Homeಮುಖಪುಟಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

ಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

- Advertisement -
- Advertisement -

2022ರ ಸೆಪ್ಟೆಂಬರ್‌ 5ಕ್ಕೆ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆಯಾಗಿ ಐದು ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಅಂದು ಬೆಂಗಳೂರಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌  ‘ಗೌರಿ ನೆನಪು’ ಕಾರ್ಯಕ್ರಮ ಆಯೋಜಿಸಲಾಗಿದೆ.

ಸೆಪ್ಟೆಂಬರ್ 05 ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್ ಸಮಾಧಿ ಬಳಿ ನಮನ ಕಾರ್ಯಕ್ರಮ ನಡೆಯಲಿದೆ. ಆನಂತರ ಸಂಜೆ 5 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜು ಪಕ್ಕದ ಸ್ಕೌಟ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಗೌರಿ ನೆನಪಿನ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಬಹುಭಾಷ ನಟ ಪ್ರಕಾಶ್ ರಾಜ್ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತ ಮೊಹಮ್ಮದ್ ಝಬೇರ್ ಭಾಗವಹಿಸಲಿದ್ದಾರೆ. ಅಲ್ಲದೇ ಭಾಷಾತಜ್ಞರಾದ ಡಾ.ಜಿ.ಎನ್ ದೇವಿ, ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್, ಪೆಡೆಸ್ಟ್ರಿಯನ್ ಪಿಕ್ಚರ್ಸ್‌ ನ ದೀಪು, ಪ್ರೊ.ವಿ.ಎಸ್ ಶ್ರೀಧರರವರು ಉಪಸ್ಥಿತರಿರುತ್ತಾರೆ  ಎಂದು ಟ್ರಸ್ಟ್‌ ಹೇಳಿಕೆಯಲ್ಲಿ ತಿಳಿಸಿದೆ.

ಅರುಂಧತಿ ರಾಯ್ ಕುರಿತು

‘ದ ಗಾಡ್ ಆಫ್‌ ಸ್ಮಾಲ್‌ ಥಿಂಕ್ಸ್‌’ ಕೃತಿಗೆ ಬೂಕರ್‌ ಪ್ರಶಸ್ತಿ ಪಡೆದಿರುವ ಖ್ಯಾತ ಬರಹಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾಗತೀಕರಣ ವಿರೋಧಿ ಹೋರಾಟದಲ್ಲಿ, ನರ್ಮದಾ ಉಳಿವು ಚಳವಳಿ ಸೇರಿದಂತೆ ಎಲ್ಲ ಪ್ರಗತಿಪರ ಧಾರೆಗಳಲ್ಲಿ ಗುರುತಿಸಿಕೊಂಡವರು  ಅರುಂಧತಿ ರಾಯ್‌. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ‘ಜಾತಿ ವಿನಾಶ’ ಕೃತಿಗೆ ರಾಯ್ ಅವರು ಬರೆದ ಪರಿಚಯ ಬರಹ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕಾಶ್ ರಾಜ್

ಬಹುಭಾಷಾ ನಟರಾದ ಪ್ರಕಾಶ್ ರಾಜ್‌ ಕನ್ನಡ ಮಣ್ಣಿನ ಅಪ್ಪಟ ಪ್ರತಿಭೆ. ಪ್ರಭುತ್ವ ತಾಳುವ ತಾರತಮ್ಯ, ಜನಾಂಗೀಯ ನೀತಿಗಳ ವಿರುದ್ಧ ದಿಟ್ಟವಾಗಿ ಪ್ರಶ್ನಿಸುವ ನಟರಲ್ಲಿ ಪ್ರಕಾಶ್ ರಾಜ್‌ ಕೂಡ ಒಬ್ಬರು. ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ನಿರಂತರವಾಗಿ ಜನವಿರೋಧಿ ನೀತಿಗಳನ್ನು ಖಂಡಿಸುತ್ತಿರುವ ಪ್ರಕಾಶ್‌ ರಾಜ್ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಮೊಹಮ್ಮದ್ ಝುಬೇರ್

ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್ ಝುಬೇರ್‌ ಅವರು ಭಾಗವಹಿಸುತ್ತಿದ್ದಾರೆ. ಗೌರಿಯವರ ಆಶಯಗಳನ್ನು ಉಸಿರಾಡುತ್ತಿರುವ ಅಸಂಖ್ಯಾತ ಪತ್ರಕರ್ತರಲ್ಲಿ ಜುಬೇರ್‌ ಅವರೂ ಒಬ್ಬರು. ಮೂಲತಃ ಕರ್ನಾಟಕದವರಾದ ಅವರು, ಫ್ಯಾಕ್ಟ್‌ಚೆಕ್‌ಗೆ ಹೆಸರಾದ ಆಲ್ಟ್‌ನ್ಯೂಸ್‌ ಜಾಲತಾಣದ ಸಹಸಂಸ್ಥಾಪಕರೂ ಹೌದು. ಕೋಮುದ್ವೇಷ ಪ್ರಕರಣಗಳನ್ನು ನಿರಂತರವಾಗಿ ಬಯಲಿಗೆಳೆಯುವಲ್ಲಿ ಸಕ್ರಿಯವಾಗಿರುವ ಜುಬೇರ್, ಇತ್ತೀಚೆಗೆ ಪ್ರಭುತ್ವದ ಕಿರುಕುಳವನ್ನು ಅನುಭವಿಸಿದವರು.

ಇದನ್ನೂ ಓದಿ: ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...