Homeರಾಷ್ಟ್ರೀಯವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

- Advertisement -
- Advertisement -

ಪ್ರಧಾನಿ ಮೋದಿ ಆಪ್ತ, ಉದ್ಯಮಿ ಗೌತಮ್ ಅದಾನಿ ಅವರು ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಫೋರ್ಬ್ಸ್‌ನ ರಿಯಲ್‌ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರು ಮೈಕ್ರೋಸಾಫ್ಟ್ ಸಹಸಂಸ್ಥಾಪಕ ಬಿಲ್ ಗೇಟ್ಸ್‌ರನ್ನು ಹಿಂದಿಕ್ಕಿ 115.5 ಬಿಲಿಯನ್ ಡಾಲರ್‌ ಮೌಲ್ಯದ ಆಸ್ತಿಯೊಂದಿಗೆ ವಿಶ್ವದ 4 ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಫೋರ್ಬ್ಸ್ ಅಂಕಿಅಂಶಗಳ ಪ್ರಕಾರ, ಅದಾನಿ ಅವರ ಸಂಪತ್ತು 2.9 ಬಿಲಿಯನ್ ಡಾಲರ್‌‌ಗೆ ಏರಿಕೆಯಾಗಿದೆ. ಕಳೆದ ವಾರ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ತಮ್ಮ ಲಾಭರಹಿತ ಸಂಸ್ಥೆಯಾದ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ಗೆ ತಮ್ಮ ಸಂಪತ್ತಿನ 20 ಬಿಲಿಯನ್ ಡಾಲರ್‌ ದೇಣಿಗೆಯನ್ನು ಘೋಷಿಸಿದ ನಂತರ ಬಿಲಿಯನೇರ್‌ಗಳ ಶ್ರೇಯಾಂಕಗಳು ಬದಲಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಷ್ಟೆ ಅಲ್ಲದೆ ರಿಲಯನ್ಸ್ ಗ್ರೂಪ್ ಮುಖ್ಯಸ್ಥ ಮುಖೇಶ್ ಅಂಬಾನಿ 87.7 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದು, ಫೋರ್ಬ್ಸ್ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ.

ಅದಾಗ್ಯೂ ಬ್ಲೂಮ್‌ಬರ್ಗ್ ಬಿಲಿಯನೇರ್ಸ್‌ ಪಟ್ಟಿಯಲ್ಲಿ ಅದಾನಿ ಇನ್ನೂ 5 ನೇ ಸ್ಥಾನದಲ್ಲಿದ್ದಾರೆ. ಬ್ಲೂಮ್‌ಬರ್ಗ್ ರಿಯಲ್ ಟೈಮ್‌ ಮಾಹಿತಿಯ ಪ್ರಕಾರ ಅವರ ಸಂಪತ್ತು 110 ಶತಕೋಟಿ ಡಾಲರ್‌ ಇತ್ತು.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿ ಗ್ರೂಪ್‌‌‌ ವ್ಯವಹಾರಗಳು ಮೂಲಸೌಕರ್ಯ, ಸರಕುಗಳು, ವಿದ್ಯುತ್ ಉತ್ಪಾದನೆ ಮತ್ತು ಪ್ರಸರಣ ಮತ್ತು ರಿಯಲ್ ಎಸ್ಟೇಟ್ ಅನ್ನು ವ್ಯಾಪಿಸಿದೆ. ಅದಾನಿ ತಮ್ಮ 60 ನೇ ಹುಟ್ಟುಹಬ್ಬದಂದು ಸಾಮಾಜಿಕ ಉದ್ದೇಶಗಳಿಗಾಗಿ 60,000 ಕೋಟಿ ರೂ. ನೀಡಿದ್ದರು. ಅದಾನಿ ಫೌಂಡೇಶನ್ ನಿರ್ವಹಣೆಯ ಅಡಿಯಲ್ಲಿ ಈ ದೇಣಿಗೆಯನ್ನು ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗಾಗಿ ಬಳಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...