Homeಮುಖಪುಟಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುರುಗ್ರಾಮದ ಹಲ್ಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದ ಗೌತಮ್ ಗಂಭೀರ್ ವಿರುದ್ಧ ಬಿಜೆಪಿ ಹಿಂಬಾಲಕರು ಟ್ವಿಟ್ಟರ್‍ನಲ್ಲಿ ಆಕ್ರೋಶದಿಂದ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನೀನೊಂದು ದೊಡ್ಡ ವಿಪತ್ತು ಆಗುವ ನಿಟ್ಟಿನಲ್ಲಿದ್ದೀಯ, ಬಾಯಿ ಮುಚ್ಚಿಕೊಂಡಿರು. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಏಕೆ ಟ್ವೀಟ್ ಮಾಡಿಲ್ಲ ಎಂದು ಜಸುಮತಿ ಪಟೇಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೇಳಿಕೆ ನೀಡಿದ್ದು ಮುಸ್ಲಿಮರ ತುಷ್ಟೀಕರಣ ಮಾಡಲು ಅಲ್ಲ. ನಾನ್‍ಸೆನ್ಸ್ ಹೇಳಿಕೆಗಳನ್ನು ಕೊಡುವ ಮುನ್ನ ಸಂದರ್ಭವನ್ನು ಸರಿಯಾಗಿ ಅರಿತುಕೋ ಎಂದು ಲಿಲ್ಲಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಅಮೇಥಿಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾದಾಗ ನೀನು ಟ್ವೀಟ್ ಮಾಡಲಿಲ್ಲ, ಈ ಪ್ರಕರಣದಲ್ಲಿ ಮಾತ್ರ ಶೀಘ್ರವೇ ಟ್ವೀಟ್ ಮಾಡುತ್ತೀರಿ. ನಿಮ್ಮ ಹತ್ತಿರದ ಜಿಹಾದಿ ಜಾವೇದ್ ಅಕ್ತರ್ ಅನ್ನು ಕೇಳಿದ್ದೀರಾ? ಇದರಿಂದ ಸಾಮಾಜಿಕ ಜಾಲಾತಾಣದಲ್ಲಿ ನರೇಂದ್ರ ಮೋದಿಯವರಿಗಿರುವ ಬೆಂಬಲವನ್ನು ಏಕೆ ಹಾಳು ಮಾಡುತ್ತೀರಿ? ಎಂದು ರಿತುರವರು ಹೇಳಿದ್ದಾರೆ.

ಡಾ. ವೀರೇಂದ್ರ ಎಂಬುವವರು, ನೀನೊಂದು ದೊಡ್ಡ ನಿರಾಶೆ. ಪಕ್ಷದ ಸಿದ್ಧಾಂತದ ಬಗ್ಗೆ ಯಾವುದೇ ಜ್ಞಾನವಿಲ್ಲದ ಸೆಲೆಬ್ರೆಟಿಗಳಿಗೆ ಮಣೆಹಾಕುವ ಮೊದಲು ಬಿಜೆಪಿ 10 ಸಾರಿ ಯೋಚಿಸಬೇಕು ಎಂದು ಮನೋಜ್ ತಿವಾರಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:

ಹರ್ಯಾಣದ ಗುರುಗ್ರಾಮದಲ್ಲಿ ಮೂರು ದಿನಗಳ ಕೆಳಗೆ ಮುಸ್ಲಿಮ್ ಯುವಕನಿಗೆ ಆತ ಮುಸ್ಲಿಂ ಎಂಬ ಕಾರಣಕ್ಕೆ, ಟೋಪಿ ತೆಗಿ ಎಂದೂ, ಜೈ ಶ್ರೀರಾಮ್ ಎಂದು ಕೂಗು ಎಂದು ಪೀಡಿಸಿದ್ದಲ್ಲದೇ ಪುಂಡ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದೇಶದಲ್ಲಿ ಬಿಜೆಪಿ ಮತ್ತೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಈ ರೀತಿಯ ಗುಂಪು ಹಲ್ಲೆ ಘಟನೆ ನಡೆದಿದ್ದು, ಬಹಳಷ್ಟು ಜನ ಕಳವಳ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದರು.

ಗಂಭೀರ್ ಹೇಳಿದ್ದೇನು?

ಬಿಜೆಪಿಯಿಂದ ಪೂರ್ವದೆಹಲಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಗೌತಮ್ ಗಂಭೀರ್ ಈ ಘಟನೆಯನ್ನು ಕಟುವಾಗಿ ಟೀಕಿಸಿದ್ದರು. ಇವರು ಟ್ವಿಟ್ಟರ್‍ನಲ್ಲಿ “ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯ ಟೋಪಿ ತೆಗಿಸಿ, ಜೈ ಶ್ರೀರಾಂ ಎಂದು ಬಲವಂತವಾಗಿ ಹೇಳಿಸಿರುವುದು ಹೇಯ ಕೃತ್ಯ. ಗುರುಗ್ರಾಮದ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮದು ಜಾತ್ಯಾತೀತ ದೇಶ. ಇಲ್ಲಿ ಜಾವೇದ್ ಅಕ್ತರ್ ‘ಓ ಪಾಲನ್ ಆರೆ, ನಿರ್ಗುಣ್ ಔರ್ ನ್ಯಾರೇ’ ಎಂಬ ಪ್ರಾರ್ಥನೆ ಬರೆದರೆ, ರಾಕೇಸ್ ಓಂ ಪ್ರಕಾಶ್ ಮೆಹ್ತಾ ಡೆಲ್ಲಿ 6 ಎಂಬ ಚಿತ್ರದಲ್ಲಿ ‘ಅಜಿರ್ಃಯಾ’ ಹಾಡು ಕೊಟ್ಟಂತಹ ದೇಶವಿದು” ಎಂದು ಬರೆದಿದ್ದರು.

ಅಷ್ಟು ಮಾತ್ರವಲ್ಲದೇ ಮತ್ತೊಂದು ಟ್ವೀಟ್‍ನಲ್ಲಿ ಗಂಭೀರ್ “ಗುರುಗ್ರಾಮದ ಘಟನೆಗೆ ಸೀಮಿತವಾಗಿ ನಾನಿದನ್ನು ಹೇಳುತ್ತಿಲ್ಲ, ನನ್ನ ಜಾತ್ಯಾತೀತತೆಯು ಮಾನ್ಯ ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬುದರ ತಿರುಳಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ ನಡೆಸುವುದು ಖಂಡನೀಯ. ಸಹಿಷ್ಣುತೆ ಮತ್ತು ಎಲ್ಲರನ್ನು ಒಳಗೊಂಡ ಅಭಿವೃದ್ದಿಯ ಆಧಾರದಲ್ಲಿ ಭಾರತದ ಮೌಲ್ಯ ನಿಂತಿದೆ” ಎಂದು ಸಹ ತಿಳಿಸಿದ್ದರು.

ಇವರೆಡೂ ಟ್ವೀಟ್‍ಗಳಿಗಾಗಿ ನಿಜಕ್ಕೂ ಗೌತಮ್ ಗಂಭೀರ್‍ರವರನ್ನು ಅಭಿನಂದಿಸಬೇಕು. ಇಂದಿನ ಭಾರತಕ್ಕೆ ಈ ಆಶಯ ತುಂಬಾ ಒಳ್ಳೆಯದು. ಆದರೆ ಗೌತಮ್ ಮಾತ್ರವಲ್ಲ ನಮ್ಮ ದೇಶದ ಪ್ರಧಾನಿಯೇ ಸಂದರ್ಭಕ್ಕೆ ತಕ್ಕಂತ ಹೇಳಿಕೆ ಕೊಡುವುದರಲ್ಲಿ ನಿಸ್ಸೀಮರು. ಈ ಹಿಂದೆ ಗಂಭೀರ್ ಪಾಕಿಸ್ತಾನದ ವಿರುದ್ಧವಾಗಿ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದರು ಮಾತ್ರವಲ್ಲ, ದೇಶಭಕ್ತಿ, ಸೇನೆ ಮುಂತಾದವರು ಸುತ್ತಲೇ ಸುತ್ತುತ್ತಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕಿಕೆಟ್ ಆಡಬಾರದೆಂದು ಸಹ ಹೇಳಿದ್ದರು. 2002ರಲ್ಲಿ ಗುಜರಾತ್‍ನಲ್ಲಿ ಮುಸ್ಲಿಂರ ಮಾರಣಹೋಮಕ್ಕೆ ಕಾರಣದಾಗ ಮೋದಿ ಇಂದು ಅಲ್ಪಸಂಖ್ಯಾತರನ್ನು ನಾವು ಜೊತೆಯಲ್ಲಿ ಕರೆದೊಯ್ಯಬೇಕೆಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ. ತಾನೀಗ ಕ್ರಿಕೆಟರ್ ಅಲ್ಲ ಎಂಬುದನ್ನು ಗಂಭೀರ್ ನೆನಪಿಡಬೇಕು, ಆತನಾಡುವ ಮಾತುಗಳು ಬಿಜೆಪಿ ಪಕ್ಷಕ್ಕೆ ವಿರುದ್ಧವಾಗಿರುತ್ತವೆ ಮಾತ್ರವಲ್ಲ ವಿಪಕ್ಷಗಳು ನಮ್ಮ ಮೇಲೆ ಮುಗಿಬೀಳಲು ಆಧಾರವಾಗುತ್ತವೆ ಎಂದು ದೆಹಲಿಯ ಹಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳಾದಾಗ ಮಾತಾಡದೇ ಈಗ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಾಗ, ಅದರಲ್ಲೂ ಬಿಜೆಪಿ ಕಾರ್ಯಕರ್ತರೆ ಹಲ್ಲೆ ಮಾಡಿದ್ದಾರೆ ಎಂಬ ಅನುಮಾನಗಳಿದ್ದಾಗ ಗಂಭೀರ್ ಹೀಗೆ ಮಾತಾಡುವುದು ಪಕ್ಷಕ್ಕೆ ವಿರುದ್ಧ ಎಂದು ಬಿಜೆಪಿ ಮುಖಂಡರು ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಂದರೆ ತಪ್ಪನ್ನು ಬಿಜೆಪಿಯವರು ಮಾಡಿದರೆ ಸರಿ, ಬೇರೆ ಪಕ್ಷದವರು ಮಾಡಿದರೆ ತಪ್ಪು ಎನ್ನುವ ಸರ್ವಾಧಿಕಾರಿ ಧೋರಣೆಯಲ್ಲಿ ಬಿಜೆಪಿಯವರು ಮಾತಾಡುತ್ತಿರುವುದು ಈ ದೇಶ ಎತ್ತ ಸಾಗುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ.

ಸರೋವರ್ ಬೆಂಕಿಕೆರೆ

‘ಇನ್ನು ಟ್ವಿಟ್ಟರ್‍ನಲ್ಲಿನ ವಿಷಕಾರಿ ಹೇಳಿಕೆಗಳನ್ನು ಗಮನಿಸಿದರೆ ಈ ದೇಶದ ಹಲವಾರು ಜನ ಅಲ್ಪಸಂಖ್ಯಾತರು, ದಲಿತರ ಮೇಲೆ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ. ಹೊಡಿ ಬಡಿ ರೀತಿಯಲ್ಲಿಯೇ ಮಾತನಾಡಿ ಮುಸ್ಲಿಂರ ಮೇಲಿನ ಹಲ್ಲೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಗಂಭೀರ್ ಥರದ ನಾಯಕರೆ ಅದನ್ನು ನಿಲ್ಲಿಸಿ ಎಂದರೂ ಕೇಳದೇ ಅವರನ್ನೇ ತರಾಟೆಗೆ ತೆಗೆದುಕೊಳ್ಳುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಅಂದರೆ ಉನ್ಮಾದದ ಮನಸ್ಥಿತಿ ತಲುಪಿರುವ ಇವರು ಮುಂದೆ ಯಾವ ನಾಯಕರ ಮಾತನ್ನು ಕೇಳದೇ ದೇಶದಲ್ಲಿ ದೊಂಬಿ, ಗದ್ದಲ, ಅರಾಜಕತೆ ಉಂಟು ಮಾಡುವುದರಲ್ಲಿ ಸಂದೇಹವಿಲ್ಲ. ಅದನ್ನು ತಡೆದು ಪ್ರೀತಿ-ವಿಶ್ವಾಸದ, ಶಾಂತಿಯ ನಾಡನ್ನಾಗಿ ಪರಿವರ್ತಿಸಬೇಕಾದ ಜವಾಬ್ದಾರಿ ಪ್ರಜ್ಞಾವಂತರ ಮೇಲಿದೆ.’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸರೋವರ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಡಿ ಬಡಿ ಯಲ್ಲಿ ವಿಶ್ವಾಸ ಇದ್ದವರಿಗೆ ಅದೇ ರೀತಿ ಉತ್ತರ ಕೊಟ್ಟರೆ ಸರಿಯಾಗುತ್ತಾರೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....