Homeಕರ್ನಾಟಕಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

ಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಐದನೇ ವರ್ಷದ ಸ್ಮರಣೆಯ ಭಾಗವಾಗಿ, ಗೌರಿಯವರ ಸಮಾಧಿಗೆ ಹೋರಾಟಗಾರರು, ಗೌರಿಯ ಒಡನಾಡಿಗಳು ಹಾಗೂ ಜನಪರ ಆಶಯಗಳಿಗಾಗಿ ದುಡಿಯುತ್ತಿರುವವರು ನಮನ ಸಲ್ಲಿಸಿದರು.

ಗೌರಿ ನಡೆದ ಹಾದಿಯಲ್ಲಿ ನಾವು ಕ್ರಮಿಸಬೇಕಾದ ಅನಿವಾರ್ಯತೆ ಹಾಗೂ ಕಾಲದ ತಲ್ಲಣಗಳಿಗೆ ಗೌರಿ ಸ್ಪಂದಿಸುತ್ತಿದ್ದ ರೀತಿಯನ್ನು ಸ್ಮರಿಸಿ ಭಾವುಕರಾದರು.

ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಗೌರಿಯವರ ಒಡನಾಡಿ ನೂರ್‌ ಶ್ರೀಧರ್‌ ಮಾತನಾಡಿ, “ಇಂದು ಗೌರಿ ಇದ್ದಿದ್ದರೆ ಕರ್ನಾಟಕದ ಪರಿಸ್ಥಿತಿ ನೋಡಿ ವಿಲವಿಲ ಒದ್ದಾಡುತ್ತಿದ್ದರು. ರಾಜ್ಯಾದ್ಯಂತ ಓಡಾಡುತ್ತಿದ್ದರು. ಈ ದುರಿತ ಕಾಲದಲ್ಲಿ ಏನು ಮಾಡಬೇಕೆಂದು ಚಿಂತಿಸುತ್ತಿದ್ದರು. ಒಂದು ಕ್ಷಣ ಸಮಾಧಾನದಿಂದ ಇರುತ್ತಿದ್ದ ಜೀವವಾಗಿರಲಿಲ್ಲ ಗೌರಿ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೌರಿಯ ಆಶಯಗಳನ್ನು ಮುಂದುವರಿಸುತ್ತಲೇ ಇದ್ದೇವೆ. ಗೌರಿಯ ದನಿಯನ್ನು, ಅವರ ಪತ್ರಿಕೆಯನ್ನು ಅಡಗಿಸಬೇಕು ಎಂದು ಹತ್ಯೆ ಮಾಡಿದರು. ಆದರೆ ಎಲ್ಲ ಸವಾಲುಗಳ ನಡುವೆಯೇ ಗೌರಿಯ ಪತ್ರಿಕೆಯನ್ನು ಮುಂದುವರಿಸಿದ್ದೇವೆ. ಟಾಬ್ಲ್ಯಾಡ್ ಕಾಲ ಮುಗಿಯಿತು, ವಾರಪತ್ರಿಕೆಗಳನ್ನು ಇನ್ನು ಮುಂದೆ ತರಲು ಸಾಧ್ಯವಿಲ್ಲ  ಅದೆಲ್ಲಾ ಅಭಿಪ್ರಾಯಗಳು ಬಂದವು. ಗೌರಿಯ ದನಿಯನ್ನು ನಿಲ್ಲಿಸಬಾರದೆಂದು ಪತ್ರಿಕೆಯನ್ನು ಹೊರತರುತ್ತಿದ್ದೇವೆ” ಎಂದು ತಿಳಿಸಿದರು.

“ಪತ್ರಿಕೆಯ ಹಿಂದಿನ ನೋವೇನು ಎಂಬುದು ಅನೇಕರಿಗೆ ಗೊತ್ತಿಲ್ಲ. ಗೌರಿಯ ಜೊತೆ ಕೆಲಸ ಮಾಡಿದ ತಂಡ ಚದುರಿಹೋಗಲಿಲ್ಲ. ಗೌರಿಯ ಆಶಯಗಳ ಜೊತೆ ನಿಂತು, ಅರ್ಧ ಸಂಬಳದಲ್ಲಿ ಕೆಲಸ ಮಾಡಿತು. ಕೆಲವು ಸಲ ಸಂಬಳವೇ ಇರಲಿಲ್ಲ. ಆದರೂ ಲಕ್ಷಾಂತರ ರೂಪಾಯಿ ಸಾಲವನ್ನು ತಲೆಯ ಮೇಲೆ ಹಾಕಿಕೊಂಡು ಪತ್ರಿಕೆಯನ್ನು ಮುಂದುವರಿಸಿದ್ದಾರೆ” ಎಂದು ಹೇಳಿದರು.

ಪತ್ರಿಕೆಯಷ್ಟೇ ಅಲ್ಲ, ಆಧುನಿಕ ಕಾಲಕ್ಕೆ ಹೊಂದಿಕೊಳ್ಳಬೇಕೆಂದು ಗೌರಿ ಬಯಸುತ್ತಿದ್ದರು. ಅದರ ಭಾಗವಾಗಿ ‘ನಾನುಗೌರಿ.ಕಾಂ’, ‘ಗೌರಿಲಂಕೇಶ್.ಕಾಂ’ (ಇಂಗ್ಲಿಷ್‌) ವೆಬ್‌ಸೈಟ್‌ಗಳು ಕೆಲಸ ಮಾಡುತ್ತಿವೆ. ಗೌರಿಯ ಹೆಸರಲ್ಲಿ ಪತ್ರಿಕೆಯನ್ನು ಮುಂದುವರಿಸಲು ಸರ್ಕಾರ ಅವಕಾಶ ಕೊಡಲಿಲ್ಲ. ಸ್ನೇಹಿತರು ತರುತ್ತಿದ್ದ ‘ನ್ಯಾಯಪಥ’ವನ್ನೇ ಗೌರಿಪತ್ರಿಕೆಯಾಗಿ ಮುಂದುವರಿಸಿಕೊಂಡು ಬಂದಿದ್ದೇವೆ ಎಂದು ವಿವರಿಸಿದರು.

ಮೊದಲೆಲ್ಲ ಪೀತ ಪತ್ರಿಕೋದ್ಯಮವಿತ್ತು. ಈಗ ಪ್ರೇತ ಪತ್ರಿಕೋದ್ಯಮ ಬಂದಿದೆ. ಇದರ ನಡುವೆ ಚಳವಳಿಗೆ ಬೆನ್ನೆಲುಬಾಗಿರುವ ಮಾಧ್ಯಮಗಳಿವೆ. ಪ್ರೇತ ಪತ್ರಿಕೋದ್ಯಮ ವಿರುದ್ಧ ‘ಪ್ರೀತಿ’ ಪತ್ರಿಕೋದ್ಯಮ ಬೆಳೆಯುತ್ತಿದೆ. ‘ವಾರ್ತಾಭಾರತಿ’, ‘ಈದಿನ.ಕಾಂ’, ‘ಪೀಪಲ್‌.ಕಾಂ’, ‘ಕನ್ನಡಒನ್‌.ಕಾಂ’, ‘ಪ್ರಜಾವಾಣಿ’, ‘ಹಿಂದೂ’ ಮೊದಲಾದ ಮಾಧ್ಯಮಗಳು ಚಳವಳಿಯನ್ನು ಮುಂದುವರಿಸಿವೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಅಕ್ಕಮಹಾದೇವಿ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಸಬೀಹ ಭೂಮಿಗೌಡ ಮಾತನಾಡಿ, “ಗೌರಿಯನ್ನು ಕೊಂದ ಶಕ್ತಿಗಳು ಮತ್ತಷ್ಟು ಬೆಳೆಯುತ್ತಿವೆ. ಕ್ರೌರ್ಯವನ್ನು ಮತ್ತಷ್ಟು ಹರಡುತ್ತಿವೆ. ಆದರೆ ಗೌರಿ ನಮ್ಮನ್ನು ಎಚ್ಚರಿಸುತ್ತಿದ್ದಾಳೆ. ನಾವು ಮಾಡುತ್ತಿರುತವ ಕೆಲಸ ಸಾಲುತ್ತಿಲ್ಲ ಎನ್ನುತ್ತಿಲ್ಲ” ಎಂದು ಎಚ್ಚರಿಸಿದರು.

ವಕೀಲರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಗೌರಿ ಇಂಗ್ಲಿಷ್‌ ಪತ್ರಿಕೋದ್ಯಮದಿಂದ ಕನ್ನಡಕ್ಕೆ ಬಂದವರು. ಕನ್ನಡ ಭಾಷೆ ಮೇಲೆ ಸಾಹಿತ್ಯಾತ್ಮಕ ಪ್ರಭುತ್ವ ಸಾಧಿಸಲಿಲ್ಲ. ಅವರ ಬರಹದಲ್ಲಿ ಸಾಹಿತ್ಯಿಕ ಶಬ್ದಗಳಿರಲಿಲ್ಲ. ಆದರೂ ಏಕೆ ಗೌರಿಯವರ ಬರಹ ಅವರನ್ನು ಚುಚ್ಚಿತು? ಕೇವಲ ಹತ್ತು ವರ್ಷಗಳಲ್ಲಿ ಅವರನ್ನು ಕೊಲ್ಲುವಂತೆ ಪ್ರೇರೇಪಿಸಿತು? ಏಕೆಂದರೆ ಅವರ ಬರಹದಲ್ಲಿ ನೈಜತೆ ಇತ್ತು. ಜನರ ಬಗ್ಗೆ ನಿಜವಾದ ಕಾಳಜಿ ಇತ್ತು” ಎಂದು ಹೇಳಿದರು.

ಇದನ್ನೂ ಓದಿರಿ: ಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

ಮನುಸ್ಮೃತಿ ಹಾಗೂ ಒಡೆದು ಆಳುವ ಮನಸ್ಥಿತಿಗಳಿಗೆ ಗೌರಿಯ ಕಾಳಜಿಗಳು ಆತಂಕ ತಂದಿದ್ದವು. ಗೌರಿಯನ್ನು ಕೊಂದರೆ ಮೇಲುಗೈ ಸಾಧಿಸಬಹುದು ಎಂದು ಭಾವಿಸಿದರು. ಆದರೆ ಗೌರಿ ಹತ್ಯೆಯ ಬಳಿಕ ಜನರು ಒಂದಾಗಿ ನಿಂತರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಸೃಷ್ಟಿಯಾಯಿತು. ಆ ನಂತರದಲ್ಲಿ ಈ ಕೊಲೆಗಡುಕರು ಹತ್ಯೆಗೆ ಕೈ ಹಾಕಿಲ್ಲ. ಆದರೆ ಬೇರೆ ಆಯಾಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಸತ್ಯಕ್ಕೆ ಕನ್ನಡಿ ಹಿಡಿದವರನ್ನು ಜೈಲಿಗೆ ಹಾಕುವ ಕೆಲಸ ಮಾಡುತ್ತಿದ್ದಾರೆ. ತೀಸ್ತಾ ಸೆಟಲ್ವಾಡ್‌ ಹಾಗೂ ಮೊಹಮ್ಮದ್‌ ಜುಬೇರ್‌ ಪ್ರಕರಣ ಇತ್ತೀಚಿನ ಉದಾಹರಣೆಗಳಾಗಿವೆ. ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದನ್ನು ನೋಡಿದ್ದೇವೆ. ಈ ಬೆಳವಣಿಗೆಗಳ ಹಿಂದಿನ ಮನಸ್ಥಿತಿಗಳನ್ನು ಒಡೆದು ಓಡಿಸಬೇಕಾಗಿದೆ ಎಂದು ಆಶಿಸಿದರು.

ಮಾಜಿ ಐಎಎಸ್ ಅಧಿಕಾರಿಯಾದ ಸಸಿಕಾಂತ್ ಸೆಂಥಿಲ್‌ ಮಾತನಾಡಿ, “ಗೌರಿಯ ಕೆಲಸವನ್ನು ಮುಂದುವರಿಸಲು ನಾವೆಲ್ಲ ಜೊತೆಗಿರುತ್ತೇವೆ. ಇದು ವ್ಯಕ್ತಿಗಳ ಜೊತೆಗಿನ ಸಮಸ್ಯೆಯಲ್ಲ, ಮನಸ್ಥಿತಿಗಳ ಜೊತೆಗಿನ ಹೋರಾಟ” ಎಂದರು.

ಗೌರಿಯವರ ತಾಯಿ ಇಂದಿರಾ ಲಂಕೇಶ್‌, ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಗೌರಿ ಸ್ಮಾರಕ ಟ್ರಸ್ಟ್ ಸದಸ್ಯರಾದ ಪ್ರೊ.ವಿ.ಎಸ್ ಶ್ರೀಧರ್, ದೀಪು, ಕೆ.ಎಲ್ ಅಶೋಕ್, ಬಹುಭಾಷ ನಟ ಪ್ರಕಾಶ್ ರಾಜ್,  ಸಾಮಾಜಿಕ ಹೋರಾಟಗಾರ್ತಿಯರಾದ ಅಕ್ಕೈ ಪದ್ಮಶಾಲಿ, ದು.ಸರಸ್ವತಿ, ಚಿಂತಕ ಶಿವಸುಂದರ್, ಸಿನಿಮಾ ನಿರ್ದೇಶಕ ಸಂಜಯ್ ಕಾಕ್, ಪ್ರೊ.ನಗರಿ ಬಾಬಯ್ಯ, ಇರ್ಷಾದ್ ಅಹಮದ್ ದೇಶಾಯಿ, ಕಲೀಂಉಲ್ಲಾ, ಮಲ್ಲಿಗೆ ಸಿರಿಮನೆ, ಡಿ.ಎನ್.ಗುರುಪ್ರಸಾದ್ ಸೇರಿದಂತೆ ಇತರರು ನಮನ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...