Homeಸಾಹಿತ್ಯ-ಸಂಸ್ಕೃತಿಕವನಕಳೆದುಹೋದನು ಹೇಗೆ ಪರಶುರಾಮ?

ಕಳೆದುಹೋದನು ಹೇಗೆ ಪರಶುರಾಮ?

- Advertisement -
- Advertisement -

ರಾಮ ರಾಮಾ ರಾಮ ಅಯ್ಯೋ ಶ್ರೀರಾಮಾ
ಎಲ್ಲಿರುವನೋ ನನ್ನ ಪರಶುರಾಮ
ಮರಳಿ ಕೊಡುವೆಯಾ ಮಗನ ರಾಮ ಶ್ರೀರಾಮಾ
ಇಲ್ಲದಿರೆ ನನ್ನನ್ನೂ ಬಲಿ ತೆಗೆದುಕೋ ರಾಮ

ಕೈಯಲ್ಲಿ ಬಂದೂಕು ಹಿಡಿದನಂತೆ
ನನ್ನಂಥ ಹೆಣ್ಣನ್ನೇ ಹೊಡೆದನಂತೆ
‘ಅಮ್ಮ’ ಎನ್ನುತ್ತಲೇ ಎದೆ ಸೀಳುವಾಗ
ಹೆತ್ತಮ್ಮನನ್ನೇ ಮರೆತಿದ್ದನಂತೆ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಏಳುಕೊಳ್ಳದೆಲ್ಲವಗ ಹರಕೆ ಹೊತ್ತಿದ್ದೆ
ಒಂಬತ್ತು ತಿಂಗಳು ಹೊಟ್ಟೆ ಹೊತ್ತಿದ್ದೆ
ರಕ್ತ ಮಾಂಸ ಬಸಿದು ಕೂಸ ಮಾಡಿದ್ದೆ
ನೋವು ಬ್ಯಾನಿ ತಿಂದು ಸತ್ತು ಹಡೆದಿದ್ದೆ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ವರ್ಷಗಟ್ಟಲೆ ಎದೆಯ ಹಾಲು ಉಣಿಸಿದ್ದೆ
ತೋಳ ತೊಟ್ಟಿಲು ತೂಗಿ ಲಾಲಿ ಹಾಡಿದ್ದೆ
ತೆಪ್ಪೆಜ್ಜಿ ಕಿತ್ತಾಗ ಹಾಡಿ ಕುಣಿದಿದ್ದೆ
ತೊದಲನುಡಿಯೊಳಗ ಕೈಲಾಸ ಕಂಡಿದ್ದೆ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಸಾಲಿಗಿ ಕಳಿಸಿದ ಸಡಗರ ಸಡಗರ
ಸಾಹೇಬನಾಗುವ ಕನಸಿನ ಸಡಗರ
ಕೂಲಿನಾಲಿ ಮಾಡಿ ಬೆಳೆಸಿದ ಸಡಗರ
ಬಡತನವ ಮರೆಸಿದ್ದ ಮುದ್ದು ಸುಕುಮಾರ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಹರೆಯವು ಮೈತುಂಬಿ ಹೋರಿಯಾಗಿದ್ದ
ಚೆಲುವೆಯರ ಕಣ್ಣಾಗ ಬುಗುರಿಯಾಗಿದ್ದ
ಅಪ್ಪನ ಹೆಗಲ ಭಾರ ಹೊರುತ್ತಿದ್ದ
ಅವ್ವನಲಿ ಸೊಸೆ ತರುವ ಕನಸ ಬೆಳೆಸಿದ್ದ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ನಿಂತಲ್ಲೇ ಕತ್ತರಿಸಿ ನೆಲಕ ಬಿದ್ದೇನಿ
ಎದೆಯಿಂದ ನೆಲವ ಬಗೆಯುತ್ತಿದ್ದೀನಿ
ಕಣ್ಣು ಕತ್ತಲಗೂಡಿ ಹೊರಳುತಿದ್ದೀನಿ
ಮಗನ ಹೆಸರಿಡಿದು ಚೀರುತಿದ್ದೀನಿ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ
ಹರೆಯದ ಕೈಗೆ ಬಂದೂಕು ಕೊಟ್ಟವರಾರು ?
ಹರೆಯದ ಮೈ ಹೊಕ್ಕ ಕೊಲೆಗಡುಕರಾರು ?
ಯಾರು ಉಣಿಸಿದರವನ ಎದೆಗೆ ವಿಷವ ?
ಯಾರು ಕಕ್ಕಿಸಿದರು ನನ್ನೆದೆಯ ಹಾಲು ?
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಕರುಣೆ ಬಾರದೇನೋ ರಾಮ ಶ್ರೀರಾಮಾ
ಮರಣವಾದರೂ ನೀಡೋ ರಾಮ ಶ್ರೀರಾಮಾ
ಯಾರ ಸೇನೆಯಲ್ಲಿ ಕಳೆದುಹೋದೆಯೋ ರಾಮ
ಕಾಯುತಿರುವೆನು ತಾಯಿ ರಾಮಶ್ರೀರಾಮ
ಮರಳಿ ಕೊಡುವೆಯಾ ಮಗನ ರಾಮ ಶ್ರೀರಾಮ
ಇಲ್ಲದಿರೆ ನನ್ನೊಡಲ ಬೆಂಕಿಯಲಿ ಬೂದಿಯಾಗೋ

-ಎಂ. ಡಿ. ಒಕ್ಕುಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...