Homeಕರ್ನಾಟಕಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌, ಏಳನೇ ಆರೋಪಿ ಸುರೇಶ್‌ ಹೆಚ್‌.ಎಲ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಸಲ್ಲಿಸಿರುವ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುವುದು ಎಲ್ಲಾ ಅರ್ಜಿದಾರರ ವಾದವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠ ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು” ಎಂದಿದೆ.

“ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಅದು ವಿಚಾರಣೆಗೆ ಬಾಕಿಯಿದೆ” ಎಂದು ತಿಳಿಸಿದೆ.

ಆರೋಪಿ ಅಮಿತ್‌ ದಿಗ್ವೇಕರ್‌ ಪ್ರತಿನಿಧಿಸಿದ್ದ ವಕೀಲ ಬಸವರಾಜ ಸಪ್ಪಣ್ಣವರ್‌ ಅವರು “ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್‌ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಮಿತ್‌ರಿಂದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ, ಬಸ್‌ ಟಿಕೆಟ್‌ ಜಪ್ತಿ ಮಾಡಲಾಗಿದೆ. ಬೇರೆ ಏನೂ ಮಾಡಿಲ್ಲ. 2018ರ ಮೇ 21ರಿಂದ ಜೈಲಿನಲ್ಲಿದ್ದಾರೆ. 11ನೇ ಆರೋಪಿ ಮೋಹನ್‌ ನಾಯಕ್‌ಗೆ ನೀಡಿರುವಂತೆ ಅಮಿತ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಆರೋಪಿ ಕೆ.ಟಿ ನವೀನ್‌ ಕುಮಾರ್‌ನನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು “13ನೇ ಆರೋಪಿ ಸುಜಿತ್‌ ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನಿಂದ ಸಿಮ್‌ ಕಾರ್ಡ್‌ ವಶಪಡಿಸಲಾಗಿದೆ ಎಂದು ಹೇಳಲಾಗಿದೆ. ಸಿಮ್‌ ಕಾರ್ಡ್‌ ನೀಡಿದ ವ್ಯಕ್ತಿಯ ಹೆಸರು ನವೀನ್‌ ಕುಮಾರ್‌ ಆಗಿದ್ದು, ಅವರು ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದಾರೆ” ಎಂದರು.

ಮುಂದುವರಿದು, “ಮೊದಲಿಗೆ ಕೆ.ಟಿ ನವೀನ್‌ ಕುಮಾರ್‌ ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್‌ನನ್ನು ಬದಿಗೆ ಸರಿಸಲಾಗಿದೆ. ಮೆಜೆಸ್ಟಿಕ್‌ನಲ್ಲಿ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್‌ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್‌ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ” ಎಂದು ವಿವರಿಸಿದರು.

“2020ರ ಜನವರಿ 10ರಂದು ಮೊದಲ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕು ವರ್ಷಗಳ ಬಳಿಕ ಜಾಮೀನು ಕೋರುತ್ತಿದ್ದೇನೆ. ಆರೋಪ ನಿಗದಿಗೂ ಮುನ್ನ ಮತ್ತು ಮೂರನೇ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿದ್ದೆ. ಮೋಹನ್‌ ನಾಯಕ್‌ಗೆ ಜಾಮೀನು ನೀಡಿರುವುದನ್ನು ಪರಿಗಣಿಸಿ, ಪರಿಸ್ಥಿತಿ ಬದಲಾಗಿರುವುದರಿಂದ ಜಾಮೀನು ನೀಡಬೇಕು. ಒಟ್ಟಾರೆ, 527 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 2022ರ ಜುಲೈ 11ರಂದು ವಿಚಾರಣೆ ಆರಂಭವಾಗಿದ್ದು, ಎರಡು ವರ್ಷದಲ್ಲಿ 130 ಸಾಕ್ಷಿ ಮಾತ್ರ ವಿಚಾರಣೆ ನಡೆಸಲಾಗಿದೆ. ಆರೋಪಿಯು ಆರು ವರ್ಷದಿಂದ ಜೈಲಿನಲ್ಲಿದ್ದಾರೆ. ಆರೋಗ್ಯದ ಕಾರಣ ನೀಡಿ ಹಿಂದೆ ಜಾಮೀನು ಕೋರಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನ್ಯಾಯಾಲಯ ಅನುಮತಿಸಿತ್ತು” ಎಂದರು.

“ಇನ್ನೊಬ್ಬ ಆರೋಪಿ ಸುರೇಶ್‌ ಪ್ರತಿನಿಧಿಸಿದ್ದ ವಕೀಲ ಮಧುಕರ್‌ ದೇಶಪಾಂಡೆ “15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ. 2017ರ ಜುಲೈನಲ್ಲಿ ಸೀಗೆಹಳ್ಳಿ ಗೇಟ್‌ ಸಮೀಪ ಮನೆ ಬಾಡಿಗೆ ಪಡೆದು ಶಸ್ತ್ರಾಸ್ತ್ರ ಸಂಗ್ರಹ ಮಾಡಿರುವುದು ಮತ್ತು ಗೌರಿಯವರನ್ನು ಕೊಲ್ಲಲು ಶೂಟಿಂಗ್‌ ರಿಹರ್ಸಲ್‌ ನಡೆಸಲು ಬೈಕ್‌ ನೀಡಿದ್ದ ಆರೋಪ ಮಾಡಲಾಗಿದೆ. ಅಮೋಲ್‌ ಕಾಳೆ ಮತ್ತು ವಿಕಾಸ್‌ ಪಾಟೀಲ್‌ ಬೈಕ್‌ ರಿಹರ್ಸಲ್‌ ಮಾಡಿದ್ದಾರೆ. ಇಲ್ಲಿ ಸುರೇಶ್‌ ಪಾತ್ರವಿಲ್ಲ. ಸಾಕ್ಷ್ಯ ನಾಶ ಮಾಡಿದ ಗಂಭೀರ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧ ನಡೆಯುವಾಗ ಸುರೇಶ್‌ ಹೆರೂರಿನಲ್ಲಿದ್ದರು. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾಗಿ ಇದುವರೆಗೆ ವಿಚಾರಣೆ ನಡೆಸಿರುವ ಯಾರೂ ಸಾಕ್ಷ್ಯ ನುಡಿದಿಲ್ಲ” ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ “ಮೋಹನ್‌ ನಾಯಕ್‌ ವಿರುದ್ಧದ ಕೊಲೆ ಮತ್ತು ಪಿತೂರಿಗೆ ಸಾಕ್ಷಿ ಇದೆ ಎಂದು ಹೈಕೋರ್ಟ್‌ನ ಬೇರೊಂದು ಪೀಠವು (ನ್ಯಾ. ಬಿ ಎ ಪಾಟೀಲ್) ಜಾಮೀನು ತಿರಸ್ಕರಿಸಿದೆ. ತಾವು ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿರುವ ‌ ಆದೇಶವನ್ನು ಹಾಲಿ ಜಾಮೀನು ಅರ್ಜಿಗಳಿಗೆ ಅನ್ವಯಿಸಬಾರದು. ಮೋಹನ್‌ ನಾಯಕ್‌ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆಗೆ ಬಾಕಿ ಇದೆ” ಎಂದರು.

ಮುಂದುವರಿದು, “ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಆರೋಪ ಮುಕ್ತಿ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಅವುಗಳನ್ನು ಪ್ರಶ್ನಿಸಲಾಗಿಲ್ಲ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನ ಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್‌ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುವುದು ಜಾಮೀನಿಗೆ ಮಾನದಂಡವಾಗಬಾರದು” ಎಂದು ಹೇಳಿದರು.

“ಗೌರಿ ಹತ್ಯೆ ಕೊಲೆ ಮಾಡಿರುವ ಇಡೀ ಸಿಂಡಿಕೇಟ್‌ ಒಂದಲ್ಲಾ ಒಂದು ರೀತಿಯಲ್ಲಿ ಎಂ.ಎಂ ಕಲಬುರ್ಗಿ, ಗೋವಿಂದ ಪಾನ್ಸರೆ, ನರೇಂದ್ರ ದಾಭೋಲ್ಕರ್‌ ಕೊಲೆಯಲ್ಲೂ ಭಾಗಿಯಾಗಿದೆ. ಇದೇ ಸಿಂಡಿಕೇಟ್‌ ಅದರಲ್ಲೂ ಅರ್ಜಿದಾರರಾಗಿರುವ ಅಮಿತ್‌ ಮತ್ತು ನವೀನ್‌ ಕುಮಾರ್‌ ಪ್ರೊ. ಭಗವಾನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ” ಎಂದರು.

“ಮಡಿಕೇರಿ, ಬೆಳಗಾವಿ, ಮಂಗಳೂರಿನಲ್ಲಿ ಈ ಸಿಂಡಿಕೇಟ್‌ ಸಭೆ ನಡೆಸಿದೆ. ನಿಡುಮಾಮಿಡಿ ಸ್ವಾಮೀಜಿ, ಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಪ್ರೊ. ಭಗವಾನ್‌ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದಾರೆ. ಅರ್ಜಿದಾರ ಸುರೇಶ್‌ ಮನೆಯಲ್ಲಿ ಆರೋಪಿಗಳು ಉಳಿದುಕೊಳ್ಳಲು ಅವರ ಪತ್ನಿಯನ್ನು ತವರಿಗೆ ಕಳುಹಿಸುತ್ತಾರೆ. ಕೊಲೆ ಉದ್ದೇಶ ಮನೆಯವರಿಗೆ ಗೊತ್ತಾಗುತ್ತದೆ ಎಂದು ಅವರನ್ನು ಕಳುಹಿಸಲಾಗಿತ್ತೇ ವಿನಃ, ಅವರು ಹಬ್ಬಕ್ಕೆ ಹೋಗಿರಲಿಲ್ಲ. ಸೆಪ್ಟೆಂಬರ್‌ 5ರಂದು ಗೌರಿ ಕೊಲೆಯಾದ ಬಳಿಕ ಆರೋಪಿಗಳು ಸುರೇಶ್‌ ಮನೆ ಖಾಲಿ ಮಾಡುತ್ತಾರೆ” ಎಂದರು ವಿವರಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...