್ಯಕ್ತಿಗತ ಶೋಷಣೆಯ ಅನುಭವ ಪಡೆಯದೇ ಇರುವುವರು ಮಾತನಾಡುವುದು ಸುಲಭ, ಆದರೆ ಅದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಅವರು ಹೇಳಿದರು.

ಬದಲಾವಣೆಯ ಪ್ರಶ್ನೆ ಬಂದಾಗ ತನ್ನ ಬಗ್ಗೆ ಹಾಗೂ ಶತ್ರು, ಮಿತ್ರರ ಬಗ್ಗೆಯೂ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ಅವರು ತಿಳಿಸಿದರು.

ಚಲನಚಿತ್ರ ನಿರ್ದೇಶಕಿ ಹಾಗೂ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಮಾತನಾಡಿ, ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ಪ್ರಶಸ್ತಿ ಕೊಡುತ್ತಿದ್ದೆವು. ಸುಮಾರು ವರ್ಷದಿಂದ ಅದನ್ನು ನಿಲ್ಲಿಸಲಾಗಿತ್ತು. ಅದನ್ನು ಮತ್ತೆ ಪ್ರಾರಂಭಿಸಬೇಕು. ಸ್ವತಂತ್ರ ಪತ್ರಿಕೋದ್ಯಮದ ಉಳಿವಿಗಾಗಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಎಂದು ಕೊಂಡಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷ ಪ್ರೊ.ನಗರಗೆರೆ ರಮೇಶ್, ಕಾರ್ಯದರ್ಶಿ ರಾಜಲಕ್ಷ್ಮೀ ಅಂಕಲಗಿ, ಹೋರಾಟಗಾರ ನೂರ್ ಶ್ರೀಧರ್, ಗೌರಿ ಲಂಕೇಶ್ ನ್ಯಾಯಪಥ ಪತ್ರಿಕೆಯ ಸಂಪಾದಕ ಗರುಪ್ರಸಾದ್, ಗೌರಿ ಮೀಡಿಯಾ ಟ್ರಸ್ಟ್‌ನ ಅರುಣ್ ಕುಮಾರ್, ಪತ್ರಕರ್ತ ಚಂದ್ರು ತರಹುಣಸೆ ಹಾಗೂ ಅಪಾರ ಸಂಖ್ಯೆಯಲ್ಲಿ ಗೌರಿ ಒಡನಾಡಿಗಳು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...