Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...