Homeಮುಖಪುಟಛತ್ತೀಸ್‌ಗಢದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಗೌತಮ್ ಅದಾನಿ ಘೋಷಣೆ

ಛತ್ತೀಸ್‌ಗಢದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಗೌತಮ್ ಅದಾನಿ ಘೋಷಣೆ

ಛತ್ತೀಸ್‌ಗಢದಲ್ಲಿ ₹65,000 ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಗ್ರೂಪ್ ಘೋಷಿಸಿದೆ. ಇದೇ ವೇಳೆ ಅಲ್ಲಿ 14 ಮಂದಿ ನಕ್ಸಲರ ಹತ್ಯೆಯಾಗಿದೆ.

- Advertisement -
- Advertisement -

ಕೈಗಾರಿಕೋದ್ಯಮಿ ಗೌತಮ್ ಅದಾನಿ ಭಾನುವಾರ (ಜ.12) ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರನ್ನು ಭೇಟಿ ಮಾಡಿ ಅದಾನಿ ಗ್ರೂಪ್‌ನ ಇಂಧನ ಮತ್ತು ಸಿಮೆಂಟ್ ಯೋಜನೆಗಳಲ್ಲಿ ₹65,000 ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಛತ್ತೀಸ್‌ಗಢ ರಾಜಧಾನಿ ರಾಯ್‌ಪುರದಲ್ಲಿರುವ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಅದಾನಿ ಅವರು ಸಾಯಿ ಅವರನ್ನು ಭೇಟಿಯಾದರು ಎಂದು ರಾಜ್ಯದ ಸಾರ್ವಜನಿಕ ಸಂಪರ್ಕ ಇಲಾಖೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಸಿಎಂ ಭೇಟಿ ವೇಳೆ, ಅದಾನಿ ಕಂಪನಿಯು ಛತ್ತೀಸ್‌ಗಢದ ರಾಯ್‌ಪುರ, ಕೊರ್ಬಾ ಮತ್ತು ರಾಯ್‌ಗಢದಲ್ಲಿರುವ ತನ್ನ ವಿದ್ಯುತ್ ಸ್ಥಾವರಗಳನ್ನು ವಿಸ್ತರಿಸಲು ₹60,000 ಕೋಟಿ ಹೂಡಿಕೆ ಮಾಡುವುದಾಗಿ ಗೌತಮ್ ಅದಾನಿ ಘೋಷಿಸಿದ್ದಾರೆ. ಈ ವಿಸ್ತರಣೆಯು ಛತ್ತೀಸ್‌ಗಢದ ಒಟ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚುವರಿಯಾಗಿ 6,120 ಮೆಗಾವ್ಯಾಟ್‌ಗಳಷ್ಟು ಹೆಚ್ಚಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.

ಹೆಚ್ಚುವರಿಯಾಗಿ, ಗೌತಮ್ ಅದಾನಿಯವರು ರಾಜ್ಯದಲ್ಲಿನ ತಮ್ಮ ಸಮೂಹದ ಸಿಮೆಂಟ್ ಸ್ಥಾವರಗಳ ಅಭಿವೃದ್ಧಿ ಮತ್ತು ವಿಸ್ತರಣೆಗಾಗಿ ₹5,000 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ, ಅದಾನಿ ಕಂಪನಿಯು ಮುಂದಿನ ನಾಲ್ಕು ವರ್ಷಗಳಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ ಶಿಕ್ಷಣ, ಆರೋಗ್ಯ ರಕ್ಷಣೆ, ಕೌಶಲ್ಯ ಅಭಿವೃದ್ಧಿ ಮತ್ತು ಪ್ರವಾಸೋದ್ಯಮದ ಉಪಕ್ರಮಗಳನ್ನು ಬೆಂಬಲಿಸಲು ರಾಜ್ಯ ಸರ್ಕಾರಕ್ಕೆ ₹10,000 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದೆ ಎಂದು ಹೇಳಿಕೆ ತಿಳಿಸಿದೆ.

ರಕ್ಷಣಾ ಸಂಬಂಧಿತ ಉಪಕರಣಗಳ ತಯಾರಿಕೆ ಮತ್ತು ದತ್ತಾಂಶ ಕೇಂದ್ರಗಳನ್ನು ಸ್ಥಾಪಿಸುವುದು ಹಾಗೂ ಛತ್ತೀಸ್‌ಗಢದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ಸ್ಥಾಪಿಸುವಲ್ಲಿ ಸಂಭಾವ್ಯ ಸಹಯೋಗಗಳ ಬಗ್ಗೆಯೂ ಗೌಮ್ ಅದಾನಿ ಮತ್ತು ಸಿಎಂ ವಿಷ್ಣು ದೇವ್ ಸಾಯಿ ನಡುವೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಐವರು ನಕ್ಸಲರ ಹತ್ಯೆ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗೆ ಭಾನುವಾರ (ಜ.12) ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಹತರಾಗಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಇದುವರೆಗೆ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಮಂದಿ ನಕ್ಸಲರು ಹತರಾಗಿದ್ದಾರೆ.

ಭದ್ರತಾ ಪಡೆಯ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ವಲಯ ಐಜಿಪಿ ಸುಂದರರಾಜ್ ಪಿ ತಿಳಿಸಿದ್ದಾರೆ.

ಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...