Homeಕರ್ನಾಟಕಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು (ಸೆಪ್ಟೆಂಬರ್ 6) ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯ ಅವರ ಸಮಾಧಿ ಬಳಿ “ಗೌರಿ ನುಡಿನಮನ” ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಗುಂಡೇಟಿಗೆ ಬಲಿಯಾದರೂ, ಅವರ ಹೋರಾಟ ಮತ್ತು ಆದರ್ಶಗಳು ಎಂದಿಗೂ ಜೀವಂತವಾಗಿವೆ ಎಂದು ಹೇಳಿದರು.

ಪ್ರತಿ ವರ್ಷ ಸೆಪ್ಟೆಂಬರ್ 5ರಂದು ನಡೆಯುವ ಈ ಕಾರ್ಯಕ್ರಮದಲ್ಲಿ, ಗೌರಿ ಲಂಕೇಶ್‌ ಅವರ ನಿಷ್ಠೆ, ಬದ್ಧತೆ ಮತ್ತು ನಿರ್ಭೀತ ಹೋರಾಟವನ್ನು ಸ್ಮರಿಸಲಾಯಿತು. ಈ ಬಾರಿ ಸೆ.5ರ ಬದಲು ಸೆ.6ರಂದು ಗೌರಿ ನುಡಿನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. “ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಮೃತಪಟ್ಟರೆ, ಅವರನ್ನು ಸ್ಮರಿಸಲು ಕೇವಲ ಕಲ್ಲಿನ ಸಮಾಧಿಗಳು ಮಾತ್ರ ಉಳಿಯುತ್ತವೆ. ಆದರೆ, ಗೌರಿ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ. ಇದಕ್ಕೆ ಕಾರಣ, ಅವರು ತಾವು ನಂಬಿದ ಸಿದ್ಧಾಂತಕ್ಕೆ, ತತ್ವಕ್ಕೆ ಕೊನೆಯವರೆಗೂ ಅಂಟಿಕೊಂಡಿದ್ದ ಬದ್ಧತೆ. ಸತ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಾದ ಅವರ ಧೈರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ” ಎಂದು ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.

ಅವರು ಮುಂದುವರೆದು, “ಗೌರಿ ಅವರ ಜೊತೆ ಜನರು ಇದ್ದರು, ಅವರ ನಂತರದ ಪೀಳಿಗೆಯೂ ಇದೆ. ಅವರು ಕೇವಲ ಪತ್ರಕರ್ತೆಯಾಗಿರಲಿಲ್ಲ, ಬದಲಿಗೆ ಸತ್ಯಪ್ರತಿಪಾದಕಿಯಾಗಿ, ಬಂಡಾಯದ ಪ್ರತೀಕವಾಗಿ ಘಮಘಮಿಸುತ್ತಲೇ ಇರುತ್ತಾರೆ. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನಾಹುತಗಳನ್ನು ಪ್ರಶ್ನಿಸಲು, ಸತ್ಯವನ್ನು ನಿರ್ಭೀತಿಯಿಂದ ಹೊರತರಲು ಗೌರಿ ಲಂಕೇಶ್‌ ತೋರಿಸಿದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು. ಯಾವುದೇ ಪ್ರಭಾವಕ್ಕೆ, ಯಾವುದೇ ಹಂಗಿಗೂ ಒಳಗಾಗದೆ, ನ್ಯಾಯ ಮತ್ತು ಸತ್ಯಕ್ಕಾಗಿ ಹೋರಾಡುವ ಮನೋಭಾವವನ್ನು ನಾವು ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಎದೆಗೆ ಗುಂಡೇಟು ಬಿದ್ದರೂ ಚಿಂತೆಯಿಲ್ಲ ಎಂಬ ರೀತಿಯಲ್ಲಿ ಸತ್ಯಶೋಧಕರಾಗಿ ನಾವು ಮುನ್ನಡೆಯಬೇಕು. ಗೌರಿ ಅವರು ನಮಗೆ ಇದೇ ಸಂದೇಶವನ್ನು ನೀಡಿದ್ದಾರೆ. ನಾವು ಈ ಸಂದೇಶಕ್ಕೆ ಬದ್ಧರಾಗಿರೋಣ” ಎಂದು ಹೇಳಿದರು. ಗೌರಿ ಲಂಕೇಶ್‌ ಅವರ ಆದರ್ಶಗಳಿಗೆ ಬದ್ಧರಾಗಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಆರಂಭದಲ್ಲಿ ರಮೇಶ್ ಗಬ್ಬೂರು ರಚನೆಯ ಈ ಕೆಳಗಿನ ಹೋರಾಟ ಗೀತೆಯನ್ನು ಕೆವಿಎಸ್‌ನ ಗುರುಬಸವ ಮತ್ತು ಸಂಗಡಿಗರು ಹಾಡಿದರು.

ಬಿತ್ತುವ ಪ್ರೀತಿಯ ಅರ್ಥವ ಅರಿಯದೆ
ಗುಂಡು ಹೊಡೆದಿರಿ
ತೂರಿದ್ದು ಗೌರಿಗೆ ತಾಕಿದ್ದು ನಮ್ಮೆದೇಗೆ
ನೂರು ಗುಂಡುಗಳು ತೂರಿ ಬಂದರು
ಗುಡುಗುಡು ಗುಡುಗುಡು ಗುಡುಗುವೆವು

ಅಂದು ಬುದ್ಧ ಬಸವಣ್ಣ
ಇಂದು ಭೀಮನ ಮಕ್ಕಳು ನಾವಣ್ಣ
ಗಾಂಧಿಯಿಂದ ಗೌರಿಯವರೆಗೆ
ಶಾಂತಿ ಸಾರಿದವರು ಯಾರಣ್ಣ //ತೂರಿದ್ದು//

ಅಂದು ದಾಬೋಲ್ಕರ್ ಪನ್ಸಾರೆ
ಇಂದು ಕಲಬುರ್ಗಿ ಗೌರಿಯು
ಮುಂದೆ ನಾವಿರುವೆವು
ನಿಮ್ಮ ಗುಂಡಿಗೆ ಎದೆಗೊಟ್ಟು //ತೂರಿದ್ದು//

ಈ ಕಾರ್ಯಕ್ರಮದಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ದಿನೇಶ್ ಅಮಿನ್ ಮಟ್ಟು, ಡಾ. ವಿಜಯಮ್ಮ, ಶಿವಸುಂದರ್, ಕೆ.ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ, ಸುನೀಲ್ ಸಿರಸಂಗಿ, ಸಿರಿಮನೆ ನಾಗರಾಜ್, ಹೇಮಕ್ಕ ಸಿರಿಮನೆ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಹಾಗೂ ಗೌರಿ ಲಂಕೇಶ್‌ ಅಭಿಮಾನಿಗಳು ಭಾಗವಹಿಸಿದ್ದರು.

“ಒಬ್ಬ ಫ್ಯಾಸಿಸ್ಟ್‌ನ ಅಹಂಕಾರ ಭಾರತದ ಆತ್ಮಕ್ಕಿಂತ ದೊಡ್ಡದಾದದ್ದು ಯಾವಾಗ?”: ಸಂಜೀವ್ ಭಟ್ 7 ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪತ್ನಿ ಶ್ವೇತಾ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...