Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...