Homeಮುಖಪುಟಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುರುಗ್ರಾಮದ ಹಲ್ಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದ ಗೌತಮ್ ಗಂಭೀರ್ ವಿರುದ್ಧ ಬಿಜೆಪಿ ಹಿಂಬಾಲಕರು ಟ್ವಿಟ್ಟರ್‍ನಲ್ಲಿ ಆಕ್ರೋಶದಿಂದ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನೀನೊಂದು ದೊಡ್ಡ ವಿಪತ್ತು ಆಗುವ ನಿಟ್ಟಿನಲ್ಲಿದ್ದೀಯ, ಬಾಯಿ ಮುಚ್ಚಿಕೊಂಡಿರು. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಏಕೆ ಟ್ವೀಟ್ ಮಾಡಿಲ್ಲ ಎಂದು ಜಸುಮತಿ ಪಟೇಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೇಳಿಕೆ ನೀಡಿದ್ದು ಮುಸ್ಲಿಮರ ತುಷ್ಟೀಕರಣ ಮಾಡಲು ಅಲ್ಲ. ನಾನ್‍ಸೆನ್ಸ್ ಹೇಳಿಕೆಗಳನ್ನು ಕೊಡುವ ಮುನ್ನ ಸಂದರ್ಭವನ್ನು ಸರಿಯಾಗಿ ಅರಿತುಕೋ ಎಂದು ಲಿಲ್ಲಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಅಮೇಥಿಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾದಾಗ ನೀನು ಟ್ವೀಟ್ ಮಾಡಲಿಲ್ಲ, ಈ ಪ್ರಕರಣದಲ್ಲಿ ಮಾತ್ರ ಶೀಘ್ರವೇ ಟ್ವೀಟ್ ಮಾಡುತ್ತೀರಿ. ನಿಮ್ಮ ಹತ್ತಿರದ ಜಿಹಾದಿ ಜಾವೇದ್ ಅಕ್ತರ್ ಅನ್ನು ಕೇಳಿದ್ದೀರಾ? ಇದರಿಂದ ಸಾಮಾಜಿಕ ಜಾಲಾತಾಣದಲ್ಲಿ ನರೇಂದ್ರ ಮೋದಿಯವರಿಗಿರುವ ಬೆಂಬಲವನ್ನು ಏಕೆ ಹಾಳು ಮಾಡುತ್ತೀರಿ? ಎಂದು ರಿತುರವರು ಹೇಳಿದ್ದಾರೆ.

ಡಾ. ವೀರೇಂದ್ರ ಎಂಬುವವರು, ನೀನೊಂದು ದೊಡ್ಡ ನಿರಾಶೆ. ಪಕ್ಷದ ಸಿದ್ಧಾಂತದ ಬಗ್ಗೆ ಯಾವುದೇ ಜ್ಞಾನವಿಲ್ಲದ ಸೆಲೆಬ್ರೆಟಿಗಳಿಗೆ ಮಣೆಹಾಕುವ ಮೊದಲು ಬಿಜೆಪಿ 10 ಸಾರಿ ಯೋಚಿಸಬೇಕು ಎಂದು ಮನೋಜ್ ತಿವಾರಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:

ಹರ್ಯಾಣದ ಗುರುಗ್ರಾಮದಲ್ಲಿ ಮೂರು ದಿನಗಳ ಕೆಳಗೆ ಮುಸ್ಲಿಮ್ ಯುವಕನಿಗೆ ಆತ ಮುಸ್ಲಿಂ ಎಂಬ ಕಾರಣಕ್ಕೆ, ಟೋಪಿ ತೆಗಿ ಎಂದೂ, ಜೈ ಶ್ರೀರಾಮ್ ಎಂದು ಕೂಗು ಎಂದು ಪೀಡಿಸಿದ್ದಲ್ಲದೇ ಪುಂಡ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದೇಶದಲ್ಲಿ ಬಿಜೆಪಿ ಮತ್ತೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಈ ರೀತಿಯ ಗುಂಪು ಹಲ್ಲೆ ಘಟನೆ ನಡೆದಿದ್ದು, ಬಹಳಷ್ಟು ಜನ ಕಳವಳ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದರು.

ಗಂಭೀರ್ ಹೇಳಿದ್ದೇನು?

ಬಿಜೆಪಿಯಿಂದ ಪೂರ್ವದೆಹಲಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಗೌತಮ್ ಗಂಭೀರ್ ಈ ಘಟನೆಯನ್ನು ಕಟುವಾಗಿ ಟೀಕಿಸಿದ್ದರು. ಇವರು ಟ್ವಿಟ್ಟರ್‍ನಲ್ಲಿ “ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯ ಟೋಪಿ ತೆಗಿಸಿ, ಜೈ ಶ್ರೀರಾಂ ಎಂದು ಬಲವಂತವಾಗಿ ಹೇಳಿಸಿರುವುದು ಹೇಯ ಕೃತ್ಯ. ಗುರುಗ್ರಾಮದ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮದು ಜಾತ್ಯಾತೀತ ದೇಶ. ಇಲ್ಲಿ ಜಾವೇದ್ ಅಕ್ತರ್ ‘ಓ ಪಾಲನ್ ಆರೆ, ನಿರ್ಗುಣ್ ಔರ್ ನ್ಯಾರೇ’ ಎಂಬ ಪ್ರಾರ್ಥನೆ ಬರೆದರೆ, ರಾಕೇಸ್ ಓಂ ಪ್ರಕಾಶ್ ಮೆಹ್ತಾ ಡೆಲ್ಲಿ 6 ಎಂಬ ಚಿತ್ರದಲ್ಲಿ ‘ಅಜಿರ್ಃಯಾ’ ಹಾಡು ಕೊಟ್ಟಂತಹ ದೇಶವಿದು” ಎಂದು ಬರೆದಿದ್ದರು.

ಅಷ್ಟು ಮಾತ್ರವಲ್ಲದೇ ಮತ್ತೊಂದು ಟ್ವೀಟ್‍ನಲ್ಲಿ ಗಂಭೀರ್ “ಗುರುಗ್ರಾಮದ ಘಟನೆಗೆ ಸೀಮಿತವಾಗಿ ನಾನಿದನ್ನು ಹೇಳುತ್ತಿಲ್ಲ, ನನ್ನ ಜಾತ್ಯಾತೀತತೆಯು ಮಾನ್ಯ ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬುದರ ತಿರುಳಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ ನಡೆಸುವುದು ಖಂಡನೀಯ. ಸಹಿಷ್ಣುತೆ ಮತ್ತು ಎಲ್ಲರನ್ನು ಒಳಗೊಂಡ ಅಭಿವೃದ್ದಿಯ ಆಧಾರದಲ್ಲಿ ಭಾರತದ ಮೌಲ್ಯ ನಿಂತಿದೆ” ಎಂದು ಸಹ ತಿಳಿಸಿದ್ದರು.

ಇವರೆಡೂ ಟ್ವೀಟ್‍ಗಳಿಗಾಗಿ ನಿಜಕ್ಕೂ ಗೌತಮ್ ಗಂಭೀರ್‍ರವರನ್ನು ಅಭಿನಂದಿಸಬೇಕು. ಇಂದಿನ ಭಾರತಕ್ಕೆ ಈ ಆಶಯ ತುಂಬಾ ಒಳ್ಳೆಯದು. ಆದರೆ ಗೌತಮ್ ಮಾತ್ರವಲ್ಲ ನಮ್ಮ ದೇಶದ ಪ್ರಧಾನಿಯೇ ಸಂದರ್ಭಕ್ಕೆ ತಕ್ಕಂತ ಹೇಳಿಕೆ ಕೊಡುವುದರಲ್ಲಿ ನಿಸ್ಸೀಮರು. ಈ ಹಿಂದೆ ಗಂಭೀರ್ ಪಾಕಿಸ್ತಾನದ ವಿರುದ್ಧವಾಗಿ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದರು ಮಾತ್ರವಲ್ಲ, ದೇಶಭಕ್ತಿ, ಸೇನೆ ಮುಂತಾದವರು ಸುತ್ತಲೇ ಸುತ್ತುತ್ತಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕಿಕೆಟ್ ಆಡಬಾರದೆಂದು ಸಹ ಹೇಳಿದ್ದರು. 2002ರಲ್ಲಿ ಗುಜರಾತ್‍ನಲ್ಲಿ ಮುಸ್ಲಿಂರ ಮಾರಣಹೋಮಕ್ಕೆ ಕಾರಣದಾಗ ಮೋದಿ ಇಂದು ಅಲ್ಪಸಂಖ್ಯಾತರನ್ನು ನಾವು ಜೊತೆಯಲ್ಲಿ ಕರೆದೊಯ್ಯಬೇಕೆಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ. ತಾನೀಗ ಕ್ರಿಕೆಟರ್ ಅಲ್ಲ ಎಂಬುದನ್ನು ಗಂಭೀರ್ ನೆನಪಿಡಬೇಕು, ಆತನಾಡುವ ಮಾತುಗಳು ಬಿಜೆಪಿ ಪಕ್ಷಕ್ಕೆ ವಿರುದ್ಧವಾಗಿರುತ್ತವೆ ಮಾತ್ರವಲ್ಲ ವಿಪಕ್ಷಗಳು ನಮ್ಮ ಮೇಲೆ ಮುಗಿಬೀಳಲು ಆಧಾರವಾಗುತ್ತವೆ ಎಂದು ದೆಹಲಿಯ ಹಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳಾದಾಗ ಮಾತಾಡದೇ ಈಗ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಾಗ, ಅದರಲ್ಲೂ ಬಿಜೆಪಿ ಕಾರ್ಯಕರ್ತರೆ ಹಲ್ಲೆ ಮಾಡಿದ್ದಾರೆ ಎಂಬ ಅನುಮಾನಗಳಿದ್ದಾಗ ಗಂಭೀರ್ ಹೀಗೆ ಮಾತಾಡುವುದು ಪಕ್ಷಕ್ಕೆ ವಿರುದ್ಧ ಎಂದು ಬಿಜೆಪಿ ಮುಖಂಡರು ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಂದರೆ ತಪ್ಪನ್ನು ಬಿಜೆಪಿಯವರು ಮಾಡಿದರೆ ಸರಿ, ಬೇರೆ ಪಕ್ಷದವರು ಮಾಡಿದರೆ ತಪ್ಪು ಎನ್ನುವ ಸರ್ವಾಧಿಕಾರಿ ಧೋರಣೆಯಲ್ಲಿ ಬಿಜೆಪಿಯವರು ಮಾತಾಡುತ್ತಿರುವುದು ಈ ದೇಶ ಎತ್ತ ಸಾಗುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ.

ಸರೋವರ್ ಬೆಂಕಿಕೆರೆ

‘ಇನ್ನು ಟ್ವಿಟ್ಟರ್‍ನಲ್ಲಿನ ವಿಷಕಾರಿ ಹೇಳಿಕೆಗಳನ್ನು ಗಮನಿಸಿದರೆ ಈ ದೇಶದ ಹಲವಾರು ಜನ ಅಲ್ಪಸಂಖ್ಯಾತರು, ದಲಿತರ ಮೇಲೆ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ. ಹೊಡಿ ಬಡಿ ರೀತಿಯಲ್ಲಿಯೇ ಮಾತನಾಡಿ ಮುಸ್ಲಿಂರ ಮೇಲಿನ ಹಲ್ಲೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಗಂಭೀರ್ ಥರದ ನಾಯಕರೆ ಅದನ್ನು ನಿಲ್ಲಿಸಿ ಎಂದರೂ ಕೇಳದೇ ಅವರನ್ನೇ ತರಾಟೆಗೆ ತೆಗೆದುಕೊಳ್ಳುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಅಂದರೆ ಉನ್ಮಾದದ ಮನಸ್ಥಿತಿ ತಲುಪಿರುವ ಇವರು ಮುಂದೆ ಯಾವ ನಾಯಕರ ಮಾತನ್ನು ಕೇಳದೇ ದೇಶದಲ್ಲಿ ದೊಂಬಿ, ಗದ್ದಲ, ಅರಾಜಕತೆ ಉಂಟು ಮಾಡುವುದರಲ್ಲಿ ಸಂದೇಹವಿಲ್ಲ. ಅದನ್ನು ತಡೆದು ಪ್ರೀತಿ-ವಿಶ್ವಾಸದ, ಶಾಂತಿಯ ನಾಡನ್ನಾಗಿ ಪರಿವರ್ತಿಸಬೇಕಾದ ಜವಾಬ್ದಾರಿ ಪ್ರಜ್ಞಾವಂತರ ಮೇಲಿದೆ.’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸರೋವರ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಡಿ ಬಡಿ ಯಲ್ಲಿ ವಿಶ್ವಾಸ ಇದ್ದವರಿಗೆ ಅದೇ ರೀತಿ ಉತ್ತರ ಕೊಟ್ಟರೆ ಸರಿಯಾಗುತ್ತಾರೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...