Homeಮುಖಪುಟಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುರುಗ್ರಾಮದ ಹಲ್ಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದ ಗೌತಮ್ ಗಂಭೀರ್ ವಿರುದ್ಧ ಬಿಜೆಪಿ ಹಿಂಬಾಲಕರು ಟ್ವಿಟ್ಟರ್‍ನಲ್ಲಿ ಆಕ್ರೋಶದಿಂದ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನೀನೊಂದು ದೊಡ್ಡ ವಿಪತ್ತು ಆಗುವ ನಿಟ್ಟಿನಲ್ಲಿದ್ದೀಯ, ಬಾಯಿ ಮುಚ್ಚಿಕೊಂಡಿರು. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಏಕೆ ಟ್ವೀಟ್ ಮಾಡಿಲ್ಲ ಎಂದು ಜಸುಮತಿ ಪಟೇಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೇಳಿಕೆ ನೀಡಿದ್ದು ಮುಸ್ಲಿಮರ ತುಷ್ಟೀಕರಣ ಮಾಡಲು ಅಲ್ಲ. ನಾನ್‍ಸೆನ್ಸ್ ಹೇಳಿಕೆಗಳನ್ನು ಕೊಡುವ ಮುನ್ನ ಸಂದರ್ಭವನ್ನು ಸರಿಯಾಗಿ ಅರಿತುಕೋ ಎಂದು ಲಿಲ್ಲಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಅಮೇಥಿಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾದಾಗ ನೀನು ಟ್ವೀಟ್ ಮಾಡಲಿಲ್ಲ, ಈ ಪ್ರಕರಣದಲ್ಲಿ ಮಾತ್ರ ಶೀಘ್ರವೇ ಟ್ವೀಟ್ ಮಾಡುತ್ತೀರಿ. ನಿಮ್ಮ ಹತ್ತಿರದ ಜಿಹಾದಿ ಜಾವೇದ್ ಅಕ್ತರ್ ಅನ್ನು ಕೇಳಿದ್ದೀರಾ? ಇದರಿಂದ ಸಾಮಾಜಿಕ ಜಾಲಾತಾಣದಲ್ಲಿ ನರೇಂದ್ರ ಮೋದಿಯವರಿಗಿರುವ ಬೆಂಬಲವನ್ನು ಏಕೆ ಹಾಳು ಮಾಡುತ್ತೀರಿ? ಎಂದು ರಿತುರವರು ಹೇಳಿದ್ದಾರೆ.

ಡಾ. ವೀರೇಂದ್ರ ಎಂಬುವವರು, ನೀನೊಂದು ದೊಡ್ಡ ನಿರಾಶೆ. ಪಕ್ಷದ ಸಿದ್ಧಾಂತದ ಬಗ್ಗೆ ಯಾವುದೇ ಜ್ಞಾನವಿಲ್ಲದ ಸೆಲೆಬ್ರೆಟಿಗಳಿಗೆ ಮಣೆಹಾಕುವ ಮೊದಲು ಬಿಜೆಪಿ 10 ಸಾರಿ ಯೋಚಿಸಬೇಕು ಎಂದು ಮನೋಜ್ ತಿವಾರಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:

ಹರ್ಯಾಣದ ಗುರುಗ್ರಾಮದಲ್ಲಿ ಮೂರು ದಿನಗಳ ಕೆಳಗೆ ಮುಸ್ಲಿಮ್ ಯುವಕನಿಗೆ ಆತ ಮುಸ್ಲಿಂ ಎಂಬ ಕಾರಣಕ್ಕೆ, ಟೋಪಿ ತೆಗಿ ಎಂದೂ, ಜೈ ಶ್ರೀರಾಮ್ ಎಂದು ಕೂಗು ಎಂದು ಪೀಡಿಸಿದ್ದಲ್ಲದೇ ಪುಂಡ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದೇಶದಲ್ಲಿ ಬಿಜೆಪಿ ಮತ್ತೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಈ ರೀತಿಯ ಗುಂಪು ಹಲ್ಲೆ ಘಟನೆ ನಡೆದಿದ್ದು, ಬಹಳಷ್ಟು ಜನ ಕಳವಳ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದರು.

ಗಂಭೀರ್ ಹೇಳಿದ್ದೇನು?

ಬಿಜೆಪಿಯಿಂದ ಪೂರ್ವದೆಹಲಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಗೌತಮ್ ಗಂಭೀರ್ ಈ ಘಟನೆಯನ್ನು ಕಟುವಾಗಿ ಟೀಕಿಸಿದ್ದರು. ಇವರು ಟ್ವಿಟ್ಟರ್‍ನಲ್ಲಿ “ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯ ಟೋಪಿ ತೆಗಿಸಿ, ಜೈ ಶ್ರೀರಾಂ ಎಂದು ಬಲವಂತವಾಗಿ ಹೇಳಿಸಿರುವುದು ಹೇಯ ಕೃತ್ಯ. ಗುರುಗ್ರಾಮದ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮದು ಜಾತ್ಯಾತೀತ ದೇಶ. ಇಲ್ಲಿ ಜಾವೇದ್ ಅಕ್ತರ್ ‘ಓ ಪಾಲನ್ ಆರೆ, ನಿರ್ಗುಣ್ ಔರ್ ನ್ಯಾರೇ’ ಎಂಬ ಪ್ರಾರ್ಥನೆ ಬರೆದರೆ, ರಾಕೇಸ್ ಓಂ ಪ್ರಕಾಶ್ ಮೆಹ್ತಾ ಡೆಲ್ಲಿ 6 ಎಂಬ ಚಿತ್ರದಲ್ಲಿ ‘ಅಜಿರ್ಃಯಾ’ ಹಾಡು ಕೊಟ್ಟಂತಹ ದೇಶವಿದು” ಎಂದು ಬರೆದಿದ್ದರು.

ಅಷ್ಟು ಮಾತ್ರವಲ್ಲದೇ ಮತ್ತೊಂದು ಟ್ವೀಟ್‍ನಲ್ಲಿ ಗಂಭೀರ್ “ಗುರುಗ್ರಾಮದ ಘಟನೆಗೆ ಸೀಮಿತವಾಗಿ ನಾನಿದನ್ನು ಹೇಳುತ್ತಿಲ್ಲ, ನನ್ನ ಜಾತ್ಯಾತೀತತೆಯು ಮಾನ್ಯ ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬುದರ ತಿರುಳಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ ನಡೆಸುವುದು ಖಂಡನೀಯ. ಸಹಿಷ್ಣುತೆ ಮತ್ತು ಎಲ್ಲರನ್ನು ಒಳಗೊಂಡ ಅಭಿವೃದ್ದಿಯ ಆಧಾರದಲ್ಲಿ ಭಾರತದ ಮೌಲ್ಯ ನಿಂತಿದೆ” ಎಂದು ಸಹ ತಿಳಿಸಿದ್ದರು.

ಇವರೆಡೂ ಟ್ವೀಟ್‍ಗಳಿಗಾಗಿ ನಿಜಕ್ಕೂ ಗೌತಮ್ ಗಂಭೀರ್‍ರವರನ್ನು ಅಭಿನಂದಿಸಬೇಕು. ಇಂದಿನ ಭಾರತಕ್ಕೆ ಈ ಆಶಯ ತುಂಬಾ ಒಳ್ಳೆಯದು. ಆದರೆ ಗೌತಮ್ ಮಾತ್ರವಲ್ಲ ನಮ್ಮ ದೇಶದ ಪ್ರಧಾನಿಯೇ ಸಂದರ್ಭಕ್ಕೆ ತಕ್ಕಂತ ಹೇಳಿಕೆ ಕೊಡುವುದರಲ್ಲಿ ನಿಸ್ಸೀಮರು. ಈ ಹಿಂದೆ ಗಂಭೀರ್ ಪಾಕಿಸ್ತಾನದ ವಿರುದ್ಧವಾಗಿ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದರು ಮಾತ್ರವಲ್ಲ, ದೇಶಭಕ್ತಿ, ಸೇನೆ ಮುಂತಾದವರು ಸುತ್ತಲೇ ಸುತ್ತುತ್ತಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕಿಕೆಟ್ ಆಡಬಾರದೆಂದು ಸಹ ಹೇಳಿದ್ದರು. 2002ರಲ್ಲಿ ಗುಜರಾತ್‍ನಲ್ಲಿ ಮುಸ್ಲಿಂರ ಮಾರಣಹೋಮಕ್ಕೆ ಕಾರಣದಾಗ ಮೋದಿ ಇಂದು ಅಲ್ಪಸಂಖ್ಯಾತರನ್ನು ನಾವು ಜೊತೆಯಲ್ಲಿ ಕರೆದೊಯ್ಯಬೇಕೆಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ. ತಾನೀಗ ಕ್ರಿಕೆಟರ್ ಅಲ್ಲ ಎಂಬುದನ್ನು ಗಂಭೀರ್ ನೆನಪಿಡಬೇಕು, ಆತನಾಡುವ ಮಾತುಗಳು ಬಿಜೆಪಿ ಪಕ್ಷಕ್ಕೆ ವಿರುದ್ಧವಾಗಿರುತ್ತವೆ ಮಾತ್ರವಲ್ಲ ವಿಪಕ್ಷಗಳು ನಮ್ಮ ಮೇಲೆ ಮುಗಿಬೀಳಲು ಆಧಾರವಾಗುತ್ತವೆ ಎಂದು ದೆಹಲಿಯ ಹಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳಾದಾಗ ಮಾತಾಡದೇ ಈಗ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಾಗ, ಅದರಲ್ಲೂ ಬಿಜೆಪಿ ಕಾರ್ಯಕರ್ತರೆ ಹಲ್ಲೆ ಮಾಡಿದ್ದಾರೆ ಎಂಬ ಅನುಮಾನಗಳಿದ್ದಾಗ ಗಂಭೀರ್ ಹೀಗೆ ಮಾತಾಡುವುದು ಪಕ್ಷಕ್ಕೆ ವಿರುದ್ಧ ಎಂದು ಬಿಜೆಪಿ ಮುಖಂಡರು ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಂದರೆ ತಪ್ಪನ್ನು ಬಿಜೆಪಿಯವರು ಮಾಡಿದರೆ ಸರಿ, ಬೇರೆ ಪಕ್ಷದವರು ಮಾಡಿದರೆ ತಪ್ಪು ಎನ್ನುವ ಸರ್ವಾಧಿಕಾರಿ ಧೋರಣೆಯಲ್ಲಿ ಬಿಜೆಪಿಯವರು ಮಾತಾಡುತ್ತಿರುವುದು ಈ ದೇಶ ಎತ್ತ ಸಾಗುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ.

ಸರೋವರ್ ಬೆಂಕಿಕೆರೆ

‘ಇನ್ನು ಟ್ವಿಟ್ಟರ್‍ನಲ್ಲಿನ ವಿಷಕಾರಿ ಹೇಳಿಕೆಗಳನ್ನು ಗಮನಿಸಿದರೆ ಈ ದೇಶದ ಹಲವಾರು ಜನ ಅಲ್ಪಸಂಖ್ಯಾತರು, ದಲಿತರ ಮೇಲೆ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ. ಹೊಡಿ ಬಡಿ ರೀತಿಯಲ್ಲಿಯೇ ಮಾತನಾಡಿ ಮುಸ್ಲಿಂರ ಮೇಲಿನ ಹಲ್ಲೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಗಂಭೀರ್ ಥರದ ನಾಯಕರೆ ಅದನ್ನು ನಿಲ್ಲಿಸಿ ಎಂದರೂ ಕೇಳದೇ ಅವರನ್ನೇ ತರಾಟೆಗೆ ತೆಗೆದುಕೊಳ್ಳುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಅಂದರೆ ಉನ್ಮಾದದ ಮನಸ್ಥಿತಿ ತಲುಪಿರುವ ಇವರು ಮುಂದೆ ಯಾವ ನಾಯಕರ ಮಾತನ್ನು ಕೇಳದೇ ದೇಶದಲ್ಲಿ ದೊಂಬಿ, ಗದ್ದಲ, ಅರಾಜಕತೆ ಉಂಟು ಮಾಡುವುದರಲ್ಲಿ ಸಂದೇಹವಿಲ್ಲ. ಅದನ್ನು ತಡೆದು ಪ್ರೀತಿ-ವಿಶ್ವಾಸದ, ಶಾಂತಿಯ ನಾಡನ್ನಾಗಿ ಪರಿವರ್ತಿಸಬೇಕಾದ ಜವಾಬ್ದಾರಿ ಪ್ರಜ್ಞಾವಂತರ ಮೇಲಿದೆ.’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸರೋವರ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಡಿ ಬಡಿ ಯಲ್ಲಿ ವಿಶ್ವಾಸ ಇದ್ದವರಿಗೆ ಅದೇ ರೀತಿ ಉತ್ತರ ಕೊಟ್ಟರೆ ಸರಿಯಾಗುತ್ತಾರೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...