Homeಕರ್ನಾಟಕಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌, ಏಳನೇ ಆರೋಪಿ ಸುರೇಶ್‌ ಹೆಚ್‌.ಎಲ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಸಲ್ಲಿಸಿರುವ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುವುದು ಎಲ್ಲಾ ಅರ್ಜಿದಾರರ ವಾದವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠ ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು” ಎಂದಿದೆ.

“ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಅದು ವಿಚಾರಣೆಗೆ ಬಾಕಿಯಿದೆ” ಎಂದು ತಿಳಿಸಿದೆ.

ಆರೋಪಿ ಅಮಿತ್‌ ದಿಗ್ವೇಕರ್‌ ಪ್ರತಿನಿಧಿಸಿದ್ದ ವಕೀಲ ಬಸವರಾಜ ಸಪ್ಪಣ್ಣವರ್‌ ಅವರು “ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್‌ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಮಿತ್‌ರಿಂದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ, ಬಸ್‌ ಟಿಕೆಟ್‌ ಜಪ್ತಿ ಮಾಡಲಾಗಿದೆ. ಬೇರೆ ಏನೂ ಮಾಡಿಲ್ಲ. 2018ರ ಮೇ 21ರಿಂದ ಜೈಲಿನಲ್ಲಿದ್ದಾರೆ. 11ನೇ ಆರೋಪಿ ಮೋಹನ್‌ ನಾಯಕ್‌ಗೆ ನೀಡಿರುವಂತೆ ಅಮಿತ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಆರೋಪಿ ಕೆ.ಟಿ ನವೀನ್‌ ಕುಮಾರ್‌ನನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು “13ನೇ ಆರೋಪಿ ಸುಜಿತ್‌ ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನಿಂದ ಸಿಮ್‌ ಕಾರ್ಡ್‌ ವಶಪಡಿಸಲಾಗಿದೆ ಎಂದು ಹೇಳಲಾಗಿದೆ. ಸಿಮ್‌ ಕಾರ್ಡ್‌ ನೀಡಿದ ವ್ಯಕ್ತಿಯ ಹೆಸರು ನವೀನ್‌ ಕುಮಾರ್‌ ಆಗಿದ್ದು, ಅವರು ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದಾರೆ” ಎಂದರು.

ಮುಂದುವರಿದು, “ಮೊದಲಿಗೆ ಕೆ.ಟಿ ನವೀನ್‌ ಕುಮಾರ್‌ ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್‌ನನ್ನು ಬದಿಗೆ ಸರಿಸಲಾಗಿದೆ. ಮೆಜೆಸ್ಟಿಕ್‌ನಲ್ಲಿ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್‌ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್‌ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ” ಎಂದು ವಿವರಿಸಿದರು.

“2020ರ ಜನವರಿ 10ರಂದು ಮೊದಲ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕು ವರ್ಷಗಳ ಬಳಿಕ ಜಾಮೀನು ಕೋರುತ್ತಿದ್ದೇನೆ. ಆರೋಪ ನಿಗದಿಗೂ ಮುನ್ನ ಮತ್ತು ಮೂರನೇ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿದ್ದೆ. ಮೋಹನ್‌ ನಾಯಕ್‌ಗೆ ಜಾಮೀನು ನೀಡಿರುವುದನ್ನು ಪರಿಗಣಿಸಿ, ಪರಿಸ್ಥಿತಿ ಬದಲಾಗಿರುವುದರಿಂದ ಜಾಮೀನು ನೀಡಬೇಕು. ಒಟ್ಟಾರೆ, 527 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 2022ರ ಜುಲೈ 11ರಂದು ವಿಚಾರಣೆ ಆರಂಭವಾಗಿದ್ದು, ಎರಡು ವರ್ಷದಲ್ಲಿ 130 ಸಾಕ್ಷಿ ಮಾತ್ರ ವಿಚಾರಣೆ ನಡೆಸಲಾಗಿದೆ. ಆರೋಪಿಯು ಆರು ವರ್ಷದಿಂದ ಜೈಲಿನಲ್ಲಿದ್ದಾರೆ. ಆರೋಗ್ಯದ ಕಾರಣ ನೀಡಿ ಹಿಂದೆ ಜಾಮೀನು ಕೋರಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನ್ಯಾಯಾಲಯ ಅನುಮತಿಸಿತ್ತು” ಎಂದರು.

“ಇನ್ನೊಬ್ಬ ಆರೋಪಿ ಸುರೇಶ್‌ ಪ್ರತಿನಿಧಿಸಿದ್ದ ವಕೀಲ ಮಧುಕರ್‌ ದೇಶಪಾಂಡೆ “15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ. 2017ರ ಜುಲೈನಲ್ಲಿ ಸೀಗೆಹಳ್ಳಿ ಗೇಟ್‌ ಸಮೀಪ ಮನೆ ಬಾಡಿಗೆ ಪಡೆದು ಶಸ್ತ್ರಾಸ್ತ್ರ ಸಂಗ್ರಹ ಮಾಡಿರುವುದು ಮತ್ತು ಗೌರಿಯವರನ್ನು ಕೊಲ್ಲಲು ಶೂಟಿಂಗ್‌ ರಿಹರ್ಸಲ್‌ ನಡೆಸಲು ಬೈಕ್‌ ನೀಡಿದ್ದ ಆರೋಪ ಮಾಡಲಾಗಿದೆ. ಅಮೋಲ್‌ ಕಾಳೆ ಮತ್ತು ವಿಕಾಸ್‌ ಪಾಟೀಲ್‌ ಬೈಕ್‌ ರಿಹರ್ಸಲ್‌ ಮಾಡಿದ್ದಾರೆ. ಇಲ್ಲಿ ಸುರೇಶ್‌ ಪಾತ್ರವಿಲ್ಲ. ಸಾಕ್ಷ್ಯ ನಾಶ ಮಾಡಿದ ಗಂಭೀರ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧ ನಡೆಯುವಾಗ ಸುರೇಶ್‌ ಹೆರೂರಿನಲ್ಲಿದ್ದರು. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾಗಿ ಇದುವರೆಗೆ ವಿಚಾರಣೆ ನಡೆಸಿರುವ ಯಾರೂ ಸಾಕ್ಷ್ಯ ನುಡಿದಿಲ್ಲ” ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ “ಮೋಹನ್‌ ನಾಯಕ್‌ ವಿರುದ್ಧದ ಕೊಲೆ ಮತ್ತು ಪಿತೂರಿಗೆ ಸಾಕ್ಷಿ ಇದೆ ಎಂದು ಹೈಕೋರ್ಟ್‌ನ ಬೇರೊಂದು ಪೀಠವು (ನ್ಯಾ. ಬಿ ಎ ಪಾಟೀಲ್) ಜಾಮೀನು ತಿರಸ್ಕರಿಸಿದೆ. ತಾವು ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿರುವ ‌ ಆದೇಶವನ್ನು ಹಾಲಿ ಜಾಮೀನು ಅರ್ಜಿಗಳಿಗೆ ಅನ್ವಯಿಸಬಾರದು. ಮೋಹನ್‌ ನಾಯಕ್‌ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆಗೆ ಬಾಕಿ ಇದೆ” ಎಂದರು.

ಮುಂದುವರಿದು, “ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಆರೋಪ ಮುಕ್ತಿ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಅವುಗಳನ್ನು ಪ್ರಶ್ನಿಸಲಾಗಿಲ್ಲ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನ ಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್‌ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುವುದು ಜಾಮೀನಿಗೆ ಮಾನದಂಡವಾಗಬಾರದು” ಎಂದು ಹೇಳಿದರು.

“ಗೌರಿ ಹತ್ಯೆ ಕೊಲೆ ಮಾಡಿರುವ ಇಡೀ ಸಿಂಡಿಕೇಟ್‌ ಒಂದಲ್ಲಾ ಒಂದು ರೀತಿಯಲ್ಲಿ ಎಂ.ಎಂ ಕಲಬುರ್ಗಿ, ಗೋವಿಂದ ಪಾನ್ಸರೆ, ನರೇಂದ್ರ ದಾಭೋಲ್ಕರ್‌ ಕೊಲೆಯಲ್ಲೂ ಭಾಗಿಯಾಗಿದೆ. ಇದೇ ಸಿಂಡಿಕೇಟ್‌ ಅದರಲ್ಲೂ ಅರ್ಜಿದಾರರಾಗಿರುವ ಅಮಿತ್‌ ಮತ್ತು ನವೀನ್‌ ಕುಮಾರ್‌ ಪ್ರೊ. ಭಗವಾನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ” ಎಂದರು.

“ಮಡಿಕೇರಿ, ಬೆಳಗಾವಿ, ಮಂಗಳೂರಿನಲ್ಲಿ ಈ ಸಿಂಡಿಕೇಟ್‌ ಸಭೆ ನಡೆಸಿದೆ. ನಿಡುಮಾಮಿಡಿ ಸ್ವಾಮೀಜಿ, ಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಪ್ರೊ. ಭಗವಾನ್‌ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದಾರೆ. ಅರ್ಜಿದಾರ ಸುರೇಶ್‌ ಮನೆಯಲ್ಲಿ ಆರೋಪಿಗಳು ಉಳಿದುಕೊಳ್ಳಲು ಅವರ ಪತ್ನಿಯನ್ನು ತವರಿಗೆ ಕಳುಹಿಸುತ್ತಾರೆ. ಕೊಲೆ ಉದ್ದೇಶ ಮನೆಯವರಿಗೆ ಗೊತ್ತಾಗುತ್ತದೆ ಎಂದು ಅವರನ್ನು ಕಳುಹಿಸಲಾಗಿತ್ತೇ ವಿನಃ, ಅವರು ಹಬ್ಬಕ್ಕೆ ಹೋಗಿರಲಿಲ್ಲ. ಸೆಪ್ಟೆಂಬರ್‌ 5ರಂದು ಗೌರಿ ಕೊಲೆಯಾದ ಬಳಿಕ ಆರೋಪಿಗಳು ಸುರೇಶ್‌ ಮನೆ ಖಾಲಿ ಮಾಡುತ್ತಾರೆ” ಎಂದರು ವಿವರಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...