Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...