Homeಕರ್ನಾಟಕಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌, ಏಳನೇ ಆರೋಪಿ ಸುರೇಶ್‌ ಹೆಚ್‌.ಎಲ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಸಲ್ಲಿಸಿರುವ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುವುದು ಎಲ್ಲಾ ಅರ್ಜಿದಾರರ ವಾದವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠ ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು” ಎಂದಿದೆ.

“ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಅದು ವಿಚಾರಣೆಗೆ ಬಾಕಿಯಿದೆ” ಎಂದು ತಿಳಿಸಿದೆ.

ಆರೋಪಿ ಅಮಿತ್‌ ದಿಗ್ವೇಕರ್‌ ಪ್ರತಿನಿಧಿಸಿದ್ದ ವಕೀಲ ಬಸವರಾಜ ಸಪ್ಪಣ್ಣವರ್‌ ಅವರು “ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್‌ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಮಿತ್‌ರಿಂದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ, ಬಸ್‌ ಟಿಕೆಟ್‌ ಜಪ್ತಿ ಮಾಡಲಾಗಿದೆ. ಬೇರೆ ಏನೂ ಮಾಡಿಲ್ಲ. 2018ರ ಮೇ 21ರಿಂದ ಜೈಲಿನಲ್ಲಿದ್ದಾರೆ. 11ನೇ ಆರೋಪಿ ಮೋಹನ್‌ ನಾಯಕ್‌ಗೆ ನೀಡಿರುವಂತೆ ಅಮಿತ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಆರೋಪಿ ಕೆ.ಟಿ ನವೀನ್‌ ಕುಮಾರ್‌ನನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು “13ನೇ ಆರೋಪಿ ಸುಜಿತ್‌ ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನಿಂದ ಸಿಮ್‌ ಕಾರ್ಡ್‌ ವಶಪಡಿಸಲಾಗಿದೆ ಎಂದು ಹೇಳಲಾಗಿದೆ. ಸಿಮ್‌ ಕಾರ್ಡ್‌ ನೀಡಿದ ವ್ಯಕ್ತಿಯ ಹೆಸರು ನವೀನ್‌ ಕುಮಾರ್‌ ಆಗಿದ್ದು, ಅವರು ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದಾರೆ” ಎಂದರು.

ಮುಂದುವರಿದು, “ಮೊದಲಿಗೆ ಕೆ.ಟಿ ನವೀನ್‌ ಕುಮಾರ್‌ ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್‌ನನ್ನು ಬದಿಗೆ ಸರಿಸಲಾಗಿದೆ. ಮೆಜೆಸ್ಟಿಕ್‌ನಲ್ಲಿ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್‌ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್‌ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ” ಎಂದು ವಿವರಿಸಿದರು.

“2020ರ ಜನವರಿ 10ರಂದು ಮೊದಲ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕು ವರ್ಷಗಳ ಬಳಿಕ ಜಾಮೀನು ಕೋರುತ್ತಿದ್ದೇನೆ. ಆರೋಪ ನಿಗದಿಗೂ ಮುನ್ನ ಮತ್ತು ಮೂರನೇ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿದ್ದೆ. ಮೋಹನ್‌ ನಾಯಕ್‌ಗೆ ಜಾಮೀನು ನೀಡಿರುವುದನ್ನು ಪರಿಗಣಿಸಿ, ಪರಿಸ್ಥಿತಿ ಬದಲಾಗಿರುವುದರಿಂದ ಜಾಮೀನು ನೀಡಬೇಕು. ಒಟ್ಟಾರೆ, 527 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 2022ರ ಜುಲೈ 11ರಂದು ವಿಚಾರಣೆ ಆರಂಭವಾಗಿದ್ದು, ಎರಡು ವರ್ಷದಲ್ಲಿ 130 ಸಾಕ್ಷಿ ಮಾತ್ರ ವಿಚಾರಣೆ ನಡೆಸಲಾಗಿದೆ. ಆರೋಪಿಯು ಆರು ವರ್ಷದಿಂದ ಜೈಲಿನಲ್ಲಿದ್ದಾರೆ. ಆರೋಗ್ಯದ ಕಾರಣ ನೀಡಿ ಹಿಂದೆ ಜಾಮೀನು ಕೋರಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನ್ಯಾಯಾಲಯ ಅನುಮತಿಸಿತ್ತು” ಎಂದರು.

“ಇನ್ನೊಬ್ಬ ಆರೋಪಿ ಸುರೇಶ್‌ ಪ್ರತಿನಿಧಿಸಿದ್ದ ವಕೀಲ ಮಧುಕರ್‌ ದೇಶಪಾಂಡೆ “15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ. 2017ರ ಜುಲೈನಲ್ಲಿ ಸೀಗೆಹಳ್ಳಿ ಗೇಟ್‌ ಸಮೀಪ ಮನೆ ಬಾಡಿಗೆ ಪಡೆದು ಶಸ್ತ್ರಾಸ್ತ್ರ ಸಂಗ್ರಹ ಮಾಡಿರುವುದು ಮತ್ತು ಗೌರಿಯವರನ್ನು ಕೊಲ್ಲಲು ಶೂಟಿಂಗ್‌ ರಿಹರ್ಸಲ್‌ ನಡೆಸಲು ಬೈಕ್‌ ನೀಡಿದ್ದ ಆರೋಪ ಮಾಡಲಾಗಿದೆ. ಅಮೋಲ್‌ ಕಾಳೆ ಮತ್ತು ವಿಕಾಸ್‌ ಪಾಟೀಲ್‌ ಬೈಕ್‌ ರಿಹರ್ಸಲ್‌ ಮಾಡಿದ್ದಾರೆ. ಇಲ್ಲಿ ಸುರೇಶ್‌ ಪಾತ್ರವಿಲ್ಲ. ಸಾಕ್ಷ್ಯ ನಾಶ ಮಾಡಿದ ಗಂಭೀರ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧ ನಡೆಯುವಾಗ ಸುರೇಶ್‌ ಹೆರೂರಿನಲ್ಲಿದ್ದರು. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾಗಿ ಇದುವರೆಗೆ ವಿಚಾರಣೆ ನಡೆಸಿರುವ ಯಾರೂ ಸಾಕ್ಷ್ಯ ನುಡಿದಿಲ್ಲ” ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ “ಮೋಹನ್‌ ನಾಯಕ್‌ ವಿರುದ್ಧದ ಕೊಲೆ ಮತ್ತು ಪಿತೂರಿಗೆ ಸಾಕ್ಷಿ ಇದೆ ಎಂದು ಹೈಕೋರ್ಟ್‌ನ ಬೇರೊಂದು ಪೀಠವು (ನ್ಯಾ. ಬಿ ಎ ಪಾಟೀಲ್) ಜಾಮೀನು ತಿರಸ್ಕರಿಸಿದೆ. ತಾವು ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿರುವ ‌ ಆದೇಶವನ್ನು ಹಾಲಿ ಜಾಮೀನು ಅರ್ಜಿಗಳಿಗೆ ಅನ್ವಯಿಸಬಾರದು. ಮೋಹನ್‌ ನಾಯಕ್‌ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆಗೆ ಬಾಕಿ ಇದೆ” ಎಂದರು.

ಮುಂದುವರಿದು, “ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಆರೋಪ ಮುಕ್ತಿ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಅವುಗಳನ್ನು ಪ್ರಶ್ನಿಸಲಾಗಿಲ್ಲ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನ ಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್‌ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುವುದು ಜಾಮೀನಿಗೆ ಮಾನದಂಡವಾಗಬಾರದು” ಎಂದು ಹೇಳಿದರು.

“ಗೌರಿ ಹತ್ಯೆ ಕೊಲೆ ಮಾಡಿರುವ ಇಡೀ ಸಿಂಡಿಕೇಟ್‌ ಒಂದಲ್ಲಾ ಒಂದು ರೀತಿಯಲ್ಲಿ ಎಂ.ಎಂ ಕಲಬುರ್ಗಿ, ಗೋವಿಂದ ಪಾನ್ಸರೆ, ನರೇಂದ್ರ ದಾಭೋಲ್ಕರ್‌ ಕೊಲೆಯಲ್ಲೂ ಭಾಗಿಯಾಗಿದೆ. ಇದೇ ಸಿಂಡಿಕೇಟ್‌ ಅದರಲ್ಲೂ ಅರ್ಜಿದಾರರಾಗಿರುವ ಅಮಿತ್‌ ಮತ್ತು ನವೀನ್‌ ಕುಮಾರ್‌ ಪ್ರೊ. ಭಗವಾನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ” ಎಂದರು.

“ಮಡಿಕೇರಿ, ಬೆಳಗಾವಿ, ಮಂಗಳೂರಿನಲ್ಲಿ ಈ ಸಿಂಡಿಕೇಟ್‌ ಸಭೆ ನಡೆಸಿದೆ. ನಿಡುಮಾಮಿಡಿ ಸ್ವಾಮೀಜಿ, ಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಪ್ರೊ. ಭಗವಾನ್‌ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದಾರೆ. ಅರ್ಜಿದಾರ ಸುರೇಶ್‌ ಮನೆಯಲ್ಲಿ ಆರೋಪಿಗಳು ಉಳಿದುಕೊಳ್ಳಲು ಅವರ ಪತ್ನಿಯನ್ನು ತವರಿಗೆ ಕಳುಹಿಸುತ್ತಾರೆ. ಕೊಲೆ ಉದ್ದೇಶ ಮನೆಯವರಿಗೆ ಗೊತ್ತಾಗುತ್ತದೆ ಎಂದು ಅವರನ್ನು ಕಳುಹಿಸಲಾಗಿತ್ತೇ ವಿನಃ, ಅವರು ಹಬ್ಬಕ್ಕೆ ಹೋಗಿರಲಿಲ್ಲ. ಸೆಪ್ಟೆಂಬರ್‌ 5ರಂದು ಗೌರಿ ಕೊಲೆಯಾದ ಬಳಿಕ ಆರೋಪಿಗಳು ಸುರೇಶ್‌ ಮನೆ ಖಾಲಿ ಮಾಡುತ್ತಾರೆ” ಎಂದರು ವಿವರಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....