Homeಕರ್ನಾಟಕಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

ಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಐದನೇ ವರ್ಷದ ಸ್ಮರಣೆಯ ಭಾಗವಾಗಿ, ಗೌರಿಯವರ ಸಮಾಧಿಗೆ ಹೋರಾಟಗಾರರು, ಗೌರಿಯ ಒಡನಾಡಿಗಳು ಹಾಗೂ ಜನಪರ ಆಶಯಗಳಿಗಾಗಿ ದುಡಿಯುತ್ತಿರುವವರು ನಮನ ಸಲ್ಲಿಸಿದರು.

ಗೌರಿ ನಡೆದ ಹಾದಿಯಲ್ಲಿ ನಾವು ಕ್ರಮಿಸಬೇಕಾದ ಅನಿವಾರ್ಯತೆ ಹಾಗೂ ಕಾಲದ ತಲ್ಲಣಗಳಿಗೆ ಗೌರಿ ಸ್ಪಂದಿಸುತ್ತಿದ್ದ ರೀತಿಯನ್ನು ಸ್ಮರಿಸಿ ಭಾವುಕರಾದರು.

ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಗೌರಿಯವರ ಒಡನಾಡಿ ನೂರ್‌ ಶ್ರೀಧರ್‌ ಮಾತನಾಡಿ, “ಇಂದು ಗೌರಿ ಇದ್ದಿದ್ದರೆ ಕರ್ನಾಟಕದ ಪರಿಸ್ಥಿತಿ ನೋಡಿ ವಿಲವಿಲ ಒದ್ದಾಡುತ್ತಿದ್ದರು. ರಾಜ್ಯಾದ್ಯಂತ ಓಡಾಡುತ್ತಿದ್ದರು. ಈ ದುರಿತ ಕಾಲದಲ್ಲಿ ಏನು ಮಾಡಬೇಕೆಂದು ಚಿಂತಿಸುತ್ತಿದ್ದರು. ಒಂದು ಕ್ಷಣ ಸಮಾಧಾನದಿಂದ ಇರುತ್ತಿದ್ದ ಜೀವವಾಗಿರಲಿಲ್ಲ ಗೌರಿ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೌರಿಯ ಆಶಯಗಳನ್ನು ಮುಂದುವರಿಸುತ್ತಲೇ ಇದ್ದೇವೆ. ಗೌರಿಯ ದನಿಯನ್ನು, ಅವರ ಪತ್ರಿಕೆಯನ್ನು ಅಡಗಿಸಬೇಕು ಎಂದು ಹತ್ಯೆ ಮಾಡಿದರು. ಆದರೆ ಎಲ್ಲ ಸವಾಲುಗಳ ನಡುವೆಯೇ ಗೌರಿಯ ಪತ್ರಿಕೆಯನ್ನು ಮುಂದುವರಿಸಿದ್ದೇವೆ. ಟಾಬ್ಲ್ಯಾಡ್ ಕಾಲ ಮುಗಿಯಿತು, ವಾರಪತ್ರಿಕೆಗಳನ್ನು ಇನ್ನು ಮುಂದೆ ತರಲು ಸಾಧ್ಯವಿಲ್ಲ  ಅದೆಲ್ಲಾ ಅಭಿಪ್ರಾಯಗಳು ಬಂದವು. ಗೌರಿಯ ದನಿಯನ್ನು ನಿಲ್ಲಿಸಬಾರದೆಂದು ಪತ್ರಿಕೆಯನ್ನು ಹೊರತರುತ್ತಿದ್ದೇವೆ” ಎಂದು ತಿಳಿಸಿದರು.

“ಪತ್ರಿಕೆಯ ಹಿಂದಿನ ನೋವೇನು ಎಂಬುದು ಅನೇಕರಿಗೆ ಗೊತ್ತಿಲ್ಲ. ಗೌರಿಯ ಜೊತೆ ಕೆಲಸ ಮಾಡಿದ ತಂಡ ಚದುರಿಹೋಗಲಿಲ್ಲ. ಗೌರಿಯ ಆಶಯಗಳ ಜೊತೆ ನಿಂತು, ಅರ್ಧ ಸಂಬಳದಲ್ಲಿ ಕೆಲಸ ಮಾಡಿತು. ಕೆಲವು ಸಲ ಸಂಬಳವೇ ಇರಲಿಲ್ಲ. ಆದರೂ ಲಕ್ಷಾಂತರ ರೂಪಾಯಿ ಸಾಲವನ್ನು ತಲೆಯ ಮೇಲೆ ಹಾಕಿಕೊಂಡು ಪತ್ರಿಕೆಯನ್ನು ಮುಂದುವರಿಸಿದ್ದಾರೆ” ಎಂದು ಹೇಳಿದರು.

ಪತ್ರಿಕೆಯಷ್ಟೇ ಅಲ್ಲ, ಆಧುನಿಕ ಕಾಲಕ್ಕೆ ಹೊಂದಿಕೊಳ್ಳಬೇಕೆಂದು ಗೌರಿ ಬಯಸುತ್ತಿದ್ದರು. ಅದರ ಭಾಗವಾಗಿ ‘ನಾನುಗೌರಿ.ಕಾಂ’, ‘ಗೌರಿಲಂಕೇಶ್.ಕಾಂ’ (ಇಂಗ್ಲಿಷ್‌) ವೆಬ್‌ಸೈಟ್‌ಗಳು ಕೆಲಸ ಮಾಡುತ್ತಿವೆ. ಗೌರಿಯ ಹೆಸರಲ್ಲಿ ಪತ್ರಿಕೆಯನ್ನು ಮುಂದುವರಿಸಲು ಸರ್ಕಾರ ಅವಕಾಶ ಕೊಡಲಿಲ್ಲ. ಸ್ನೇಹಿತರು ತರುತ್ತಿದ್ದ ‘ನ್ಯಾಯಪಥ’ವನ್ನೇ ಗೌರಿಪತ್ರಿಕೆಯಾಗಿ ಮುಂದುವರಿಸಿಕೊಂಡು ಬಂದಿದ್ದೇವೆ ಎಂದು ವಿವರಿಸಿದರು.

ಮೊದಲೆಲ್ಲ ಪೀತ ಪತ್ರಿಕೋದ್ಯಮವಿತ್ತು. ಈಗ ಪ್ರೇತ ಪತ್ರಿಕೋದ್ಯಮ ಬಂದಿದೆ. ಇದರ ನಡುವೆ ಚಳವಳಿಗೆ ಬೆನ್ನೆಲುಬಾಗಿರುವ ಮಾಧ್ಯಮಗಳಿವೆ. ಪ್ರೇತ ಪತ್ರಿಕೋದ್ಯಮ ವಿರುದ್ಧ ‘ಪ್ರೀತಿ’ ಪತ್ರಿಕೋದ್ಯಮ ಬೆಳೆಯುತ್ತಿದೆ. ‘ವಾರ್ತಾಭಾರತಿ’, ‘ಈದಿನ.ಕಾಂ’, ‘ಪೀಪಲ್‌.ಕಾಂ’, ‘ಕನ್ನಡಒನ್‌.ಕಾಂ’, ‘ಪ್ರಜಾವಾಣಿ’, ‘ಹಿಂದೂ’ ಮೊದಲಾದ ಮಾಧ್ಯಮಗಳು ಚಳವಳಿಯನ್ನು ಮುಂದುವರಿಸಿವೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಅಕ್ಕಮಹಾದೇವಿ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಸಬೀಹ ಭೂಮಿಗೌಡ ಮಾತನಾಡಿ, “ಗೌರಿಯನ್ನು ಕೊಂದ ಶಕ್ತಿಗಳು ಮತ್ತಷ್ಟು ಬೆಳೆಯುತ್ತಿವೆ. ಕ್ರೌರ್ಯವನ್ನು ಮತ್ತಷ್ಟು ಹರಡುತ್ತಿವೆ. ಆದರೆ ಗೌರಿ ನಮ್ಮನ್ನು ಎಚ್ಚರಿಸುತ್ತಿದ್ದಾಳೆ. ನಾವು ಮಾಡುತ್ತಿರುತವ ಕೆಲಸ ಸಾಲುತ್ತಿಲ್ಲ ಎನ್ನುತ್ತಿಲ್ಲ” ಎಂದು ಎಚ್ಚರಿಸಿದರು.

ವಕೀಲರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಗೌರಿ ಇಂಗ್ಲಿಷ್‌ ಪತ್ರಿಕೋದ್ಯಮದಿಂದ ಕನ್ನಡಕ್ಕೆ ಬಂದವರು. ಕನ್ನಡ ಭಾಷೆ ಮೇಲೆ ಸಾಹಿತ್ಯಾತ್ಮಕ ಪ್ರಭುತ್ವ ಸಾಧಿಸಲಿಲ್ಲ. ಅವರ ಬರಹದಲ್ಲಿ ಸಾಹಿತ್ಯಿಕ ಶಬ್ದಗಳಿರಲಿಲ್ಲ. ಆದರೂ ಏಕೆ ಗೌರಿಯವರ ಬರಹ ಅವರನ್ನು ಚುಚ್ಚಿತು? ಕೇವಲ ಹತ್ತು ವರ್ಷಗಳಲ್ಲಿ ಅವರನ್ನು ಕೊಲ್ಲುವಂತೆ ಪ್ರೇರೇಪಿಸಿತು? ಏಕೆಂದರೆ ಅವರ ಬರಹದಲ್ಲಿ ನೈಜತೆ ಇತ್ತು. ಜನರ ಬಗ್ಗೆ ನಿಜವಾದ ಕಾಳಜಿ ಇತ್ತು” ಎಂದು ಹೇಳಿದರು.

ಇದನ್ನೂ ಓದಿರಿ: ಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

ಮನುಸ್ಮೃತಿ ಹಾಗೂ ಒಡೆದು ಆಳುವ ಮನಸ್ಥಿತಿಗಳಿಗೆ ಗೌರಿಯ ಕಾಳಜಿಗಳು ಆತಂಕ ತಂದಿದ್ದವು. ಗೌರಿಯನ್ನು ಕೊಂದರೆ ಮೇಲುಗೈ ಸಾಧಿಸಬಹುದು ಎಂದು ಭಾವಿಸಿದರು. ಆದರೆ ಗೌರಿ ಹತ್ಯೆಯ ಬಳಿಕ ಜನರು ಒಂದಾಗಿ ನಿಂತರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಸೃಷ್ಟಿಯಾಯಿತು. ಆ ನಂತರದಲ್ಲಿ ಈ ಕೊಲೆಗಡುಕರು ಹತ್ಯೆಗೆ ಕೈ ಹಾಕಿಲ್ಲ. ಆದರೆ ಬೇರೆ ಆಯಾಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಸತ್ಯಕ್ಕೆ ಕನ್ನಡಿ ಹಿಡಿದವರನ್ನು ಜೈಲಿಗೆ ಹಾಕುವ ಕೆಲಸ ಮಾಡುತ್ತಿದ್ದಾರೆ. ತೀಸ್ತಾ ಸೆಟಲ್ವಾಡ್‌ ಹಾಗೂ ಮೊಹಮ್ಮದ್‌ ಜುಬೇರ್‌ ಪ್ರಕರಣ ಇತ್ತೀಚಿನ ಉದಾಹರಣೆಗಳಾಗಿವೆ. ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದನ್ನು ನೋಡಿದ್ದೇವೆ. ಈ ಬೆಳವಣಿಗೆಗಳ ಹಿಂದಿನ ಮನಸ್ಥಿತಿಗಳನ್ನು ಒಡೆದು ಓಡಿಸಬೇಕಾಗಿದೆ ಎಂದು ಆಶಿಸಿದರು.

ಮಾಜಿ ಐಎಎಸ್ ಅಧಿಕಾರಿಯಾದ ಸಸಿಕಾಂತ್ ಸೆಂಥಿಲ್‌ ಮಾತನಾಡಿ, “ಗೌರಿಯ ಕೆಲಸವನ್ನು ಮುಂದುವರಿಸಲು ನಾವೆಲ್ಲ ಜೊತೆಗಿರುತ್ತೇವೆ. ಇದು ವ್ಯಕ್ತಿಗಳ ಜೊತೆಗಿನ ಸಮಸ್ಯೆಯಲ್ಲ, ಮನಸ್ಥಿತಿಗಳ ಜೊತೆಗಿನ ಹೋರಾಟ” ಎಂದರು.

ಗೌರಿಯವರ ತಾಯಿ ಇಂದಿರಾ ಲಂಕೇಶ್‌, ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಗೌರಿ ಸ್ಮಾರಕ ಟ್ರಸ್ಟ್ ಸದಸ್ಯರಾದ ಪ್ರೊ.ವಿ.ಎಸ್ ಶ್ರೀಧರ್, ದೀಪು, ಕೆ.ಎಲ್ ಅಶೋಕ್, ಬಹುಭಾಷ ನಟ ಪ್ರಕಾಶ್ ರಾಜ್,  ಸಾಮಾಜಿಕ ಹೋರಾಟಗಾರ್ತಿಯರಾದ ಅಕ್ಕೈ ಪದ್ಮಶಾಲಿ, ದು.ಸರಸ್ವತಿ, ಚಿಂತಕ ಶಿವಸುಂದರ್, ಸಿನಿಮಾ ನಿರ್ದೇಶಕ ಸಂಜಯ್ ಕಾಕ್, ಪ್ರೊ.ನಗರಿ ಬಾಬಯ್ಯ, ಇರ್ಷಾದ್ ಅಹಮದ್ ದೇಶಾಯಿ, ಕಲೀಂಉಲ್ಲಾ, ಮಲ್ಲಿಗೆ ಸಿರಿಮನೆ, ಡಿ.ಎನ್.ಗುರುಪ್ರಸಾದ್ ಸೇರಿದಂತೆ ಇತರರು ನಮನ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...