Homeಮುಖಪುಟಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುರುಗ್ರಾಮದ ಹಲ್ಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದ ಗೌತಮ್ ಗಂಭೀರ್ ವಿರುದ್ಧ ಬಿಜೆಪಿ ಹಿಂಬಾಲಕರು ಟ್ವಿಟ್ಟರ್‍ನಲ್ಲಿ ಆಕ್ರೋಶದಿಂದ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನೀನೊಂದು ದೊಡ್ಡ ವಿಪತ್ತು ಆಗುವ ನಿಟ್ಟಿನಲ್ಲಿದ್ದೀಯ, ಬಾಯಿ ಮುಚ್ಚಿಕೊಂಡಿರು. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಏಕೆ ಟ್ವೀಟ್ ಮಾಡಿಲ್ಲ ಎಂದು ಜಸುಮತಿ ಪಟೇಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೇಳಿಕೆ ನೀಡಿದ್ದು ಮುಸ್ಲಿಮರ ತುಷ್ಟೀಕರಣ ಮಾಡಲು ಅಲ್ಲ. ನಾನ್‍ಸೆನ್ಸ್ ಹೇಳಿಕೆಗಳನ್ನು ಕೊಡುವ ಮುನ್ನ ಸಂದರ್ಭವನ್ನು ಸರಿಯಾಗಿ ಅರಿತುಕೋ ಎಂದು ಲಿಲ್ಲಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಅಮೇಥಿಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾದಾಗ ನೀನು ಟ್ವೀಟ್ ಮಾಡಲಿಲ್ಲ, ಈ ಪ್ರಕರಣದಲ್ಲಿ ಮಾತ್ರ ಶೀಘ್ರವೇ ಟ್ವೀಟ್ ಮಾಡುತ್ತೀರಿ. ನಿಮ್ಮ ಹತ್ತಿರದ ಜಿಹಾದಿ ಜಾವೇದ್ ಅಕ್ತರ್ ಅನ್ನು ಕೇಳಿದ್ದೀರಾ? ಇದರಿಂದ ಸಾಮಾಜಿಕ ಜಾಲಾತಾಣದಲ್ಲಿ ನರೇಂದ್ರ ಮೋದಿಯವರಿಗಿರುವ ಬೆಂಬಲವನ್ನು ಏಕೆ ಹಾಳು ಮಾಡುತ್ತೀರಿ? ಎಂದು ರಿತುರವರು ಹೇಳಿದ್ದಾರೆ.

ಡಾ. ವೀರೇಂದ್ರ ಎಂಬುವವರು, ನೀನೊಂದು ದೊಡ್ಡ ನಿರಾಶೆ. ಪಕ್ಷದ ಸಿದ್ಧಾಂತದ ಬಗ್ಗೆ ಯಾವುದೇ ಜ್ಞಾನವಿಲ್ಲದ ಸೆಲೆಬ್ರೆಟಿಗಳಿಗೆ ಮಣೆಹಾಕುವ ಮೊದಲು ಬಿಜೆಪಿ 10 ಸಾರಿ ಯೋಚಿಸಬೇಕು ಎಂದು ಮನೋಜ್ ತಿವಾರಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:

ಹರ್ಯಾಣದ ಗುರುಗ್ರಾಮದಲ್ಲಿ ಮೂರು ದಿನಗಳ ಕೆಳಗೆ ಮುಸ್ಲಿಮ್ ಯುವಕನಿಗೆ ಆತ ಮುಸ್ಲಿಂ ಎಂಬ ಕಾರಣಕ್ಕೆ, ಟೋಪಿ ತೆಗಿ ಎಂದೂ, ಜೈ ಶ್ರೀರಾಮ್ ಎಂದು ಕೂಗು ಎಂದು ಪೀಡಿಸಿದ್ದಲ್ಲದೇ ಪುಂಡ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದೇಶದಲ್ಲಿ ಬಿಜೆಪಿ ಮತ್ತೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಈ ರೀತಿಯ ಗುಂಪು ಹಲ್ಲೆ ಘಟನೆ ನಡೆದಿದ್ದು, ಬಹಳಷ್ಟು ಜನ ಕಳವಳ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದರು.

ಗಂಭೀರ್ ಹೇಳಿದ್ದೇನು?

ಬಿಜೆಪಿಯಿಂದ ಪೂರ್ವದೆಹಲಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಗೌತಮ್ ಗಂಭೀರ್ ಈ ಘಟನೆಯನ್ನು ಕಟುವಾಗಿ ಟೀಕಿಸಿದ್ದರು. ಇವರು ಟ್ವಿಟ್ಟರ್‍ನಲ್ಲಿ “ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯ ಟೋಪಿ ತೆಗಿಸಿ, ಜೈ ಶ್ರೀರಾಂ ಎಂದು ಬಲವಂತವಾಗಿ ಹೇಳಿಸಿರುವುದು ಹೇಯ ಕೃತ್ಯ. ಗುರುಗ್ರಾಮದ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮದು ಜಾತ್ಯಾತೀತ ದೇಶ. ಇಲ್ಲಿ ಜಾವೇದ್ ಅಕ್ತರ್ ‘ಓ ಪಾಲನ್ ಆರೆ, ನಿರ್ಗುಣ್ ಔರ್ ನ್ಯಾರೇ’ ಎಂಬ ಪ್ರಾರ್ಥನೆ ಬರೆದರೆ, ರಾಕೇಸ್ ಓಂ ಪ್ರಕಾಶ್ ಮೆಹ್ತಾ ಡೆಲ್ಲಿ 6 ಎಂಬ ಚಿತ್ರದಲ್ಲಿ ‘ಅಜಿರ್ಃಯಾ’ ಹಾಡು ಕೊಟ್ಟಂತಹ ದೇಶವಿದು” ಎಂದು ಬರೆದಿದ್ದರು.

ಅಷ್ಟು ಮಾತ್ರವಲ್ಲದೇ ಮತ್ತೊಂದು ಟ್ವೀಟ್‍ನಲ್ಲಿ ಗಂಭೀರ್ “ಗುರುಗ್ರಾಮದ ಘಟನೆಗೆ ಸೀಮಿತವಾಗಿ ನಾನಿದನ್ನು ಹೇಳುತ್ತಿಲ್ಲ, ನನ್ನ ಜಾತ್ಯಾತೀತತೆಯು ಮಾನ್ಯ ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬುದರ ತಿರುಳಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ ನಡೆಸುವುದು ಖಂಡನೀಯ. ಸಹಿಷ್ಣುತೆ ಮತ್ತು ಎಲ್ಲರನ್ನು ಒಳಗೊಂಡ ಅಭಿವೃದ್ದಿಯ ಆಧಾರದಲ್ಲಿ ಭಾರತದ ಮೌಲ್ಯ ನಿಂತಿದೆ” ಎಂದು ಸಹ ತಿಳಿಸಿದ್ದರು.

ಇವರೆಡೂ ಟ್ವೀಟ್‍ಗಳಿಗಾಗಿ ನಿಜಕ್ಕೂ ಗೌತಮ್ ಗಂಭೀರ್‍ರವರನ್ನು ಅಭಿನಂದಿಸಬೇಕು. ಇಂದಿನ ಭಾರತಕ್ಕೆ ಈ ಆಶಯ ತುಂಬಾ ಒಳ್ಳೆಯದು. ಆದರೆ ಗೌತಮ್ ಮಾತ್ರವಲ್ಲ ನಮ್ಮ ದೇಶದ ಪ್ರಧಾನಿಯೇ ಸಂದರ್ಭಕ್ಕೆ ತಕ್ಕಂತ ಹೇಳಿಕೆ ಕೊಡುವುದರಲ್ಲಿ ನಿಸ್ಸೀಮರು. ಈ ಹಿಂದೆ ಗಂಭೀರ್ ಪಾಕಿಸ್ತಾನದ ವಿರುದ್ಧವಾಗಿ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದರು ಮಾತ್ರವಲ್ಲ, ದೇಶಭಕ್ತಿ, ಸೇನೆ ಮುಂತಾದವರು ಸುತ್ತಲೇ ಸುತ್ತುತ್ತಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕಿಕೆಟ್ ಆಡಬಾರದೆಂದು ಸಹ ಹೇಳಿದ್ದರು. 2002ರಲ್ಲಿ ಗುಜರಾತ್‍ನಲ್ಲಿ ಮುಸ್ಲಿಂರ ಮಾರಣಹೋಮಕ್ಕೆ ಕಾರಣದಾಗ ಮೋದಿ ಇಂದು ಅಲ್ಪಸಂಖ್ಯಾತರನ್ನು ನಾವು ಜೊತೆಯಲ್ಲಿ ಕರೆದೊಯ್ಯಬೇಕೆಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ. ತಾನೀಗ ಕ್ರಿಕೆಟರ್ ಅಲ್ಲ ಎಂಬುದನ್ನು ಗಂಭೀರ್ ನೆನಪಿಡಬೇಕು, ಆತನಾಡುವ ಮಾತುಗಳು ಬಿಜೆಪಿ ಪಕ್ಷಕ್ಕೆ ವಿರುದ್ಧವಾಗಿರುತ್ತವೆ ಮಾತ್ರವಲ್ಲ ವಿಪಕ್ಷಗಳು ನಮ್ಮ ಮೇಲೆ ಮುಗಿಬೀಳಲು ಆಧಾರವಾಗುತ್ತವೆ ಎಂದು ದೆಹಲಿಯ ಹಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳಾದಾಗ ಮಾತಾಡದೇ ಈಗ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಾಗ, ಅದರಲ್ಲೂ ಬಿಜೆಪಿ ಕಾರ್ಯಕರ್ತರೆ ಹಲ್ಲೆ ಮಾಡಿದ್ದಾರೆ ಎಂಬ ಅನುಮಾನಗಳಿದ್ದಾಗ ಗಂಭೀರ್ ಹೀಗೆ ಮಾತಾಡುವುದು ಪಕ್ಷಕ್ಕೆ ವಿರುದ್ಧ ಎಂದು ಬಿಜೆಪಿ ಮುಖಂಡರು ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಂದರೆ ತಪ್ಪನ್ನು ಬಿಜೆಪಿಯವರು ಮಾಡಿದರೆ ಸರಿ, ಬೇರೆ ಪಕ್ಷದವರು ಮಾಡಿದರೆ ತಪ್ಪು ಎನ್ನುವ ಸರ್ವಾಧಿಕಾರಿ ಧೋರಣೆಯಲ್ಲಿ ಬಿಜೆಪಿಯವರು ಮಾತಾಡುತ್ತಿರುವುದು ಈ ದೇಶ ಎತ್ತ ಸಾಗುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ.

ಸರೋವರ್ ಬೆಂಕಿಕೆರೆ

‘ಇನ್ನು ಟ್ವಿಟ್ಟರ್‍ನಲ್ಲಿನ ವಿಷಕಾರಿ ಹೇಳಿಕೆಗಳನ್ನು ಗಮನಿಸಿದರೆ ಈ ದೇಶದ ಹಲವಾರು ಜನ ಅಲ್ಪಸಂಖ್ಯಾತರು, ದಲಿತರ ಮೇಲೆ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ. ಹೊಡಿ ಬಡಿ ರೀತಿಯಲ್ಲಿಯೇ ಮಾತನಾಡಿ ಮುಸ್ಲಿಂರ ಮೇಲಿನ ಹಲ್ಲೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಗಂಭೀರ್ ಥರದ ನಾಯಕರೆ ಅದನ್ನು ನಿಲ್ಲಿಸಿ ಎಂದರೂ ಕೇಳದೇ ಅವರನ್ನೇ ತರಾಟೆಗೆ ತೆಗೆದುಕೊಳ್ಳುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಅಂದರೆ ಉನ್ಮಾದದ ಮನಸ್ಥಿತಿ ತಲುಪಿರುವ ಇವರು ಮುಂದೆ ಯಾವ ನಾಯಕರ ಮಾತನ್ನು ಕೇಳದೇ ದೇಶದಲ್ಲಿ ದೊಂಬಿ, ಗದ್ದಲ, ಅರಾಜಕತೆ ಉಂಟು ಮಾಡುವುದರಲ್ಲಿ ಸಂದೇಹವಿಲ್ಲ. ಅದನ್ನು ತಡೆದು ಪ್ರೀತಿ-ವಿಶ್ವಾಸದ, ಶಾಂತಿಯ ನಾಡನ್ನಾಗಿ ಪರಿವರ್ತಿಸಬೇಕಾದ ಜವಾಬ್ದಾರಿ ಪ್ರಜ್ಞಾವಂತರ ಮೇಲಿದೆ.’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸರೋವರ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಡಿ ಬಡಿ ಯಲ್ಲಿ ವಿಶ್ವಾಸ ಇದ್ದವರಿಗೆ ಅದೇ ರೀತಿ ಉತ್ತರ ಕೊಟ್ಟರೆ ಸರಿಯಾಗುತ್ತಾರೆ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...