Homeಕರ್ನಾಟಕಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು (ಸೆಪ್ಟೆಂಬರ್ 6) ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯ ಅವರ ಸಮಾಧಿ ಬಳಿ “ಗೌರಿ ನುಡಿನಮನ” ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಗುಂಡೇಟಿಗೆ ಬಲಿಯಾದರೂ, ಅವರ ಹೋರಾಟ ಮತ್ತು ಆದರ್ಶಗಳು ಎಂದಿಗೂ ಜೀವಂತವಾಗಿವೆ ಎಂದು ಹೇಳಿದರು.

ಪ್ರತಿ ವರ್ಷ ಸೆಪ್ಟೆಂಬರ್ 5ರಂದು ನಡೆಯುವ ಈ ಕಾರ್ಯಕ್ರಮದಲ್ಲಿ, ಗೌರಿ ಲಂಕೇಶ್‌ ಅವರ ನಿಷ್ಠೆ, ಬದ್ಧತೆ ಮತ್ತು ನಿರ್ಭೀತ ಹೋರಾಟವನ್ನು ಸ್ಮರಿಸಲಾಯಿತು. ಈ ಬಾರಿ ಸೆ.5ರ ಬದಲು ಸೆ.6ರಂದು ಗೌರಿ ನುಡಿನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. “ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಮೃತಪಟ್ಟರೆ, ಅವರನ್ನು ಸ್ಮರಿಸಲು ಕೇವಲ ಕಲ್ಲಿನ ಸಮಾಧಿಗಳು ಮಾತ್ರ ಉಳಿಯುತ್ತವೆ. ಆದರೆ, ಗೌರಿ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ. ಇದಕ್ಕೆ ಕಾರಣ, ಅವರು ತಾವು ನಂಬಿದ ಸಿದ್ಧಾಂತಕ್ಕೆ, ತತ್ವಕ್ಕೆ ಕೊನೆಯವರೆಗೂ ಅಂಟಿಕೊಂಡಿದ್ದ ಬದ್ಧತೆ. ಸತ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಾದ ಅವರ ಧೈರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ” ಎಂದು ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.

ಅವರು ಮುಂದುವರೆದು, “ಗೌರಿ ಅವರ ಜೊತೆ ಜನರು ಇದ್ದರು, ಅವರ ನಂತರದ ಪೀಳಿಗೆಯೂ ಇದೆ. ಅವರು ಕೇವಲ ಪತ್ರಕರ್ತೆಯಾಗಿರಲಿಲ್ಲ, ಬದಲಿಗೆ ಸತ್ಯಪ್ರತಿಪಾದಕಿಯಾಗಿ, ಬಂಡಾಯದ ಪ್ರತೀಕವಾಗಿ ಘಮಘಮಿಸುತ್ತಲೇ ಇರುತ್ತಾರೆ. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನಾಹುತಗಳನ್ನು ಪ್ರಶ್ನಿಸಲು, ಸತ್ಯವನ್ನು ನಿರ್ಭೀತಿಯಿಂದ ಹೊರತರಲು ಗೌರಿ ಲಂಕೇಶ್‌ ತೋರಿಸಿದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು. ಯಾವುದೇ ಪ್ರಭಾವಕ್ಕೆ, ಯಾವುದೇ ಹಂಗಿಗೂ ಒಳಗಾಗದೆ, ನ್ಯಾಯ ಮತ್ತು ಸತ್ಯಕ್ಕಾಗಿ ಹೋರಾಡುವ ಮನೋಭಾವವನ್ನು ನಾವು ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಎದೆಗೆ ಗುಂಡೇಟು ಬಿದ್ದರೂ ಚಿಂತೆಯಿಲ್ಲ ಎಂಬ ರೀತಿಯಲ್ಲಿ ಸತ್ಯಶೋಧಕರಾಗಿ ನಾವು ಮುನ್ನಡೆಯಬೇಕು. ಗೌರಿ ಅವರು ನಮಗೆ ಇದೇ ಸಂದೇಶವನ್ನು ನೀಡಿದ್ದಾರೆ. ನಾವು ಈ ಸಂದೇಶಕ್ಕೆ ಬದ್ಧರಾಗಿರೋಣ” ಎಂದು ಹೇಳಿದರು. ಗೌರಿ ಲಂಕೇಶ್‌ ಅವರ ಆದರ್ಶಗಳಿಗೆ ಬದ್ಧರಾಗಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಆರಂಭದಲ್ಲಿ ರಮೇಶ್ ಗಬ್ಬೂರು ರಚನೆಯ ಈ ಕೆಳಗಿನ ಹೋರಾಟ ಗೀತೆಯನ್ನು ಕೆವಿಎಸ್‌ನ ಗುರುಬಸವ ಮತ್ತು ಸಂಗಡಿಗರು ಹಾಡಿದರು.

ಬಿತ್ತುವ ಪ್ರೀತಿಯ ಅರ್ಥವ ಅರಿಯದೆ
ಗುಂಡು ಹೊಡೆದಿರಿ
ತೂರಿದ್ದು ಗೌರಿಗೆ ತಾಕಿದ್ದು ನಮ್ಮೆದೇಗೆ
ನೂರು ಗುಂಡುಗಳು ತೂರಿ ಬಂದರು
ಗುಡುಗುಡು ಗುಡುಗುಡು ಗುಡುಗುವೆವು

ಅಂದು ಬುದ್ಧ ಬಸವಣ್ಣ
ಇಂದು ಭೀಮನ ಮಕ್ಕಳು ನಾವಣ್ಣ
ಗಾಂಧಿಯಿಂದ ಗೌರಿಯವರೆಗೆ
ಶಾಂತಿ ಸಾರಿದವರು ಯಾರಣ್ಣ //ತೂರಿದ್ದು//

ಅಂದು ದಾಬೋಲ್ಕರ್ ಪನ್ಸಾರೆ
ಇಂದು ಕಲಬುರ್ಗಿ ಗೌರಿಯು
ಮುಂದೆ ನಾವಿರುವೆವು
ನಿಮ್ಮ ಗುಂಡಿಗೆ ಎದೆಗೊಟ್ಟು //ತೂರಿದ್ದು//

ಈ ಕಾರ್ಯಕ್ರಮದಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ದಿನೇಶ್ ಅಮಿನ್ ಮಟ್ಟು, ಡಾ. ವಿಜಯಮ್ಮ, ಶಿವಸುಂದರ್, ಕೆ.ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ, ಸುನೀಲ್ ಸಿರಸಂಗಿ, ಸಿರಿಮನೆ ನಾಗರಾಜ್, ಹೇಮಕ್ಕ ಸಿರಿಮನೆ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಹಾಗೂ ಗೌರಿ ಲಂಕೇಶ್‌ ಅಭಿಮಾನಿಗಳು ಭಾಗವಹಿಸಿದ್ದರು.

“ಒಬ್ಬ ಫ್ಯಾಸಿಸ್ಟ್‌ನ ಅಹಂಕಾರ ಭಾರತದ ಆತ್ಮಕ್ಕಿಂತ ದೊಡ್ಡದಾದದ್ದು ಯಾವಾಗ?”: ಸಂಜೀವ್ ಭಟ್ 7 ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪತ್ನಿ ಶ್ವೇತಾ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...