Homeಕರ್ನಾಟಕಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌, ಏಳನೇ ಆರೋಪಿ ಸುರೇಶ್‌ ಹೆಚ್‌.ಎಲ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಸಲ್ಲಿಸಿರುವ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುವುದು ಎಲ್ಲಾ ಅರ್ಜಿದಾರರ ವಾದವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠ ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು” ಎಂದಿದೆ.

“ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಅದು ವಿಚಾರಣೆಗೆ ಬಾಕಿಯಿದೆ” ಎಂದು ತಿಳಿಸಿದೆ.

ಆರೋಪಿ ಅಮಿತ್‌ ದಿಗ್ವೇಕರ್‌ ಪ್ರತಿನಿಧಿಸಿದ್ದ ವಕೀಲ ಬಸವರಾಜ ಸಪ್ಪಣ್ಣವರ್‌ ಅವರು “ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್‌ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಮಿತ್‌ರಿಂದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ, ಬಸ್‌ ಟಿಕೆಟ್‌ ಜಪ್ತಿ ಮಾಡಲಾಗಿದೆ. ಬೇರೆ ಏನೂ ಮಾಡಿಲ್ಲ. 2018ರ ಮೇ 21ರಿಂದ ಜೈಲಿನಲ್ಲಿದ್ದಾರೆ. 11ನೇ ಆರೋಪಿ ಮೋಹನ್‌ ನಾಯಕ್‌ಗೆ ನೀಡಿರುವಂತೆ ಅಮಿತ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಆರೋಪಿ ಕೆ.ಟಿ ನವೀನ್‌ ಕುಮಾರ್‌ನನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು “13ನೇ ಆರೋಪಿ ಸುಜಿತ್‌ ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನಿಂದ ಸಿಮ್‌ ಕಾರ್ಡ್‌ ವಶಪಡಿಸಲಾಗಿದೆ ಎಂದು ಹೇಳಲಾಗಿದೆ. ಸಿಮ್‌ ಕಾರ್ಡ್‌ ನೀಡಿದ ವ್ಯಕ್ತಿಯ ಹೆಸರು ನವೀನ್‌ ಕುಮಾರ್‌ ಆಗಿದ್ದು, ಅವರು ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದಾರೆ” ಎಂದರು.

ಮುಂದುವರಿದು, “ಮೊದಲಿಗೆ ಕೆ.ಟಿ ನವೀನ್‌ ಕುಮಾರ್‌ ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್‌ನನ್ನು ಬದಿಗೆ ಸರಿಸಲಾಗಿದೆ. ಮೆಜೆಸ್ಟಿಕ್‌ನಲ್ಲಿ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್‌ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್‌ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ” ಎಂದು ವಿವರಿಸಿದರು.

“2020ರ ಜನವರಿ 10ರಂದು ಮೊದಲ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕು ವರ್ಷಗಳ ಬಳಿಕ ಜಾಮೀನು ಕೋರುತ್ತಿದ್ದೇನೆ. ಆರೋಪ ನಿಗದಿಗೂ ಮುನ್ನ ಮತ್ತು ಮೂರನೇ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿದ್ದೆ. ಮೋಹನ್‌ ನಾಯಕ್‌ಗೆ ಜಾಮೀನು ನೀಡಿರುವುದನ್ನು ಪರಿಗಣಿಸಿ, ಪರಿಸ್ಥಿತಿ ಬದಲಾಗಿರುವುದರಿಂದ ಜಾಮೀನು ನೀಡಬೇಕು. ಒಟ್ಟಾರೆ, 527 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 2022ರ ಜುಲೈ 11ರಂದು ವಿಚಾರಣೆ ಆರಂಭವಾಗಿದ್ದು, ಎರಡು ವರ್ಷದಲ್ಲಿ 130 ಸಾಕ್ಷಿ ಮಾತ್ರ ವಿಚಾರಣೆ ನಡೆಸಲಾಗಿದೆ. ಆರೋಪಿಯು ಆರು ವರ್ಷದಿಂದ ಜೈಲಿನಲ್ಲಿದ್ದಾರೆ. ಆರೋಗ್ಯದ ಕಾರಣ ನೀಡಿ ಹಿಂದೆ ಜಾಮೀನು ಕೋರಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನ್ಯಾಯಾಲಯ ಅನುಮತಿಸಿತ್ತು” ಎಂದರು.

“ಇನ್ನೊಬ್ಬ ಆರೋಪಿ ಸುರೇಶ್‌ ಪ್ರತಿನಿಧಿಸಿದ್ದ ವಕೀಲ ಮಧುಕರ್‌ ದೇಶಪಾಂಡೆ “15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ. 2017ರ ಜುಲೈನಲ್ಲಿ ಸೀಗೆಹಳ್ಳಿ ಗೇಟ್‌ ಸಮೀಪ ಮನೆ ಬಾಡಿಗೆ ಪಡೆದು ಶಸ್ತ್ರಾಸ್ತ್ರ ಸಂಗ್ರಹ ಮಾಡಿರುವುದು ಮತ್ತು ಗೌರಿಯವರನ್ನು ಕೊಲ್ಲಲು ಶೂಟಿಂಗ್‌ ರಿಹರ್ಸಲ್‌ ನಡೆಸಲು ಬೈಕ್‌ ನೀಡಿದ್ದ ಆರೋಪ ಮಾಡಲಾಗಿದೆ. ಅಮೋಲ್‌ ಕಾಳೆ ಮತ್ತು ವಿಕಾಸ್‌ ಪಾಟೀಲ್‌ ಬೈಕ್‌ ರಿಹರ್ಸಲ್‌ ಮಾಡಿದ್ದಾರೆ. ಇಲ್ಲಿ ಸುರೇಶ್‌ ಪಾತ್ರವಿಲ್ಲ. ಸಾಕ್ಷ್ಯ ನಾಶ ಮಾಡಿದ ಗಂಭೀರ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧ ನಡೆಯುವಾಗ ಸುರೇಶ್‌ ಹೆರೂರಿನಲ್ಲಿದ್ದರು. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾಗಿ ಇದುವರೆಗೆ ವಿಚಾರಣೆ ನಡೆಸಿರುವ ಯಾರೂ ಸಾಕ್ಷ್ಯ ನುಡಿದಿಲ್ಲ” ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ “ಮೋಹನ್‌ ನಾಯಕ್‌ ವಿರುದ್ಧದ ಕೊಲೆ ಮತ್ತು ಪಿತೂರಿಗೆ ಸಾಕ್ಷಿ ಇದೆ ಎಂದು ಹೈಕೋರ್ಟ್‌ನ ಬೇರೊಂದು ಪೀಠವು (ನ್ಯಾ. ಬಿ ಎ ಪಾಟೀಲ್) ಜಾಮೀನು ತಿರಸ್ಕರಿಸಿದೆ. ತಾವು ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿರುವ ‌ ಆದೇಶವನ್ನು ಹಾಲಿ ಜಾಮೀನು ಅರ್ಜಿಗಳಿಗೆ ಅನ್ವಯಿಸಬಾರದು. ಮೋಹನ್‌ ನಾಯಕ್‌ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆಗೆ ಬಾಕಿ ಇದೆ” ಎಂದರು.

ಮುಂದುವರಿದು, “ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಆರೋಪ ಮುಕ್ತಿ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಅವುಗಳನ್ನು ಪ್ರಶ್ನಿಸಲಾಗಿಲ್ಲ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನ ಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್‌ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುವುದು ಜಾಮೀನಿಗೆ ಮಾನದಂಡವಾಗಬಾರದು” ಎಂದು ಹೇಳಿದರು.

“ಗೌರಿ ಹತ್ಯೆ ಕೊಲೆ ಮಾಡಿರುವ ಇಡೀ ಸಿಂಡಿಕೇಟ್‌ ಒಂದಲ್ಲಾ ಒಂದು ರೀತಿಯಲ್ಲಿ ಎಂ.ಎಂ ಕಲಬುರ್ಗಿ, ಗೋವಿಂದ ಪಾನ್ಸರೆ, ನರೇಂದ್ರ ದಾಭೋಲ್ಕರ್‌ ಕೊಲೆಯಲ್ಲೂ ಭಾಗಿಯಾಗಿದೆ. ಇದೇ ಸಿಂಡಿಕೇಟ್‌ ಅದರಲ್ಲೂ ಅರ್ಜಿದಾರರಾಗಿರುವ ಅಮಿತ್‌ ಮತ್ತು ನವೀನ್‌ ಕುಮಾರ್‌ ಪ್ರೊ. ಭಗವಾನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ” ಎಂದರು.

“ಮಡಿಕೇರಿ, ಬೆಳಗಾವಿ, ಮಂಗಳೂರಿನಲ್ಲಿ ಈ ಸಿಂಡಿಕೇಟ್‌ ಸಭೆ ನಡೆಸಿದೆ. ನಿಡುಮಾಮಿಡಿ ಸ್ವಾಮೀಜಿ, ಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಪ್ರೊ. ಭಗವಾನ್‌ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದಾರೆ. ಅರ್ಜಿದಾರ ಸುರೇಶ್‌ ಮನೆಯಲ್ಲಿ ಆರೋಪಿಗಳು ಉಳಿದುಕೊಳ್ಳಲು ಅವರ ಪತ್ನಿಯನ್ನು ತವರಿಗೆ ಕಳುಹಿಸುತ್ತಾರೆ. ಕೊಲೆ ಉದ್ದೇಶ ಮನೆಯವರಿಗೆ ಗೊತ್ತಾಗುತ್ತದೆ ಎಂದು ಅವರನ್ನು ಕಳುಹಿಸಲಾಗಿತ್ತೇ ವಿನಃ, ಅವರು ಹಬ್ಬಕ್ಕೆ ಹೋಗಿರಲಿಲ್ಲ. ಸೆಪ್ಟೆಂಬರ್‌ 5ರಂದು ಗೌರಿ ಕೊಲೆಯಾದ ಬಳಿಕ ಆರೋಪಿಗಳು ಸುರೇಶ್‌ ಮನೆ ಖಾಲಿ ಮಾಡುತ್ತಾರೆ” ಎಂದರು ವಿವರಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...