Homeಮುಖಪುಟಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

- Advertisement -
- Advertisement -

ದೆಹಲಿಯಲ್ಲಿ ಸಿಎಎ ಹೋರಾಟದ ಜೊತೆಗೆ ಚುನಾವಣೆ ರಂಗೇರಿದೆ. ಆಮ್‌ ಆದ್ಮಿ ಪಕ್ಷ ಮರು ಆಯ್ಕೆ ಬಯಸಿ ನಮ್ಮ ಕೆಲಸಗಳು ನಿಮಗೆ ಇಷ್ಟವಾದರೆ ಮಾತ್ರ ಮತ ಕೊಡಿ ಎಂದು ಘೋಷಿಸಿಬಿಟ್ಟಿವೆ. ಅದಕ್ಕೆ ಬಿಜೆಪಿ ಅವರ ಕೆಲಸಗಳು ಇಷ್ಟವಾಗಿಲ್ಲ ಎಂದು ತೋರಿಸುವ ನಾನಾ ಪ್ರಯತ್ನ ಮಾಡುತ್ತಿದೆ. ಅದರಲ್ಲಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ “ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ” ಘಟನೆ ಜರುಗಿದೆ.

ಜನವರಿ 27 ರಂದು ಬಿಜೆಪಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿದ್ದು, ಇದು ರಾಜಧಾನಿಯಲ್ಲಿ ಶಿಥಿಲಗೊಂಡಿರುವ ಶಾಲೆಯನ್ನು ತೋರಿಸುತ್ತದೆ ಎಂದು ಕರೆದಿದ್ದಾರೆ. “ಅವರು ಶಿಕ್ಷಣದ ಮೇಲೆ ಚುನಾವಣೆ ಎದುರಿಸಿ ಎಂದು ಹೇಳುತ್ತಾರೆ, ನಾನು ಚುನಾವಣೆಯನ್ನು ಸತ್ಯದ ಮೇಲೆ ಎದುರಿಸಿ ಎಂದು ಹೇಳುತ್ತೇನೆ!” ಎಂದು ಬರೆದಿದ್ದು ಆಮ್ ಆದ್ಮಿ ಪಕ್ಷವನ್ನು ಕಳಪೆ ಶಾಲೆಗಳನ್ನು ಸೃಷ್ಟಿಸಿದೆ ಎಂದು ಪ್ರತಿಪಾದಿಸಿದ್ದಾರೆ. ಅವರ ವಿಡಿಯೋ ಮಂದಬೆಳಕಿನಲ್ಲಿ ಚಿತ್ರಿಸಲು ಪ್ರಯತ್ನಿಸಿದೆ.

ಗಂಭೀರ್‌ರವರ ವೈರಲ್ ವೀಡಿಯೊದ ಪ್ರಾರಂಭದಲ್ಲಿ, ಕಟ್ಟಡದ ಗೇಟ್‌ನಲ್ಲಿ ನೋಟಿಸ್ ಒಂದು ಗೋಚರಿಸುತ್ತದೆ. ಆದರೆ ಕ್ಯಾಮೆರಾ ನೋಟಿಸ್‌ನತ್ತ ಗಮನ ಹರಿಸುವುದಿಲ್ಲ. ಪತ್ರಕರ್ತ ಉದಯ್ ರಾಣಾ ಸಿಂಗ್ ಅವರು ನೋಟಿಸ್ ಅನ್ನು ಕ್ಲೋಸ್ ಅಪ್ ಮಾಡಿ ಟ್ವೀಟ್ ಮಾಡಿದ್ದಾರೆ. ಈ ಶಾಲೆಯನ್ನು ಎಸ್‌ಬಿವಿ ಜೆಜೆ ಕಾಲೋನಿಗೆ ಅಕ್ಟೋಬರ್ 9, 2019 ರಂದು ಸ್ಥಳಾಂತರಿಸಲಾಗಿದೆ ಎಂದು ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ. ಅಂದರೆ ಮುಚ್ಚಿರುವ ಶಾಲೆಯ ವಿಡಿಯೋ ಮಾಡಿ ಗಂಭೀರ್‌ ಆಪ್‌ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ!

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಗಂಭೀರ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ “ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಕಟ್ಟಡವು ಇನ್ನು ಮುಂದೆ ಕ್ರಿಯಾತ್ಮಕ ಶಾಲೆಯಾಗಿರುವುದಿಲ್ಲ ಎಂದು ಬರೆದಿದ್ದಾರೆ. ನೀವು ಭೇಟಿ ನೀಡಿದ ಶಾಲೆಯನ್ನು 2019 ರ ಅಕ್ಟೋಬರ್‌ನಲ್ಲಿ ಎಸ್‌ಬಿವಿ ಜೆಜೆ ಕಾಲೋನಿಗೆ ಸ್ಥಳಾಂತರಿಸಲಾಗಿದೆ” ಎಂದು ನೋಟಿಸ್ ಸ್ಪಷ್ಟವಾಗಿ ಗೋಚರಿಸುವ ವೀಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ಆಪ್‌ ಪಕ್ಷವು “ಗಂಭೀರ್‌ರವರು ದಯವಿಟ್ಟು ಕಾಮೆಂಟರಿ ಬಾಕ್ಸ್‌ನಿಂದ ಹೊರಬಂದು ನಮ್ಮ ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಬೇಕೆಂದು” ಕರೆ ನೀಡಿದ್ದಾರೆ.

ಪತ್ರಕರ್ತ ಉದಯ್ ರಾಣಾ ಸಿಂಗ್ ವಿದ್ಯಾರ್ಥಿಗಳಿಗೆ ಒದಗಿಸಿದ ತಾತ್ಕಾಲಿಕ ಶಾಲೆಯ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. “ನಾನು ಖಿಚ್ಡಿಪುರದ ತಾತ್ಕಾಲಿಕ ಶಾಲೆಗೂ ಭೇಟಿ ನೀಡಿದ್ದೆ. ಮಕ್ಕಳ ಶಾಲೆ ನವೀಕರಣಗೊಳ್ಳುತ್ತಿರುವುದರಿಂದ ಅವರು ಅಕ್ಟೋಬರ್‌ನಿಂದ ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ ”ಎಂದು ಅವರು ಬರೆದಿದ್ದಾರೆ.

ಗಂಭೀರ್‌ರವರ ಈ ತಪ್ಪು ಮಾಹಿತಿಯನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಟೀಕಿಸಿದ್ದಾರೆ. “ಸರ್ ಅಮಿತ್‌ಶಾ ಜಿಯವರೆ, ಸಂಸದ ಗೌತಮ್ ಗಂಭೀರ್ ಅವರು ಟ್ವೀಟ್‌ ಮಾಡಿರುವ ವಿಡಿಯೊದಲ್ಲಿ, ಕಟ್ಟಡದ ಗೇಟ್‌ನಲ್ಲಿರುವ ನೋಟೀಸ್‌ನಲ್ಲಿ, ಶಾಲೆಯು ನವೀಕರಣಗೊಳ್ಳುತ್ತಿರುವುದರಿಂದ ಆರು ತಿಂಗಳ ಹಿಂದೆ ನೆರೆಯ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳುತ್ತದೆ” ಸರಿಯಾಗಿ ನೋಡಿ ಎಂದು ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...