Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...