Homeಕರ್ನಾಟಕಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

ಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಐದನೇ ವರ್ಷದ ಸ್ಮರಣೆಯ ಭಾಗವಾಗಿ, ಗೌರಿಯವರ ಸಮಾಧಿಗೆ ಹೋರಾಟಗಾರರು, ಗೌರಿಯ ಒಡನಾಡಿಗಳು ಹಾಗೂ ಜನಪರ ಆಶಯಗಳಿಗಾಗಿ ದುಡಿಯುತ್ತಿರುವವರು ನಮನ ಸಲ್ಲಿಸಿದರು.

ಗೌರಿ ನಡೆದ ಹಾದಿಯಲ್ಲಿ ನಾವು ಕ್ರಮಿಸಬೇಕಾದ ಅನಿವಾರ್ಯತೆ ಹಾಗೂ ಕಾಲದ ತಲ್ಲಣಗಳಿಗೆ ಗೌರಿ ಸ್ಪಂದಿಸುತ್ತಿದ್ದ ರೀತಿಯನ್ನು ಸ್ಮರಿಸಿ ಭಾವುಕರಾದರು.

ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಗೌರಿಯವರ ಒಡನಾಡಿ ನೂರ್‌ ಶ್ರೀಧರ್‌ ಮಾತನಾಡಿ, “ಇಂದು ಗೌರಿ ಇದ್ದಿದ್ದರೆ ಕರ್ನಾಟಕದ ಪರಿಸ್ಥಿತಿ ನೋಡಿ ವಿಲವಿಲ ಒದ್ದಾಡುತ್ತಿದ್ದರು. ರಾಜ್ಯಾದ್ಯಂತ ಓಡಾಡುತ್ತಿದ್ದರು. ಈ ದುರಿತ ಕಾಲದಲ್ಲಿ ಏನು ಮಾಡಬೇಕೆಂದು ಚಿಂತಿಸುತ್ತಿದ್ದರು. ಒಂದು ಕ್ಷಣ ಸಮಾಧಾನದಿಂದ ಇರುತ್ತಿದ್ದ ಜೀವವಾಗಿರಲಿಲ್ಲ ಗೌರಿ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೌರಿಯ ಆಶಯಗಳನ್ನು ಮುಂದುವರಿಸುತ್ತಲೇ ಇದ್ದೇವೆ. ಗೌರಿಯ ದನಿಯನ್ನು, ಅವರ ಪತ್ರಿಕೆಯನ್ನು ಅಡಗಿಸಬೇಕು ಎಂದು ಹತ್ಯೆ ಮಾಡಿದರು. ಆದರೆ ಎಲ್ಲ ಸವಾಲುಗಳ ನಡುವೆಯೇ ಗೌರಿಯ ಪತ್ರಿಕೆಯನ್ನು ಮುಂದುವರಿಸಿದ್ದೇವೆ. ಟಾಬ್ಲ್ಯಾಡ್ ಕಾಲ ಮುಗಿಯಿತು, ವಾರಪತ್ರಿಕೆಗಳನ್ನು ಇನ್ನು ಮುಂದೆ ತರಲು ಸಾಧ್ಯವಿಲ್ಲ  ಅದೆಲ್ಲಾ ಅಭಿಪ್ರಾಯಗಳು ಬಂದವು. ಗೌರಿಯ ದನಿಯನ್ನು ನಿಲ್ಲಿಸಬಾರದೆಂದು ಪತ್ರಿಕೆಯನ್ನು ಹೊರತರುತ್ತಿದ್ದೇವೆ” ಎಂದು ತಿಳಿಸಿದರು.

“ಪತ್ರಿಕೆಯ ಹಿಂದಿನ ನೋವೇನು ಎಂಬುದು ಅನೇಕರಿಗೆ ಗೊತ್ತಿಲ್ಲ. ಗೌರಿಯ ಜೊತೆ ಕೆಲಸ ಮಾಡಿದ ತಂಡ ಚದುರಿಹೋಗಲಿಲ್ಲ. ಗೌರಿಯ ಆಶಯಗಳ ಜೊತೆ ನಿಂತು, ಅರ್ಧ ಸಂಬಳದಲ್ಲಿ ಕೆಲಸ ಮಾಡಿತು. ಕೆಲವು ಸಲ ಸಂಬಳವೇ ಇರಲಿಲ್ಲ. ಆದರೂ ಲಕ್ಷಾಂತರ ರೂಪಾಯಿ ಸಾಲವನ್ನು ತಲೆಯ ಮೇಲೆ ಹಾಕಿಕೊಂಡು ಪತ್ರಿಕೆಯನ್ನು ಮುಂದುವರಿಸಿದ್ದಾರೆ” ಎಂದು ಹೇಳಿದರು.

ಪತ್ರಿಕೆಯಷ್ಟೇ ಅಲ್ಲ, ಆಧುನಿಕ ಕಾಲಕ್ಕೆ ಹೊಂದಿಕೊಳ್ಳಬೇಕೆಂದು ಗೌರಿ ಬಯಸುತ್ತಿದ್ದರು. ಅದರ ಭಾಗವಾಗಿ ‘ನಾನುಗೌರಿ.ಕಾಂ’, ‘ಗೌರಿಲಂಕೇಶ್.ಕಾಂ’ (ಇಂಗ್ಲಿಷ್‌) ವೆಬ್‌ಸೈಟ್‌ಗಳು ಕೆಲಸ ಮಾಡುತ್ತಿವೆ. ಗೌರಿಯ ಹೆಸರಲ್ಲಿ ಪತ್ರಿಕೆಯನ್ನು ಮುಂದುವರಿಸಲು ಸರ್ಕಾರ ಅವಕಾಶ ಕೊಡಲಿಲ್ಲ. ಸ್ನೇಹಿತರು ತರುತ್ತಿದ್ದ ‘ನ್ಯಾಯಪಥ’ವನ್ನೇ ಗೌರಿಪತ್ರಿಕೆಯಾಗಿ ಮುಂದುವರಿಸಿಕೊಂಡು ಬಂದಿದ್ದೇವೆ ಎಂದು ವಿವರಿಸಿದರು.

ಮೊದಲೆಲ್ಲ ಪೀತ ಪತ್ರಿಕೋದ್ಯಮವಿತ್ತು. ಈಗ ಪ್ರೇತ ಪತ್ರಿಕೋದ್ಯಮ ಬಂದಿದೆ. ಇದರ ನಡುವೆ ಚಳವಳಿಗೆ ಬೆನ್ನೆಲುಬಾಗಿರುವ ಮಾಧ್ಯಮಗಳಿವೆ. ಪ್ರೇತ ಪತ್ರಿಕೋದ್ಯಮ ವಿರುದ್ಧ ‘ಪ್ರೀತಿ’ ಪತ್ರಿಕೋದ್ಯಮ ಬೆಳೆಯುತ್ತಿದೆ. ‘ವಾರ್ತಾಭಾರತಿ’, ‘ಈದಿನ.ಕಾಂ’, ‘ಪೀಪಲ್‌.ಕಾಂ’, ‘ಕನ್ನಡಒನ್‌.ಕಾಂ’, ‘ಪ್ರಜಾವಾಣಿ’, ‘ಹಿಂದೂ’ ಮೊದಲಾದ ಮಾಧ್ಯಮಗಳು ಚಳವಳಿಯನ್ನು ಮುಂದುವರಿಸಿವೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಅಕ್ಕಮಹಾದೇವಿ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಸಬೀಹ ಭೂಮಿಗೌಡ ಮಾತನಾಡಿ, “ಗೌರಿಯನ್ನು ಕೊಂದ ಶಕ್ತಿಗಳು ಮತ್ತಷ್ಟು ಬೆಳೆಯುತ್ತಿವೆ. ಕ್ರೌರ್ಯವನ್ನು ಮತ್ತಷ್ಟು ಹರಡುತ್ತಿವೆ. ಆದರೆ ಗೌರಿ ನಮ್ಮನ್ನು ಎಚ್ಚರಿಸುತ್ತಿದ್ದಾಳೆ. ನಾವು ಮಾಡುತ್ತಿರುತವ ಕೆಲಸ ಸಾಲುತ್ತಿಲ್ಲ ಎನ್ನುತ್ತಿಲ್ಲ” ಎಂದು ಎಚ್ಚರಿಸಿದರು.

ವಕೀಲರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಗೌರಿ ಇಂಗ್ಲಿಷ್‌ ಪತ್ರಿಕೋದ್ಯಮದಿಂದ ಕನ್ನಡಕ್ಕೆ ಬಂದವರು. ಕನ್ನಡ ಭಾಷೆ ಮೇಲೆ ಸಾಹಿತ್ಯಾತ್ಮಕ ಪ್ರಭುತ್ವ ಸಾಧಿಸಲಿಲ್ಲ. ಅವರ ಬರಹದಲ್ಲಿ ಸಾಹಿತ್ಯಿಕ ಶಬ್ದಗಳಿರಲಿಲ್ಲ. ಆದರೂ ಏಕೆ ಗೌರಿಯವರ ಬರಹ ಅವರನ್ನು ಚುಚ್ಚಿತು? ಕೇವಲ ಹತ್ತು ವರ್ಷಗಳಲ್ಲಿ ಅವರನ್ನು ಕೊಲ್ಲುವಂತೆ ಪ್ರೇರೇಪಿಸಿತು? ಏಕೆಂದರೆ ಅವರ ಬರಹದಲ್ಲಿ ನೈಜತೆ ಇತ್ತು. ಜನರ ಬಗ್ಗೆ ನಿಜವಾದ ಕಾಳಜಿ ಇತ್ತು” ಎಂದು ಹೇಳಿದರು.

ಇದನ್ನೂ ಓದಿರಿ: ಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

ಮನುಸ್ಮೃತಿ ಹಾಗೂ ಒಡೆದು ಆಳುವ ಮನಸ್ಥಿತಿಗಳಿಗೆ ಗೌರಿಯ ಕಾಳಜಿಗಳು ಆತಂಕ ತಂದಿದ್ದವು. ಗೌರಿಯನ್ನು ಕೊಂದರೆ ಮೇಲುಗೈ ಸಾಧಿಸಬಹುದು ಎಂದು ಭಾವಿಸಿದರು. ಆದರೆ ಗೌರಿ ಹತ್ಯೆಯ ಬಳಿಕ ಜನರು ಒಂದಾಗಿ ನಿಂತರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಸೃಷ್ಟಿಯಾಯಿತು. ಆ ನಂತರದಲ್ಲಿ ಈ ಕೊಲೆಗಡುಕರು ಹತ್ಯೆಗೆ ಕೈ ಹಾಕಿಲ್ಲ. ಆದರೆ ಬೇರೆ ಆಯಾಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಸತ್ಯಕ್ಕೆ ಕನ್ನಡಿ ಹಿಡಿದವರನ್ನು ಜೈಲಿಗೆ ಹಾಕುವ ಕೆಲಸ ಮಾಡುತ್ತಿದ್ದಾರೆ. ತೀಸ್ತಾ ಸೆಟಲ್ವಾಡ್‌ ಹಾಗೂ ಮೊಹಮ್ಮದ್‌ ಜುಬೇರ್‌ ಪ್ರಕರಣ ಇತ್ತೀಚಿನ ಉದಾಹರಣೆಗಳಾಗಿವೆ. ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದನ್ನು ನೋಡಿದ್ದೇವೆ. ಈ ಬೆಳವಣಿಗೆಗಳ ಹಿಂದಿನ ಮನಸ್ಥಿತಿಗಳನ್ನು ಒಡೆದು ಓಡಿಸಬೇಕಾಗಿದೆ ಎಂದು ಆಶಿಸಿದರು.

ಮಾಜಿ ಐಎಎಸ್ ಅಧಿಕಾರಿಯಾದ ಸಸಿಕಾಂತ್ ಸೆಂಥಿಲ್‌ ಮಾತನಾಡಿ, “ಗೌರಿಯ ಕೆಲಸವನ್ನು ಮುಂದುವರಿಸಲು ನಾವೆಲ್ಲ ಜೊತೆಗಿರುತ್ತೇವೆ. ಇದು ವ್ಯಕ್ತಿಗಳ ಜೊತೆಗಿನ ಸಮಸ್ಯೆಯಲ್ಲ, ಮನಸ್ಥಿತಿಗಳ ಜೊತೆಗಿನ ಹೋರಾಟ” ಎಂದರು.

ಗೌರಿಯವರ ತಾಯಿ ಇಂದಿರಾ ಲಂಕೇಶ್‌, ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಗೌರಿ ಸ್ಮಾರಕ ಟ್ರಸ್ಟ್ ಸದಸ್ಯರಾದ ಪ್ರೊ.ವಿ.ಎಸ್ ಶ್ರೀಧರ್, ದೀಪು, ಕೆ.ಎಲ್ ಅಶೋಕ್, ಬಹುಭಾಷ ನಟ ಪ್ರಕಾಶ್ ರಾಜ್,  ಸಾಮಾಜಿಕ ಹೋರಾಟಗಾರ್ತಿಯರಾದ ಅಕ್ಕೈ ಪದ್ಮಶಾಲಿ, ದು.ಸರಸ್ವತಿ, ಚಿಂತಕ ಶಿವಸುಂದರ್, ಸಿನಿಮಾ ನಿರ್ದೇಶಕ ಸಂಜಯ್ ಕಾಕ್, ಪ್ರೊ.ನಗರಿ ಬಾಬಯ್ಯ, ಇರ್ಷಾದ್ ಅಹಮದ್ ದೇಶಾಯಿ, ಕಲೀಂಉಲ್ಲಾ, ಮಲ್ಲಿಗೆ ಸಿರಿಮನೆ, ಡಿ.ಎನ್.ಗುರುಪ್ರಸಾದ್ ಸೇರಿದಂತೆ ಇತರರು ನಮನ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....