Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...