Homeಕರ್ನಾಟಕಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು (ಸೆಪ್ಟೆಂಬರ್ 6) ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯ ಅವರ ಸಮಾಧಿ ಬಳಿ “ಗೌರಿ ನುಡಿನಮನ” ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಗುಂಡೇಟಿಗೆ ಬಲಿಯಾದರೂ, ಅವರ ಹೋರಾಟ ಮತ್ತು ಆದರ್ಶಗಳು ಎಂದಿಗೂ ಜೀವಂತವಾಗಿವೆ ಎಂದು ಹೇಳಿದರು.

ಪ್ರತಿ ವರ್ಷ ಸೆಪ್ಟೆಂಬರ್ 5ರಂದು ನಡೆಯುವ ಈ ಕಾರ್ಯಕ್ರಮದಲ್ಲಿ, ಗೌರಿ ಲಂಕೇಶ್‌ ಅವರ ನಿಷ್ಠೆ, ಬದ್ಧತೆ ಮತ್ತು ನಿರ್ಭೀತ ಹೋರಾಟವನ್ನು ಸ್ಮರಿಸಲಾಯಿತು. ಈ ಬಾರಿ ಸೆ.5ರ ಬದಲು ಸೆ.6ರಂದು ಗೌರಿ ನುಡಿನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. “ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಮೃತಪಟ್ಟರೆ, ಅವರನ್ನು ಸ್ಮರಿಸಲು ಕೇವಲ ಕಲ್ಲಿನ ಸಮಾಧಿಗಳು ಮಾತ್ರ ಉಳಿಯುತ್ತವೆ. ಆದರೆ, ಗೌರಿ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ. ಇದಕ್ಕೆ ಕಾರಣ, ಅವರು ತಾವು ನಂಬಿದ ಸಿದ್ಧಾಂತಕ್ಕೆ, ತತ್ವಕ್ಕೆ ಕೊನೆಯವರೆಗೂ ಅಂಟಿಕೊಂಡಿದ್ದ ಬದ್ಧತೆ. ಸತ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಾದ ಅವರ ಧೈರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ” ಎಂದು ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.

ಅವರು ಮುಂದುವರೆದು, “ಗೌರಿ ಅವರ ಜೊತೆ ಜನರು ಇದ್ದರು, ಅವರ ನಂತರದ ಪೀಳಿಗೆಯೂ ಇದೆ. ಅವರು ಕೇವಲ ಪತ್ರಕರ್ತೆಯಾಗಿರಲಿಲ್ಲ, ಬದಲಿಗೆ ಸತ್ಯಪ್ರತಿಪಾದಕಿಯಾಗಿ, ಬಂಡಾಯದ ಪ್ರತೀಕವಾಗಿ ಘಮಘಮಿಸುತ್ತಲೇ ಇರುತ್ತಾರೆ. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನಾಹುತಗಳನ್ನು ಪ್ರಶ್ನಿಸಲು, ಸತ್ಯವನ್ನು ನಿರ್ಭೀತಿಯಿಂದ ಹೊರತರಲು ಗೌರಿ ಲಂಕೇಶ್‌ ತೋರಿಸಿದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು. ಯಾವುದೇ ಪ್ರಭಾವಕ್ಕೆ, ಯಾವುದೇ ಹಂಗಿಗೂ ಒಳಗಾಗದೆ, ನ್ಯಾಯ ಮತ್ತು ಸತ್ಯಕ್ಕಾಗಿ ಹೋರಾಡುವ ಮನೋಭಾವವನ್ನು ನಾವು ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಎದೆಗೆ ಗುಂಡೇಟು ಬಿದ್ದರೂ ಚಿಂತೆಯಿಲ್ಲ ಎಂಬ ರೀತಿಯಲ್ಲಿ ಸತ್ಯಶೋಧಕರಾಗಿ ನಾವು ಮುನ್ನಡೆಯಬೇಕು. ಗೌರಿ ಅವರು ನಮಗೆ ಇದೇ ಸಂದೇಶವನ್ನು ನೀಡಿದ್ದಾರೆ. ನಾವು ಈ ಸಂದೇಶಕ್ಕೆ ಬದ್ಧರಾಗಿರೋಣ” ಎಂದು ಹೇಳಿದರು. ಗೌರಿ ಲಂಕೇಶ್‌ ಅವರ ಆದರ್ಶಗಳಿಗೆ ಬದ್ಧರಾಗಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಆರಂಭದಲ್ಲಿ ರಮೇಶ್ ಗಬ್ಬೂರು ರಚನೆಯ ಈ ಕೆಳಗಿನ ಹೋರಾಟ ಗೀತೆಯನ್ನು ಕೆವಿಎಸ್‌ನ ಗುರುಬಸವ ಮತ್ತು ಸಂಗಡಿಗರು ಹಾಡಿದರು.

ಬಿತ್ತುವ ಪ್ರೀತಿಯ ಅರ್ಥವ ಅರಿಯದೆ
ಗುಂಡು ಹೊಡೆದಿರಿ
ತೂರಿದ್ದು ಗೌರಿಗೆ ತಾಕಿದ್ದು ನಮ್ಮೆದೇಗೆ
ನೂರು ಗುಂಡುಗಳು ತೂರಿ ಬಂದರು
ಗುಡುಗುಡು ಗುಡುಗುಡು ಗುಡುಗುವೆವು

ಅಂದು ಬುದ್ಧ ಬಸವಣ್ಣ
ಇಂದು ಭೀಮನ ಮಕ್ಕಳು ನಾವಣ್ಣ
ಗಾಂಧಿಯಿಂದ ಗೌರಿಯವರೆಗೆ
ಶಾಂತಿ ಸಾರಿದವರು ಯಾರಣ್ಣ //ತೂರಿದ್ದು//

ಅಂದು ದಾಬೋಲ್ಕರ್ ಪನ್ಸಾರೆ
ಇಂದು ಕಲಬುರ್ಗಿ ಗೌರಿಯು
ಮುಂದೆ ನಾವಿರುವೆವು
ನಿಮ್ಮ ಗುಂಡಿಗೆ ಎದೆಗೊಟ್ಟು //ತೂರಿದ್ದು//

ಈ ಕಾರ್ಯಕ್ರಮದಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ದಿನೇಶ್ ಅಮಿನ್ ಮಟ್ಟು, ಡಾ. ವಿಜಯಮ್ಮ, ಶಿವಸುಂದರ್, ಕೆ.ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ, ಸುನೀಲ್ ಸಿರಸಂಗಿ, ಸಿರಿಮನೆ ನಾಗರಾಜ್, ಹೇಮಕ್ಕ ಸಿರಿಮನೆ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಹಾಗೂ ಗೌರಿ ಲಂಕೇಶ್‌ ಅಭಿಮಾನಿಗಳು ಭಾಗವಹಿಸಿದ್ದರು.

“ಒಬ್ಬ ಫ್ಯಾಸಿಸ್ಟ್‌ನ ಅಹಂಕಾರ ಭಾರತದ ಆತ್ಮಕ್ಕಿಂತ ದೊಡ್ಡದಾದದ್ದು ಯಾವಾಗ?”: ಸಂಜೀವ್ ಭಟ್ 7 ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪತ್ನಿ ಶ್ವೇತಾ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...