Homeಮುಖಪುಟಗೌರಿ ಲಂಕೇಶ್ ಅಭಿನಯಿಸಿರುವ ‘ಜೋರ್ಡಾನ್’ ಚಿತ್ರ ಈ ವಾರ ತೆರೆಗೆ

ಗೌರಿ ಲಂಕೇಶ್ ಅಭಿನಯಿಸಿರುವ ‘ಜೋರ್ಡಾನ್’ ಚಿತ್ರ ಈ ವಾರ ತೆರೆಗೆ

ಗೌರಿ ಲಂಕೇಶ್‌ರವರು ಈ ಮುನ್ನ ಲೇಖಕ ಯೋಗೇಶ್ ಮಾಸ್ಟರ್ ನಿರ್ದೇಶನದ ಮರಳಿ ಮನೆಗೆ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಅಭಿನಯಿಸಿದ್ದರು.

- Advertisement -
- Advertisement -

ದಿಟ್ಟ ಪರ್ತಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ಗೌರಿಲಂಕೇಶ್‌ರವರು ಹತ್ಯೆಯಾಗಿ 5 ವರ್ಷಗಳಾಗಿವೆ. ಅವರು ಬದುಕಿದ್ದಾಗ ಅಭಿನಯಿಸಿದ್ದ ‘ಜೋರ್ಡಾನ್’ ಕನ್ನಡ ಚಲನಚಿತ್ರವು ಜನವರಿ 30 ರಂದು ಬಿಡುಗಡೆಯಾಗುತ್ತಿದೆ.

ಈ ಚಿತ್ರದಲ್ಲಿ ಗೌರಿ ಲಂಕೇಶ್‌ರವರು ಅಂಚಿಗೆ ತಳ್ಳಲ್ಪಟ್ಟ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ ಎನ್‌ಜಿಓ ಸ್ಥಾಪಕಿ ಲಕ್ಷ್ಮಿ ಶ್ರೀವತ್ಸ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಖಾಸಗಿ ಶಾಲೆಗಳ ದುಬಾರಿ ಶಿಕ್ಷಣ ಕೈಗೆಟುಕದ ಮಕ್ಕಳಿಗೆ ಶಿಕ್ಷಣ ನೀಡುವುದಕ್ಕಾಗಿ ಗೌರಿ ಲಂಕೇಶ್ ಖಾಸಗಿ ಶಾಲೆಯೊಂದನ್ನು ತೆರೆಯುತ್ತಾರೆ. ಈ ಸಂದರ್ಭದಲ್ಲಿ ಅವರು ಎದುರಿಸುವ ಸಮಸ್ಯೆಗಳನ್ನು ಬಗೆಹರಿಸಲು ಚಿತ್ರದ ನಾಯಕ ಮೈಕಲ್ ಎಂಬ ಯುವಕ ಕೈಜೋಡಿಸುತ್ತಾರೆ. ಜೋರ್ಡಾನ್ ಚಿತ್ರವು ಸ್ಲಂನಲ್ಲಿ ವಾಸಿಸುವ 12 ವರ್ಷದ ಬಾಲಕನ ಸುತ್ತ ಹೆಣೆದಿದ್ದು, ತಳಸಮುದಾಯದ ಸಮಸ್ಯೆಗಳತ್ತ ಬೆಳಕು ಚೆಲ್ಲುತ್ತದೆ.

ವಿನೋದ್ ಧಯಾಳನ್ ನಿರ್ದೇಶನದ ಈ ಚಿತ್ರವು ಅಮೆರಿಕದ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡಾನ್ ಪ್ರೇರಣೆಯಿಂದ ಚಿತ್ರಕ್ಕೆ ಜೋರ್ಡಾನ್ ಎಂದು ಹೆಸರಿಟ್ಟಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಹೇಂದ್ರ ಪ್ರಸಾದ್ ನಾಯಕನಾಗಿ ಅಭಿನಯಿಸಿದ್ದಾರೆ. ಸಂಪತ್ ಮೈತ್ರೇಯ ಮತ್ತು ಸಿತಾರ ಸಹ ಚಿತ್ರದಲ್ಲಿದ್ದಾರೆ.

ಗೌರಿ ಲಂಕೇಶ್‌ರವರು ಈ ಮುನ್ನ ಲೇಖಕ ಯೋಗೇಶ್ ಮಾಸ್ಟರ್ ನಿರ್ದೇಶನದ ಮರಳಿ ಮನೆಗೆ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಅಭಿನಯಿಸಿದ್ದರು. ಜೋರ್ಡಾನ್ ಅವರ ಎರಡನೇ ಚಿತ್ರವಾಗಿದ್ದು ದುರಾದೃಷ್ಟವಶಾತ್ ಅವರನ್ನು ನೋಡುವ ಕೊನೆಯ ಚಿತ್ರವೂ ಆಗಿದೆ.

ಇದನ್ನೂ ಓದಿ: ‘ವಂಡರ್‌ ವುಮೆನ್‌’: ತಾಯ್ತನದ ಸುಖ-ದುಃಖದ ಸುತ್ತಲಿನ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...