Homeಕರ್ನಾಟಕಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌, ಏಳನೇ ಆರೋಪಿ ಸುರೇಶ್‌ ಹೆಚ್‌.ಎಲ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಸಲ್ಲಿಸಿರುವ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುವುದು ಎಲ್ಲಾ ಅರ್ಜಿದಾರರ ವಾದವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠ ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು” ಎಂದಿದೆ.

“ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಅದು ವಿಚಾರಣೆಗೆ ಬಾಕಿಯಿದೆ” ಎಂದು ತಿಳಿಸಿದೆ.

ಆರೋಪಿ ಅಮಿತ್‌ ದಿಗ್ವೇಕರ್‌ ಪ್ರತಿನಿಧಿಸಿದ್ದ ವಕೀಲ ಬಸವರಾಜ ಸಪ್ಪಣ್ಣವರ್‌ ಅವರು “ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್‌ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಮಿತ್‌ರಿಂದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ, ಬಸ್‌ ಟಿಕೆಟ್‌ ಜಪ್ತಿ ಮಾಡಲಾಗಿದೆ. ಬೇರೆ ಏನೂ ಮಾಡಿಲ್ಲ. 2018ರ ಮೇ 21ರಿಂದ ಜೈಲಿನಲ್ಲಿದ್ದಾರೆ. 11ನೇ ಆರೋಪಿ ಮೋಹನ್‌ ನಾಯಕ್‌ಗೆ ನೀಡಿರುವಂತೆ ಅಮಿತ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಆರೋಪಿ ಕೆ.ಟಿ ನವೀನ್‌ ಕುಮಾರ್‌ನನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು “13ನೇ ಆರೋಪಿ ಸುಜಿತ್‌ ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನಿಂದ ಸಿಮ್‌ ಕಾರ್ಡ್‌ ವಶಪಡಿಸಲಾಗಿದೆ ಎಂದು ಹೇಳಲಾಗಿದೆ. ಸಿಮ್‌ ಕಾರ್ಡ್‌ ನೀಡಿದ ವ್ಯಕ್ತಿಯ ಹೆಸರು ನವೀನ್‌ ಕುಮಾರ್‌ ಆಗಿದ್ದು, ಅವರು ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದಾರೆ” ಎಂದರು.

ಮುಂದುವರಿದು, “ಮೊದಲಿಗೆ ಕೆ.ಟಿ ನವೀನ್‌ ಕುಮಾರ್‌ ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್‌ನನ್ನು ಬದಿಗೆ ಸರಿಸಲಾಗಿದೆ. ಮೆಜೆಸ್ಟಿಕ್‌ನಲ್ಲಿ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್‌ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್‌ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ” ಎಂದು ವಿವರಿಸಿದರು.

“2020ರ ಜನವರಿ 10ರಂದು ಮೊದಲ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕು ವರ್ಷಗಳ ಬಳಿಕ ಜಾಮೀನು ಕೋರುತ್ತಿದ್ದೇನೆ. ಆರೋಪ ನಿಗದಿಗೂ ಮುನ್ನ ಮತ್ತು ಮೂರನೇ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿದ್ದೆ. ಮೋಹನ್‌ ನಾಯಕ್‌ಗೆ ಜಾಮೀನು ನೀಡಿರುವುದನ್ನು ಪರಿಗಣಿಸಿ, ಪರಿಸ್ಥಿತಿ ಬದಲಾಗಿರುವುದರಿಂದ ಜಾಮೀನು ನೀಡಬೇಕು. ಒಟ್ಟಾರೆ, 527 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 2022ರ ಜುಲೈ 11ರಂದು ವಿಚಾರಣೆ ಆರಂಭವಾಗಿದ್ದು, ಎರಡು ವರ್ಷದಲ್ಲಿ 130 ಸಾಕ್ಷಿ ಮಾತ್ರ ವಿಚಾರಣೆ ನಡೆಸಲಾಗಿದೆ. ಆರೋಪಿಯು ಆರು ವರ್ಷದಿಂದ ಜೈಲಿನಲ್ಲಿದ್ದಾರೆ. ಆರೋಗ್ಯದ ಕಾರಣ ನೀಡಿ ಹಿಂದೆ ಜಾಮೀನು ಕೋರಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನ್ಯಾಯಾಲಯ ಅನುಮತಿಸಿತ್ತು” ಎಂದರು.

“ಇನ್ನೊಬ್ಬ ಆರೋಪಿ ಸುರೇಶ್‌ ಪ್ರತಿನಿಧಿಸಿದ್ದ ವಕೀಲ ಮಧುಕರ್‌ ದೇಶಪಾಂಡೆ “15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ. 2017ರ ಜುಲೈನಲ್ಲಿ ಸೀಗೆಹಳ್ಳಿ ಗೇಟ್‌ ಸಮೀಪ ಮನೆ ಬಾಡಿಗೆ ಪಡೆದು ಶಸ್ತ್ರಾಸ್ತ್ರ ಸಂಗ್ರಹ ಮಾಡಿರುವುದು ಮತ್ತು ಗೌರಿಯವರನ್ನು ಕೊಲ್ಲಲು ಶೂಟಿಂಗ್‌ ರಿಹರ್ಸಲ್‌ ನಡೆಸಲು ಬೈಕ್‌ ನೀಡಿದ್ದ ಆರೋಪ ಮಾಡಲಾಗಿದೆ. ಅಮೋಲ್‌ ಕಾಳೆ ಮತ್ತು ವಿಕಾಸ್‌ ಪಾಟೀಲ್‌ ಬೈಕ್‌ ರಿಹರ್ಸಲ್‌ ಮಾಡಿದ್ದಾರೆ. ಇಲ್ಲಿ ಸುರೇಶ್‌ ಪಾತ್ರವಿಲ್ಲ. ಸಾಕ್ಷ್ಯ ನಾಶ ಮಾಡಿದ ಗಂಭೀರ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧ ನಡೆಯುವಾಗ ಸುರೇಶ್‌ ಹೆರೂರಿನಲ್ಲಿದ್ದರು. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾಗಿ ಇದುವರೆಗೆ ವಿಚಾರಣೆ ನಡೆಸಿರುವ ಯಾರೂ ಸಾಕ್ಷ್ಯ ನುಡಿದಿಲ್ಲ” ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ “ಮೋಹನ್‌ ನಾಯಕ್‌ ವಿರುದ್ಧದ ಕೊಲೆ ಮತ್ತು ಪಿತೂರಿಗೆ ಸಾಕ್ಷಿ ಇದೆ ಎಂದು ಹೈಕೋರ್ಟ್‌ನ ಬೇರೊಂದು ಪೀಠವು (ನ್ಯಾ. ಬಿ ಎ ಪಾಟೀಲ್) ಜಾಮೀನು ತಿರಸ್ಕರಿಸಿದೆ. ತಾವು ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿರುವ ‌ ಆದೇಶವನ್ನು ಹಾಲಿ ಜಾಮೀನು ಅರ್ಜಿಗಳಿಗೆ ಅನ್ವಯಿಸಬಾರದು. ಮೋಹನ್‌ ನಾಯಕ್‌ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆಗೆ ಬಾಕಿ ಇದೆ” ಎಂದರು.

ಮುಂದುವರಿದು, “ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಆರೋಪ ಮುಕ್ತಿ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಅವುಗಳನ್ನು ಪ್ರಶ್ನಿಸಲಾಗಿಲ್ಲ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನ ಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್‌ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುವುದು ಜಾಮೀನಿಗೆ ಮಾನದಂಡವಾಗಬಾರದು” ಎಂದು ಹೇಳಿದರು.

“ಗೌರಿ ಹತ್ಯೆ ಕೊಲೆ ಮಾಡಿರುವ ಇಡೀ ಸಿಂಡಿಕೇಟ್‌ ಒಂದಲ್ಲಾ ಒಂದು ರೀತಿಯಲ್ಲಿ ಎಂ.ಎಂ ಕಲಬುರ್ಗಿ, ಗೋವಿಂದ ಪಾನ್ಸರೆ, ನರೇಂದ್ರ ದಾಭೋಲ್ಕರ್‌ ಕೊಲೆಯಲ್ಲೂ ಭಾಗಿಯಾಗಿದೆ. ಇದೇ ಸಿಂಡಿಕೇಟ್‌ ಅದರಲ್ಲೂ ಅರ್ಜಿದಾರರಾಗಿರುವ ಅಮಿತ್‌ ಮತ್ತು ನವೀನ್‌ ಕುಮಾರ್‌ ಪ್ರೊ. ಭಗವಾನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ” ಎಂದರು.

“ಮಡಿಕೇರಿ, ಬೆಳಗಾವಿ, ಮಂಗಳೂರಿನಲ್ಲಿ ಈ ಸಿಂಡಿಕೇಟ್‌ ಸಭೆ ನಡೆಸಿದೆ. ನಿಡುಮಾಮಿಡಿ ಸ್ವಾಮೀಜಿ, ಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಪ್ರೊ. ಭಗವಾನ್‌ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದಾರೆ. ಅರ್ಜಿದಾರ ಸುರೇಶ್‌ ಮನೆಯಲ್ಲಿ ಆರೋಪಿಗಳು ಉಳಿದುಕೊಳ್ಳಲು ಅವರ ಪತ್ನಿಯನ್ನು ತವರಿಗೆ ಕಳುಹಿಸುತ್ತಾರೆ. ಕೊಲೆ ಉದ್ದೇಶ ಮನೆಯವರಿಗೆ ಗೊತ್ತಾಗುತ್ತದೆ ಎಂದು ಅವರನ್ನು ಕಳುಹಿಸಲಾಗಿತ್ತೇ ವಿನಃ, ಅವರು ಹಬ್ಬಕ್ಕೆ ಹೋಗಿರಲಿಲ್ಲ. ಸೆಪ್ಟೆಂಬರ್‌ 5ರಂದು ಗೌರಿ ಕೊಲೆಯಾದ ಬಳಿಕ ಆರೋಪಿಗಳು ಸುರೇಶ್‌ ಮನೆ ಖಾಲಿ ಮಾಡುತ್ತಾರೆ” ಎಂದರು ವಿವರಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...