Homeಮುಖಪುಟಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುರುಗ್ರಾಮದ ಹಲ್ಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದ ಗೌತಮ್ ಗಂಭೀರ್ ವಿರುದ್ಧ ಬಿಜೆಪಿ ಹಿಂಬಾಲಕರು ಟ್ವಿಟ್ಟರ್‍ನಲ್ಲಿ ಆಕ್ರೋಶದಿಂದ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನೀನೊಂದು ದೊಡ್ಡ ವಿಪತ್ತು ಆಗುವ ನಿಟ್ಟಿನಲ್ಲಿದ್ದೀಯ, ಬಾಯಿ ಮುಚ್ಚಿಕೊಂಡಿರು. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಏಕೆ ಟ್ವೀಟ್ ಮಾಡಿಲ್ಲ ಎಂದು ಜಸುಮತಿ ಪಟೇಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೇಳಿಕೆ ನೀಡಿದ್ದು ಮುಸ್ಲಿಮರ ತುಷ್ಟೀಕರಣ ಮಾಡಲು ಅಲ್ಲ. ನಾನ್‍ಸೆನ್ಸ್ ಹೇಳಿಕೆಗಳನ್ನು ಕೊಡುವ ಮುನ್ನ ಸಂದರ್ಭವನ್ನು ಸರಿಯಾಗಿ ಅರಿತುಕೋ ಎಂದು ಲಿಲ್ಲಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಅಮೇಥಿಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾದಾಗ ನೀನು ಟ್ವೀಟ್ ಮಾಡಲಿಲ್ಲ, ಈ ಪ್ರಕರಣದಲ್ಲಿ ಮಾತ್ರ ಶೀಘ್ರವೇ ಟ್ವೀಟ್ ಮಾಡುತ್ತೀರಿ. ನಿಮ್ಮ ಹತ್ತಿರದ ಜಿಹಾದಿ ಜಾವೇದ್ ಅಕ್ತರ್ ಅನ್ನು ಕೇಳಿದ್ದೀರಾ? ಇದರಿಂದ ಸಾಮಾಜಿಕ ಜಾಲಾತಾಣದಲ್ಲಿ ನರೇಂದ್ರ ಮೋದಿಯವರಿಗಿರುವ ಬೆಂಬಲವನ್ನು ಏಕೆ ಹಾಳು ಮಾಡುತ್ತೀರಿ? ಎಂದು ರಿತುರವರು ಹೇಳಿದ್ದಾರೆ.

ಡಾ. ವೀರೇಂದ್ರ ಎಂಬುವವರು, ನೀನೊಂದು ದೊಡ್ಡ ನಿರಾಶೆ. ಪಕ್ಷದ ಸಿದ್ಧಾಂತದ ಬಗ್ಗೆ ಯಾವುದೇ ಜ್ಞಾನವಿಲ್ಲದ ಸೆಲೆಬ್ರೆಟಿಗಳಿಗೆ ಮಣೆಹಾಕುವ ಮೊದಲು ಬಿಜೆಪಿ 10 ಸಾರಿ ಯೋಚಿಸಬೇಕು ಎಂದು ಮನೋಜ್ ತಿವಾರಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:

ಹರ್ಯಾಣದ ಗುರುಗ್ರಾಮದಲ್ಲಿ ಮೂರು ದಿನಗಳ ಕೆಳಗೆ ಮುಸ್ಲಿಮ್ ಯುವಕನಿಗೆ ಆತ ಮುಸ್ಲಿಂ ಎಂಬ ಕಾರಣಕ್ಕೆ, ಟೋಪಿ ತೆಗಿ ಎಂದೂ, ಜೈ ಶ್ರೀರಾಮ್ ಎಂದು ಕೂಗು ಎಂದು ಪೀಡಿಸಿದ್ದಲ್ಲದೇ ಪುಂಡ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದೇಶದಲ್ಲಿ ಬಿಜೆಪಿ ಮತ್ತೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಈ ರೀತಿಯ ಗುಂಪು ಹಲ್ಲೆ ಘಟನೆ ನಡೆದಿದ್ದು, ಬಹಳಷ್ಟು ಜನ ಕಳವಳ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದರು.

ಗಂಭೀರ್ ಹೇಳಿದ್ದೇನು?

ಬಿಜೆಪಿಯಿಂದ ಪೂರ್ವದೆಹಲಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಗೌತಮ್ ಗಂಭೀರ್ ಈ ಘಟನೆಯನ್ನು ಕಟುವಾಗಿ ಟೀಕಿಸಿದ್ದರು. ಇವರು ಟ್ವಿಟ್ಟರ್‍ನಲ್ಲಿ “ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯ ಟೋಪಿ ತೆಗಿಸಿ, ಜೈ ಶ್ರೀರಾಂ ಎಂದು ಬಲವಂತವಾಗಿ ಹೇಳಿಸಿರುವುದು ಹೇಯ ಕೃತ್ಯ. ಗುರುಗ್ರಾಮದ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮದು ಜಾತ್ಯಾತೀತ ದೇಶ. ಇಲ್ಲಿ ಜಾವೇದ್ ಅಕ್ತರ್ ‘ಓ ಪಾಲನ್ ಆರೆ, ನಿರ್ಗುಣ್ ಔರ್ ನ್ಯಾರೇ’ ಎಂಬ ಪ್ರಾರ್ಥನೆ ಬರೆದರೆ, ರಾಕೇಸ್ ಓಂ ಪ್ರಕಾಶ್ ಮೆಹ್ತಾ ಡೆಲ್ಲಿ 6 ಎಂಬ ಚಿತ್ರದಲ್ಲಿ ‘ಅಜಿರ್ಃಯಾ’ ಹಾಡು ಕೊಟ್ಟಂತಹ ದೇಶವಿದು” ಎಂದು ಬರೆದಿದ್ದರು.

ಅಷ್ಟು ಮಾತ್ರವಲ್ಲದೇ ಮತ್ತೊಂದು ಟ್ವೀಟ್‍ನಲ್ಲಿ ಗಂಭೀರ್ “ಗುರುಗ್ರಾಮದ ಘಟನೆಗೆ ಸೀಮಿತವಾಗಿ ನಾನಿದನ್ನು ಹೇಳುತ್ತಿಲ್ಲ, ನನ್ನ ಜಾತ್ಯಾತೀತತೆಯು ಮಾನ್ಯ ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬುದರ ತಿರುಳಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ ನಡೆಸುವುದು ಖಂಡನೀಯ. ಸಹಿಷ್ಣುತೆ ಮತ್ತು ಎಲ್ಲರನ್ನು ಒಳಗೊಂಡ ಅಭಿವೃದ್ದಿಯ ಆಧಾರದಲ್ಲಿ ಭಾರತದ ಮೌಲ್ಯ ನಿಂತಿದೆ” ಎಂದು ಸಹ ತಿಳಿಸಿದ್ದರು.

ಇವರೆಡೂ ಟ್ವೀಟ್‍ಗಳಿಗಾಗಿ ನಿಜಕ್ಕೂ ಗೌತಮ್ ಗಂಭೀರ್‍ರವರನ್ನು ಅಭಿನಂದಿಸಬೇಕು. ಇಂದಿನ ಭಾರತಕ್ಕೆ ಈ ಆಶಯ ತುಂಬಾ ಒಳ್ಳೆಯದು. ಆದರೆ ಗೌತಮ್ ಮಾತ್ರವಲ್ಲ ನಮ್ಮ ದೇಶದ ಪ್ರಧಾನಿಯೇ ಸಂದರ್ಭಕ್ಕೆ ತಕ್ಕಂತ ಹೇಳಿಕೆ ಕೊಡುವುದರಲ್ಲಿ ನಿಸ್ಸೀಮರು. ಈ ಹಿಂದೆ ಗಂಭೀರ್ ಪಾಕಿಸ್ತಾನದ ವಿರುದ್ಧವಾಗಿ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದರು ಮಾತ್ರವಲ್ಲ, ದೇಶಭಕ್ತಿ, ಸೇನೆ ಮುಂತಾದವರು ಸುತ್ತಲೇ ಸುತ್ತುತ್ತಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕಿಕೆಟ್ ಆಡಬಾರದೆಂದು ಸಹ ಹೇಳಿದ್ದರು. 2002ರಲ್ಲಿ ಗುಜರಾತ್‍ನಲ್ಲಿ ಮುಸ್ಲಿಂರ ಮಾರಣಹೋಮಕ್ಕೆ ಕಾರಣದಾಗ ಮೋದಿ ಇಂದು ಅಲ್ಪಸಂಖ್ಯಾತರನ್ನು ನಾವು ಜೊತೆಯಲ್ಲಿ ಕರೆದೊಯ್ಯಬೇಕೆಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ. ತಾನೀಗ ಕ್ರಿಕೆಟರ್ ಅಲ್ಲ ಎಂಬುದನ್ನು ಗಂಭೀರ್ ನೆನಪಿಡಬೇಕು, ಆತನಾಡುವ ಮಾತುಗಳು ಬಿಜೆಪಿ ಪಕ್ಷಕ್ಕೆ ವಿರುದ್ಧವಾಗಿರುತ್ತವೆ ಮಾತ್ರವಲ್ಲ ವಿಪಕ್ಷಗಳು ನಮ್ಮ ಮೇಲೆ ಮುಗಿಬೀಳಲು ಆಧಾರವಾಗುತ್ತವೆ ಎಂದು ದೆಹಲಿಯ ಹಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳಾದಾಗ ಮಾತಾಡದೇ ಈಗ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಾಗ, ಅದರಲ್ಲೂ ಬಿಜೆಪಿ ಕಾರ್ಯಕರ್ತರೆ ಹಲ್ಲೆ ಮಾಡಿದ್ದಾರೆ ಎಂಬ ಅನುಮಾನಗಳಿದ್ದಾಗ ಗಂಭೀರ್ ಹೀಗೆ ಮಾತಾಡುವುದು ಪಕ್ಷಕ್ಕೆ ವಿರುದ್ಧ ಎಂದು ಬಿಜೆಪಿ ಮುಖಂಡರು ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಂದರೆ ತಪ್ಪನ್ನು ಬಿಜೆಪಿಯವರು ಮಾಡಿದರೆ ಸರಿ, ಬೇರೆ ಪಕ್ಷದವರು ಮಾಡಿದರೆ ತಪ್ಪು ಎನ್ನುವ ಸರ್ವಾಧಿಕಾರಿ ಧೋರಣೆಯಲ್ಲಿ ಬಿಜೆಪಿಯವರು ಮಾತಾಡುತ್ತಿರುವುದು ಈ ದೇಶ ಎತ್ತ ಸಾಗುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ.

ಸರೋವರ್ ಬೆಂಕಿಕೆರೆ

‘ಇನ್ನು ಟ್ವಿಟ್ಟರ್‍ನಲ್ಲಿನ ವಿಷಕಾರಿ ಹೇಳಿಕೆಗಳನ್ನು ಗಮನಿಸಿದರೆ ಈ ದೇಶದ ಹಲವಾರು ಜನ ಅಲ್ಪಸಂಖ್ಯಾತರು, ದಲಿತರ ಮೇಲೆ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ. ಹೊಡಿ ಬಡಿ ರೀತಿಯಲ್ಲಿಯೇ ಮಾತನಾಡಿ ಮುಸ್ಲಿಂರ ಮೇಲಿನ ಹಲ್ಲೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಗಂಭೀರ್ ಥರದ ನಾಯಕರೆ ಅದನ್ನು ನಿಲ್ಲಿಸಿ ಎಂದರೂ ಕೇಳದೇ ಅವರನ್ನೇ ತರಾಟೆಗೆ ತೆಗೆದುಕೊಳ್ಳುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಅಂದರೆ ಉನ್ಮಾದದ ಮನಸ್ಥಿತಿ ತಲುಪಿರುವ ಇವರು ಮುಂದೆ ಯಾವ ನಾಯಕರ ಮಾತನ್ನು ಕೇಳದೇ ದೇಶದಲ್ಲಿ ದೊಂಬಿ, ಗದ್ದಲ, ಅರಾಜಕತೆ ಉಂಟು ಮಾಡುವುದರಲ್ಲಿ ಸಂದೇಹವಿಲ್ಲ. ಅದನ್ನು ತಡೆದು ಪ್ರೀತಿ-ವಿಶ್ವಾಸದ, ಶಾಂತಿಯ ನಾಡನ್ನಾಗಿ ಪರಿವರ್ತಿಸಬೇಕಾದ ಜವಾಬ್ದಾರಿ ಪ್ರಜ್ಞಾವಂತರ ಮೇಲಿದೆ.’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸರೋವರ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಡಿ ಬಡಿ ಯಲ್ಲಿ ವಿಶ್ವಾಸ ಇದ್ದವರಿಗೆ ಅದೇ ರೀತಿ ಉತ್ತರ ಕೊಟ್ಟರೆ ಸರಿಯಾಗುತ್ತಾರೆ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...