Homeಕರ್ನಾಟಕಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು (ಸೆಪ್ಟೆಂಬರ್ 6) ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯ ಅವರ ಸಮಾಧಿ ಬಳಿ “ಗೌರಿ ನುಡಿನಮನ” ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಗುಂಡೇಟಿಗೆ ಬಲಿಯಾದರೂ, ಅವರ ಹೋರಾಟ ಮತ್ತು ಆದರ್ಶಗಳು ಎಂದಿಗೂ ಜೀವಂತವಾಗಿವೆ ಎಂದು ಹೇಳಿದರು.

ಪ್ರತಿ ವರ್ಷ ಸೆಪ್ಟೆಂಬರ್ 5ರಂದು ನಡೆಯುವ ಈ ಕಾರ್ಯಕ್ರಮದಲ್ಲಿ, ಗೌರಿ ಲಂಕೇಶ್‌ ಅವರ ನಿಷ್ಠೆ, ಬದ್ಧತೆ ಮತ್ತು ನಿರ್ಭೀತ ಹೋರಾಟವನ್ನು ಸ್ಮರಿಸಲಾಯಿತು. ಈ ಬಾರಿ ಸೆ.5ರ ಬದಲು ಸೆ.6ರಂದು ಗೌರಿ ನುಡಿನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. “ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಮೃತಪಟ್ಟರೆ, ಅವರನ್ನು ಸ್ಮರಿಸಲು ಕೇವಲ ಕಲ್ಲಿನ ಸಮಾಧಿಗಳು ಮಾತ್ರ ಉಳಿಯುತ್ತವೆ. ಆದರೆ, ಗೌರಿ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ. ಇದಕ್ಕೆ ಕಾರಣ, ಅವರು ತಾವು ನಂಬಿದ ಸಿದ್ಧಾಂತಕ್ಕೆ, ತತ್ವಕ್ಕೆ ಕೊನೆಯವರೆಗೂ ಅಂಟಿಕೊಂಡಿದ್ದ ಬದ್ಧತೆ. ಸತ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಾದ ಅವರ ಧೈರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ” ಎಂದು ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.

ಅವರು ಮುಂದುವರೆದು, “ಗೌರಿ ಅವರ ಜೊತೆ ಜನರು ಇದ್ದರು, ಅವರ ನಂತರದ ಪೀಳಿಗೆಯೂ ಇದೆ. ಅವರು ಕೇವಲ ಪತ್ರಕರ್ತೆಯಾಗಿರಲಿಲ್ಲ, ಬದಲಿಗೆ ಸತ್ಯಪ್ರತಿಪಾದಕಿಯಾಗಿ, ಬಂಡಾಯದ ಪ್ರತೀಕವಾಗಿ ಘಮಘಮಿಸುತ್ತಲೇ ಇರುತ್ತಾರೆ. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನಾಹುತಗಳನ್ನು ಪ್ರಶ್ನಿಸಲು, ಸತ್ಯವನ್ನು ನಿರ್ಭೀತಿಯಿಂದ ಹೊರತರಲು ಗೌರಿ ಲಂಕೇಶ್‌ ತೋರಿಸಿದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು. ಯಾವುದೇ ಪ್ರಭಾವಕ್ಕೆ, ಯಾವುದೇ ಹಂಗಿಗೂ ಒಳಗಾಗದೆ, ನ್ಯಾಯ ಮತ್ತು ಸತ್ಯಕ್ಕಾಗಿ ಹೋರಾಡುವ ಮನೋಭಾವವನ್ನು ನಾವು ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಎದೆಗೆ ಗುಂಡೇಟು ಬಿದ್ದರೂ ಚಿಂತೆಯಿಲ್ಲ ಎಂಬ ರೀತಿಯಲ್ಲಿ ಸತ್ಯಶೋಧಕರಾಗಿ ನಾವು ಮುನ್ನಡೆಯಬೇಕು. ಗೌರಿ ಅವರು ನಮಗೆ ಇದೇ ಸಂದೇಶವನ್ನು ನೀಡಿದ್ದಾರೆ. ನಾವು ಈ ಸಂದೇಶಕ್ಕೆ ಬದ್ಧರಾಗಿರೋಣ” ಎಂದು ಹೇಳಿದರು. ಗೌರಿ ಲಂಕೇಶ್‌ ಅವರ ಆದರ್ಶಗಳಿಗೆ ಬದ್ಧರಾಗಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಆರಂಭದಲ್ಲಿ ರಮೇಶ್ ಗಬ್ಬೂರು ರಚನೆಯ ಈ ಕೆಳಗಿನ ಹೋರಾಟ ಗೀತೆಯನ್ನು ಕೆವಿಎಸ್‌ನ ಗುರುಬಸವ ಮತ್ತು ಸಂಗಡಿಗರು ಹಾಡಿದರು.

ಬಿತ್ತುವ ಪ್ರೀತಿಯ ಅರ್ಥವ ಅರಿಯದೆ
ಗುಂಡು ಹೊಡೆದಿರಿ
ತೂರಿದ್ದು ಗೌರಿಗೆ ತಾಕಿದ್ದು ನಮ್ಮೆದೇಗೆ
ನೂರು ಗುಂಡುಗಳು ತೂರಿ ಬಂದರು
ಗುಡುಗುಡು ಗುಡುಗುಡು ಗುಡುಗುವೆವು

ಅಂದು ಬುದ್ಧ ಬಸವಣ್ಣ
ಇಂದು ಭೀಮನ ಮಕ್ಕಳು ನಾವಣ್ಣ
ಗಾಂಧಿಯಿಂದ ಗೌರಿಯವರೆಗೆ
ಶಾಂತಿ ಸಾರಿದವರು ಯಾರಣ್ಣ //ತೂರಿದ್ದು//

ಅಂದು ದಾಬೋಲ್ಕರ್ ಪನ್ಸಾರೆ
ಇಂದು ಕಲಬುರ್ಗಿ ಗೌರಿಯು
ಮುಂದೆ ನಾವಿರುವೆವು
ನಿಮ್ಮ ಗುಂಡಿಗೆ ಎದೆಗೊಟ್ಟು //ತೂರಿದ್ದು//

ಈ ಕಾರ್ಯಕ್ರಮದಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ದಿನೇಶ್ ಅಮಿನ್ ಮಟ್ಟು, ಡಾ. ವಿಜಯಮ್ಮ, ಶಿವಸುಂದರ್, ಕೆ.ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ, ಸುನೀಲ್ ಸಿರಸಂಗಿ, ಸಿರಿಮನೆ ನಾಗರಾಜ್, ಹೇಮಕ್ಕ ಸಿರಿಮನೆ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಹಾಗೂ ಗೌರಿ ಲಂಕೇಶ್‌ ಅಭಿಮಾನಿಗಳು ಭಾಗವಹಿಸಿದ್ದರು.

“ಒಬ್ಬ ಫ್ಯಾಸಿಸ್ಟ್‌ನ ಅಹಂಕಾರ ಭಾರತದ ಆತ್ಮಕ್ಕಿಂತ ದೊಡ್ಡದಾದದ್ದು ಯಾವಾಗ?”: ಸಂಜೀವ್ ಭಟ್ 7 ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪತ್ನಿ ಶ್ವೇತಾ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...