Homeಕರ್ನಾಟಕಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌, ಏಳನೇ ಆರೋಪಿ ಸುರೇಶ್‌ ಹೆಚ್‌.ಎಲ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಸಲ್ಲಿಸಿರುವ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುವುದು ಎಲ್ಲಾ ಅರ್ಜಿದಾರರ ವಾದವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠ ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು” ಎಂದಿದೆ.

“ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಅದು ವಿಚಾರಣೆಗೆ ಬಾಕಿಯಿದೆ” ಎಂದು ತಿಳಿಸಿದೆ.

ಆರೋಪಿ ಅಮಿತ್‌ ದಿಗ್ವೇಕರ್‌ ಪ್ರತಿನಿಧಿಸಿದ್ದ ವಕೀಲ ಬಸವರಾಜ ಸಪ್ಪಣ್ಣವರ್‌ ಅವರು “ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್‌ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಮಿತ್‌ರಿಂದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ, ಬಸ್‌ ಟಿಕೆಟ್‌ ಜಪ್ತಿ ಮಾಡಲಾಗಿದೆ. ಬೇರೆ ಏನೂ ಮಾಡಿಲ್ಲ. 2018ರ ಮೇ 21ರಿಂದ ಜೈಲಿನಲ್ಲಿದ್ದಾರೆ. 11ನೇ ಆರೋಪಿ ಮೋಹನ್‌ ನಾಯಕ್‌ಗೆ ನೀಡಿರುವಂತೆ ಅಮಿತ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಆರೋಪಿ ಕೆ.ಟಿ ನವೀನ್‌ ಕುಮಾರ್‌ನನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು “13ನೇ ಆರೋಪಿ ಸುಜಿತ್‌ ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನಿಂದ ಸಿಮ್‌ ಕಾರ್ಡ್‌ ವಶಪಡಿಸಲಾಗಿದೆ ಎಂದು ಹೇಳಲಾಗಿದೆ. ಸಿಮ್‌ ಕಾರ್ಡ್‌ ನೀಡಿದ ವ್ಯಕ್ತಿಯ ಹೆಸರು ನವೀನ್‌ ಕುಮಾರ್‌ ಆಗಿದ್ದು, ಅವರು ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದಾರೆ” ಎಂದರು.

ಮುಂದುವರಿದು, “ಮೊದಲಿಗೆ ಕೆ.ಟಿ ನವೀನ್‌ ಕುಮಾರ್‌ ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್‌ನನ್ನು ಬದಿಗೆ ಸರಿಸಲಾಗಿದೆ. ಮೆಜೆಸ್ಟಿಕ್‌ನಲ್ಲಿ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್‌ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್‌ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ” ಎಂದು ವಿವರಿಸಿದರು.

“2020ರ ಜನವರಿ 10ರಂದು ಮೊದಲ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕು ವರ್ಷಗಳ ಬಳಿಕ ಜಾಮೀನು ಕೋರುತ್ತಿದ್ದೇನೆ. ಆರೋಪ ನಿಗದಿಗೂ ಮುನ್ನ ಮತ್ತು ಮೂರನೇ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿದ್ದೆ. ಮೋಹನ್‌ ನಾಯಕ್‌ಗೆ ಜಾಮೀನು ನೀಡಿರುವುದನ್ನು ಪರಿಗಣಿಸಿ, ಪರಿಸ್ಥಿತಿ ಬದಲಾಗಿರುವುದರಿಂದ ಜಾಮೀನು ನೀಡಬೇಕು. ಒಟ್ಟಾರೆ, 527 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 2022ರ ಜುಲೈ 11ರಂದು ವಿಚಾರಣೆ ಆರಂಭವಾಗಿದ್ದು, ಎರಡು ವರ್ಷದಲ್ಲಿ 130 ಸಾಕ್ಷಿ ಮಾತ್ರ ವಿಚಾರಣೆ ನಡೆಸಲಾಗಿದೆ. ಆರೋಪಿಯು ಆರು ವರ್ಷದಿಂದ ಜೈಲಿನಲ್ಲಿದ್ದಾರೆ. ಆರೋಗ್ಯದ ಕಾರಣ ನೀಡಿ ಹಿಂದೆ ಜಾಮೀನು ಕೋರಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನ್ಯಾಯಾಲಯ ಅನುಮತಿಸಿತ್ತು” ಎಂದರು.

“ಇನ್ನೊಬ್ಬ ಆರೋಪಿ ಸುರೇಶ್‌ ಪ್ರತಿನಿಧಿಸಿದ್ದ ವಕೀಲ ಮಧುಕರ್‌ ದೇಶಪಾಂಡೆ “15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ. 2017ರ ಜುಲೈನಲ್ಲಿ ಸೀಗೆಹಳ್ಳಿ ಗೇಟ್‌ ಸಮೀಪ ಮನೆ ಬಾಡಿಗೆ ಪಡೆದು ಶಸ್ತ್ರಾಸ್ತ್ರ ಸಂಗ್ರಹ ಮಾಡಿರುವುದು ಮತ್ತು ಗೌರಿಯವರನ್ನು ಕೊಲ್ಲಲು ಶೂಟಿಂಗ್‌ ರಿಹರ್ಸಲ್‌ ನಡೆಸಲು ಬೈಕ್‌ ನೀಡಿದ್ದ ಆರೋಪ ಮಾಡಲಾಗಿದೆ. ಅಮೋಲ್‌ ಕಾಳೆ ಮತ್ತು ವಿಕಾಸ್‌ ಪಾಟೀಲ್‌ ಬೈಕ್‌ ರಿಹರ್ಸಲ್‌ ಮಾಡಿದ್ದಾರೆ. ಇಲ್ಲಿ ಸುರೇಶ್‌ ಪಾತ್ರವಿಲ್ಲ. ಸಾಕ್ಷ್ಯ ನಾಶ ಮಾಡಿದ ಗಂಭೀರ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧ ನಡೆಯುವಾಗ ಸುರೇಶ್‌ ಹೆರೂರಿನಲ್ಲಿದ್ದರು. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾಗಿ ಇದುವರೆಗೆ ವಿಚಾರಣೆ ನಡೆಸಿರುವ ಯಾರೂ ಸಾಕ್ಷ್ಯ ನುಡಿದಿಲ್ಲ” ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ “ಮೋಹನ್‌ ನಾಯಕ್‌ ವಿರುದ್ಧದ ಕೊಲೆ ಮತ್ತು ಪಿತೂರಿಗೆ ಸಾಕ್ಷಿ ಇದೆ ಎಂದು ಹೈಕೋರ್ಟ್‌ನ ಬೇರೊಂದು ಪೀಠವು (ನ್ಯಾ. ಬಿ ಎ ಪಾಟೀಲ್) ಜಾಮೀನು ತಿರಸ್ಕರಿಸಿದೆ. ತಾವು ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿರುವ ‌ ಆದೇಶವನ್ನು ಹಾಲಿ ಜಾಮೀನು ಅರ್ಜಿಗಳಿಗೆ ಅನ್ವಯಿಸಬಾರದು. ಮೋಹನ್‌ ನಾಯಕ್‌ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆಗೆ ಬಾಕಿ ಇದೆ” ಎಂದರು.

ಮುಂದುವರಿದು, “ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಆರೋಪ ಮುಕ್ತಿ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಅವುಗಳನ್ನು ಪ್ರಶ್ನಿಸಲಾಗಿಲ್ಲ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನ ಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್‌ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುವುದು ಜಾಮೀನಿಗೆ ಮಾನದಂಡವಾಗಬಾರದು” ಎಂದು ಹೇಳಿದರು.

“ಗೌರಿ ಹತ್ಯೆ ಕೊಲೆ ಮಾಡಿರುವ ಇಡೀ ಸಿಂಡಿಕೇಟ್‌ ಒಂದಲ್ಲಾ ಒಂದು ರೀತಿಯಲ್ಲಿ ಎಂ.ಎಂ ಕಲಬುರ್ಗಿ, ಗೋವಿಂದ ಪಾನ್ಸರೆ, ನರೇಂದ್ರ ದಾಭೋಲ್ಕರ್‌ ಕೊಲೆಯಲ್ಲೂ ಭಾಗಿಯಾಗಿದೆ. ಇದೇ ಸಿಂಡಿಕೇಟ್‌ ಅದರಲ್ಲೂ ಅರ್ಜಿದಾರರಾಗಿರುವ ಅಮಿತ್‌ ಮತ್ತು ನವೀನ್‌ ಕುಮಾರ್‌ ಪ್ರೊ. ಭಗವಾನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ” ಎಂದರು.

“ಮಡಿಕೇರಿ, ಬೆಳಗಾವಿ, ಮಂಗಳೂರಿನಲ್ಲಿ ಈ ಸಿಂಡಿಕೇಟ್‌ ಸಭೆ ನಡೆಸಿದೆ. ನಿಡುಮಾಮಿಡಿ ಸ್ವಾಮೀಜಿ, ಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಪ್ರೊ. ಭಗವಾನ್‌ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದಾರೆ. ಅರ್ಜಿದಾರ ಸುರೇಶ್‌ ಮನೆಯಲ್ಲಿ ಆರೋಪಿಗಳು ಉಳಿದುಕೊಳ್ಳಲು ಅವರ ಪತ್ನಿಯನ್ನು ತವರಿಗೆ ಕಳುಹಿಸುತ್ತಾರೆ. ಕೊಲೆ ಉದ್ದೇಶ ಮನೆಯವರಿಗೆ ಗೊತ್ತಾಗುತ್ತದೆ ಎಂದು ಅವರನ್ನು ಕಳುಹಿಸಲಾಗಿತ್ತೇ ವಿನಃ, ಅವರು ಹಬ್ಬಕ್ಕೆ ಹೋಗಿರಲಿಲ್ಲ. ಸೆಪ್ಟೆಂಬರ್‌ 5ರಂದು ಗೌರಿ ಕೊಲೆಯಾದ ಬಳಿಕ ಆರೋಪಿಗಳು ಸುರೇಶ್‌ ಮನೆ ಖಾಲಿ ಮಾಡುತ್ತಾರೆ” ಎಂದರು ವಿವರಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...