Homeಕರ್ನಾಟಕಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು (ಸೆಪ್ಟೆಂಬರ್ 6) ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯ ಅವರ ಸಮಾಧಿ ಬಳಿ “ಗೌರಿ ನುಡಿನಮನ” ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಗುಂಡೇಟಿಗೆ ಬಲಿಯಾದರೂ, ಅವರ ಹೋರಾಟ ಮತ್ತು ಆದರ್ಶಗಳು ಎಂದಿಗೂ ಜೀವಂತವಾಗಿವೆ ಎಂದು ಹೇಳಿದರು.

ಪ್ರತಿ ವರ್ಷ ಸೆಪ್ಟೆಂಬರ್ 5ರಂದು ನಡೆಯುವ ಈ ಕಾರ್ಯಕ್ರಮದಲ್ಲಿ, ಗೌರಿ ಲಂಕೇಶ್‌ ಅವರ ನಿಷ್ಠೆ, ಬದ್ಧತೆ ಮತ್ತು ನಿರ್ಭೀತ ಹೋರಾಟವನ್ನು ಸ್ಮರಿಸಲಾಯಿತು. ಈ ಬಾರಿ ಸೆ.5ರ ಬದಲು ಸೆ.6ರಂದು ಗೌರಿ ನುಡಿನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. “ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಮೃತಪಟ್ಟರೆ, ಅವರನ್ನು ಸ್ಮರಿಸಲು ಕೇವಲ ಕಲ್ಲಿನ ಸಮಾಧಿಗಳು ಮಾತ್ರ ಉಳಿಯುತ್ತವೆ. ಆದರೆ, ಗೌರಿ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ. ಇದಕ್ಕೆ ಕಾರಣ, ಅವರು ತಾವು ನಂಬಿದ ಸಿದ್ಧಾಂತಕ್ಕೆ, ತತ್ವಕ್ಕೆ ಕೊನೆಯವರೆಗೂ ಅಂಟಿಕೊಂಡಿದ್ದ ಬದ್ಧತೆ. ಸತ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಾದ ಅವರ ಧೈರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ” ಎಂದು ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.

ಅವರು ಮುಂದುವರೆದು, “ಗೌರಿ ಅವರ ಜೊತೆ ಜನರು ಇದ್ದರು, ಅವರ ನಂತರದ ಪೀಳಿಗೆಯೂ ಇದೆ. ಅವರು ಕೇವಲ ಪತ್ರಕರ್ತೆಯಾಗಿರಲಿಲ್ಲ, ಬದಲಿಗೆ ಸತ್ಯಪ್ರತಿಪಾದಕಿಯಾಗಿ, ಬಂಡಾಯದ ಪ್ರತೀಕವಾಗಿ ಘಮಘಮಿಸುತ್ತಲೇ ಇರುತ್ತಾರೆ. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನಾಹುತಗಳನ್ನು ಪ್ರಶ್ನಿಸಲು, ಸತ್ಯವನ್ನು ನಿರ್ಭೀತಿಯಿಂದ ಹೊರತರಲು ಗೌರಿ ಲಂಕೇಶ್‌ ತೋರಿಸಿದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು. ಯಾವುದೇ ಪ್ರಭಾವಕ್ಕೆ, ಯಾವುದೇ ಹಂಗಿಗೂ ಒಳಗಾಗದೆ, ನ್ಯಾಯ ಮತ್ತು ಸತ್ಯಕ್ಕಾಗಿ ಹೋರಾಡುವ ಮನೋಭಾವವನ್ನು ನಾವು ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಎದೆಗೆ ಗುಂಡೇಟು ಬಿದ್ದರೂ ಚಿಂತೆಯಿಲ್ಲ ಎಂಬ ರೀತಿಯಲ್ಲಿ ಸತ್ಯಶೋಧಕರಾಗಿ ನಾವು ಮುನ್ನಡೆಯಬೇಕು. ಗೌರಿ ಅವರು ನಮಗೆ ಇದೇ ಸಂದೇಶವನ್ನು ನೀಡಿದ್ದಾರೆ. ನಾವು ಈ ಸಂದೇಶಕ್ಕೆ ಬದ್ಧರಾಗಿರೋಣ” ಎಂದು ಹೇಳಿದರು. ಗೌರಿ ಲಂಕೇಶ್‌ ಅವರ ಆದರ್ಶಗಳಿಗೆ ಬದ್ಧರಾಗಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಆರಂಭದಲ್ಲಿ ರಮೇಶ್ ಗಬ್ಬೂರು ರಚನೆಯ ಈ ಕೆಳಗಿನ ಹೋರಾಟ ಗೀತೆಯನ್ನು ಕೆವಿಎಸ್‌ನ ಗುರುಬಸವ ಮತ್ತು ಸಂಗಡಿಗರು ಹಾಡಿದರು.

ಬಿತ್ತುವ ಪ್ರೀತಿಯ ಅರ್ಥವ ಅರಿಯದೆ
ಗುಂಡು ಹೊಡೆದಿರಿ
ತೂರಿದ್ದು ಗೌರಿಗೆ ತಾಕಿದ್ದು ನಮ್ಮೆದೇಗೆ
ನೂರು ಗುಂಡುಗಳು ತೂರಿ ಬಂದರು
ಗುಡುಗುಡು ಗುಡುಗುಡು ಗುಡುಗುವೆವು

ಅಂದು ಬುದ್ಧ ಬಸವಣ್ಣ
ಇಂದು ಭೀಮನ ಮಕ್ಕಳು ನಾವಣ್ಣ
ಗಾಂಧಿಯಿಂದ ಗೌರಿಯವರೆಗೆ
ಶಾಂತಿ ಸಾರಿದವರು ಯಾರಣ್ಣ //ತೂರಿದ್ದು//

ಅಂದು ದಾಬೋಲ್ಕರ್ ಪನ್ಸಾರೆ
ಇಂದು ಕಲಬುರ್ಗಿ ಗೌರಿಯು
ಮುಂದೆ ನಾವಿರುವೆವು
ನಿಮ್ಮ ಗುಂಡಿಗೆ ಎದೆಗೊಟ್ಟು //ತೂರಿದ್ದು//

ಈ ಕಾರ್ಯಕ್ರಮದಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ದಿನೇಶ್ ಅಮಿನ್ ಮಟ್ಟು, ಡಾ. ವಿಜಯಮ್ಮ, ಶಿವಸುಂದರ್, ಕೆ.ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ, ಸುನೀಲ್ ಸಿರಸಂಗಿ, ಸಿರಿಮನೆ ನಾಗರಾಜ್, ಹೇಮಕ್ಕ ಸಿರಿಮನೆ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಹಾಗೂ ಗೌರಿ ಲಂಕೇಶ್‌ ಅಭಿಮಾನಿಗಳು ಭಾಗವಹಿಸಿದ್ದರು.

“ಒಬ್ಬ ಫ್ಯಾಸಿಸ್ಟ್‌ನ ಅಹಂಕಾರ ಭಾರತದ ಆತ್ಮಕ್ಕಿಂತ ದೊಡ್ಡದಾದದ್ದು ಯಾವಾಗ?”: ಸಂಜೀವ್ ಭಟ್ 7 ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪತ್ನಿ ಶ್ವೇತಾ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...