Homeಮುಖಪುಟಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

ಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

- Advertisement -
- Advertisement -

2022ರ ಸೆಪ್ಟೆಂಬರ್‌ 5ಕ್ಕೆ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆಯಾಗಿ ಐದು ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಅಂದು ಬೆಂಗಳೂರಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌  ‘ಗೌರಿ ನೆನಪು’ ಕಾರ್ಯಕ್ರಮ ಆಯೋಜಿಸಲಾಗಿದೆ.

ಸೆಪ್ಟೆಂಬರ್ 05 ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್ ಸಮಾಧಿ ಬಳಿ ನಮನ ಕಾರ್ಯಕ್ರಮ ನಡೆಯಲಿದೆ. ಆನಂತರ ಸಂಜೆ 5 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜು ಪಕ್ಕದ ಸ್ಕೌಟ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಗೌರಿ ನೆನಪಿನ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಬಹುಭಾಷ ನಟ ಪ್ರಕಾಶ್ ರಾಜ್ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತ ಮೊಹಮ್ಮದ್ ಝಬೇರ್ ಭಾಗವಹಿಸಲಿದ್ದಾರೆ. ಅಲ್ಲದೇ ಭಾಷಾತಜ್ಞರಾದ ಡಾ.ಜಿ.ಎನ್ ದೇವಿ, ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್, ಪೆಡೆಸ್ಟ್ರಿಯನ್ ಪಿಕ್ಚರ್ಸ್‌ ನ ದೀಪು, ಪ್ರೊ.ವಿ.ಎಸ್ ಶ್ರೀಧರರವರು ಉಪಸ್ಥಿತರಿರುತ್ತಾರೆ  ಎಂದು ಟ್ರಸ್ಟ್‌ ಹೇಳಿಕೆಯಲ್ಲಿ ತಿಳಿಸಿದೆ.

ಅರುಂಧತಿ ರಾಯ್ ಕುರಿತು

‘ದ ಗಾಡ್ ಆಫ್‌ ಸ್ಮಾಲ್‌ ಥಿಂಕ್ಸ್‌’ ಕೃತಿಗೆ ಬೂಕರ್‌ ಪ್ರಶಸ್ತಿ ಪಡೆದಿರುವ ಖ್ಯಾತ ಬರಹಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾಗತೀಕರಣ ವಿರೋಧಿ ಹೋರಾಟದಲ್ಲಿ, ನರ್ಮದಾ ಉಳಿವು ಚಳವಳಿ ಸೇರಿದಂತೆ ಎಲ್ಲ ಪ್ರಗತಿಪರ ಧಾರೆಗಳಲ್ಲಿ ಗುರುತಿಸಿಕೊಂಡವರು  ಅರುಂಧತಿ ರಾಯ್‌. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ‘ಜಾತಿ ವಿನಾಶ’ ಕೃತಿಗೆ ರಾಯ್ ಅವರು ಬರೆದ ಪರಿಚಯ ಬರಹ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕಾಶ್ ರಾಜ್

ಬಹುಭಾಷಾ ನಟರಾದ ಪ್ರಕಾಶ್ ರಾಜ್‌ ಕನ್ನಡ ಮಣ್ಣಿನ ಅಪ್ಪಟ ಪ್ರತಿಭೆ. ಪ್ರಭುತ್ವ ತಾಳುವ ತಾರತಮ್ಯ, ಜನಾಂಗೀಯ ನೀತಿಗಳ ವಿರುದ್ಧ ದಿಟ್ಟವಾಗಿ ಪ್ರಶ್ನಿಸುವ ನಟರಲ್ಲಿ ಪ್ರಕಾಶ್ ರಾಜ್‌ ಕೂಡ ಒಬ್ಬರು. ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ನಿರಂತರವಾಗಿ ಜನವಿರೋಧಿ ನೀತಿಗಳನ್ನು ಖಂಡಿಸುತ್ತಿರುವ ಪ್ರಕಾಶ್‌ ರಾಜ್ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಮೊಹಮ್ಮದ್ ಝುಬೇರ್

ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್ ಝುಬೇರ್‌ ಅವರು ಭಾಗವಹಿಸುತ್ತಿದ್ದಾರೆ. ಗೌರಿಯವರ ಆಶಯಗಳನ್ನು ಉಸಿರಾಡುತ್ತಿರುವ ಅಸಂಖ್ಯಾತ ಪತ್ರಕರ್ತರಲ್ಲಿ ಜುಬೇರ್‌ ಅವರೂ ಒಬ್ಬರು. ಮೂಲತಃ ಕರ್ನಾಟಕದವರಾದ ಅವರು, ಫ್ಯಾಕ್ಟ್‌ಚೆಕ್‌ಗೆ ಹೆಸರಾದ ಆಲ್ಟ್‌ನ್ಯೂಸ್‌ ಜಾಲತಾಣದ ಸಹಸಂಸ್ಥಾಪಕರೂ ಹೌದು. ಕೋಮುದ್ವೇಷ ಪ್ರಕರಣಗಳನ್ನು ನಿರಂತರವಾಗಿ ಬಯಲಿಗೆಳೆಯುವಲ್ಲಿ ಸಕ್ರಿಯವಾಗಿರುವ ಜುಬೇರ್, ಇತ್ತೀಚೆಗೆ ಪ್ರಭುತ್ವದ ಕಿರುಕುಳವನ್ನು ಅನುಭವಿಸಿದವರು.

ಇದನ್ನೂ ಓದಿ: ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...