Homeಮುಖಪುಟಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

- Advertisement -
- Advertisement -

ದೆಹಲಿಯಲ್ಲಿ ಸಿಎಎ ಹೋರಾಟದ ಜೊತೆಗೆ ಚುನಾವಣೆ ರಂಗೇರಿದೆ. ಆಮ್‌ ಆದ್ಮಿ ಪಕ್ಷ ಮರು ಆಯ್ಕೆ ಬಯಸಿ ನಮ್ಮ ಕೆಲಸಗಳು ನಿಮಗೆ ಇಷ್ಟವಾದರೆ ಮಾತ್ರ ಮತ ಕೊಡಿ ಎಂದು ಘೋಷಿಸಿಬಿಟ್ಟಿವೆ. ಅದಕ್ಕೆ ಬಿಜೆಪಿ ಅವರ ಕೆಲಸಗಳು ಇಷ್ಟವಾಗಿಲ್ಲ ಎಂದು ತೋರಿಸುವ ನಾನಾ ಪ್ರಯತ್ನ ಮಾಡುತ್ತಿದೆ. ಅದರಲ್ಲಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ “ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ” ಘಟನೆ ಜರುಗಿದೆ.

ಜನವರಿ 27 ರಂದು ಬಿಜೆಪಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿದ್ದು, ಇದು ರಾಜಧಾನಿಯಲ್ಲಿ ಶಿಥಿಲಗೊಂಡಿರುವ ಶಾಲೆಯನ್ನು ತೋರಿಸುತ್ತದೆ ಎಂದು ಕರೆದಿದ್ದಾರೆ. “ಅವರು ಶಿಕ್ಷಣದ ಮೇಲೆ ಚುನಾವಣೆ ಎದುರಿಸಿ ಎಂದು ಹೇಳುತ್ತಾರೆ, ನಾನು ಚುನಾವಣೆಯನ್ನು ಸತ್ಯದ ಮೇಲೆ ಎದುರಿಸಿ ಎಂದು ಹೇಳುತ್ತೇನೆ!” ಎಂದು ಬರೆದಿದ್ದು ಆಮ್ ಆದ್ಮಿ ಪಕ್ಷವನ್ನು ಕಳಪೆ ಶಾಲೆಗಳನ್ನು ಸೃಷ್ಟಿಸಿದೆ ಎಂದು ಪ್ರತಿಪಾದಿಸಿದ್ದಾರೆ. ಅವರ ವಿಡಿಯೋ ಮಂದಬೆಳಕಿನಲ್ಲಿ ಚಿತ್ರಿಸಲು ಪ್ರಯತ್ನಿಸಿದೆ.

ಗಂಭೀರ್‌ರವರ ವೈರಲ್ ವೀಡಿಯೊದ ಪ್ರಾರಂಭದಲ್ಲಿ, ಕಟ್ಟಡದ ಗೇಟ್‌ನಲ್ಲಿ ನೋಟಿಸ್ ಒಂದು ಗೋಚರಿಸುತ್ತದೆ. ಆದರೆ ಕ್ಯಾಮೆರಾ ನೋಟಿಸ್‌ನತ್ತ ಗಮನ ಹರಿಸುವುದಿಲ್ಲ. ಪತ್ರಕರ್ತ ಉದಯ್ ರಾಣಾ ಸಿಂಗ್ ಅವರು ನೋಟಿಸ್ ಅನ್ನು ಕ್ಲೋಸ್ ಅಪ್ ಮಾಡಿ ಟ್ವೀಟ್ ಮಾಡಿದ್ದಾರೆ. ಈ ಶಾಲೆಯನ್ನು ಎಸ್‌ಬಿವಿ ಜೆಜೆ ಕಾಲೋನಿಗೆ ಅಕ್ಟೋಬರ್ 9, 2019 ರಂದು ಸ್ಥಳಾಂತರಿಸಲಾಗಿದೆ ಎಂದು ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ. ಅಂದರೆ ಮುಚ್ಚಿರುವ ಶಾಲೆಯ ವಿಡಿಯೋ ಮಾಡಿ ಗಂಭೀರ್‌ ಆಪ್‌ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ!

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಗಂಭೀರ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ “ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಕಟ್ಟಡವು ಇನ್ನು ಮುಂದೆ ಕ್ರಿಯಾತ್ಮಕ ಶಾಲೆಯಾಗಿರುವುದಿಲ್ಲ ಎಂದು ಬರೆದಿದ್ದಾರೆ. ನೀವು ಭೇಟಿ ನೀಡಿದ ಶಾಲೆಯನ್ನು 2019 ರ ಅಕ್ಟೋಬರ್‌ನಲ್ಲಿ ಎಸ್‌ಬಿವಿ ಜೆಜೆ ಕಾಲೋನಿಗೆ ಸ್ಥಳಾಂತರಿಸಲಾಗಿದೆ” ಎಂದು ನೋಟಿಸ್ ಸ್ಪಷ್ಟವಾಗಿ ಗೋಚರಿಸುವ ವೀಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ಆಪ್‌ ಪಕ್ಷವು “ಗಂಭೀರ್‌ರವರು ದಯವಿಟ್ಟು ಕಾಮೆಂಟರಿ ಬಾಕ್ಸ್‌ನಿಂದ ಹೊರಬಂದು ನಮ್ಮ ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಬೇಕೆಂದು” ಕರೆ ನೀಡಿದ್ದಾರೆ.

ಪತ್ರಕರ್ತ ಉದಯ್ ರಾಣಾ ಸಿಂಗ್ ವಿದ್ಯಾರ್ಥಿಗಳಿಗೆ ಒದಗಿಸಿದ ತಾತ್ಕಾಲಿಕ ಶಾಲೆಯ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. “ನಾನು ಖಿಚ್ಡಿಪುರದ ತಾತ್ಕಾಲಿಕ ಶಾಲೆಗೂ ಭೇಟಿ ನೀಡಿದ್ದೆ. ಮಕ್ಕಳ ಶಾಲೆ ನವೀಕರಣಗೊಳ್ಳುತ್ತಿರುವುದರಿಂದ ಅವರು ಅಕ್ಟೋಬರ್‌ನಿಂದ ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ ”ಎಂದು ಅವರು ಬರೆದಿದ್ದಾರೆ.

ಗಂಭೀರ್‌ರವರ ಈ ತಪ್ಪು ಮಾಹಿತಿಯನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಟೀಕಿಸಿದ್ದಾರೆ. “ಸರ್ ಅಮಿತ್‌ಶಾ ಜಿಯವರೆ, ಸಂಸದ ಗೌತಮ್ ಗಂಭೀರ್ ಅವರು ಟ್ವೀಟ್‌ ಮಾಡಿರುವ ವಿಡಿಯೊದಲ್ಲಿ, ಕಟ್ಟಡದ ಗೇಟ್‌ನಲ್ಲಿರುವ ನೋಟೀಸ್‌ನಲ್ಲಿ, ಶಾಲೆಯು ನವೀಕರಣಗೊಳ್ಳುತ್ತಿರುವುದರಿಂದ ಆರು ತಿಂಗಳ ಹಿಂದೆ ನೆರೆಯ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳುತ್ತದೆ” ಸರಿಯಾಗಿ ನೋಡಿ ಎಂದು ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...