Homeಮುಖಪುಟಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

- Advertisement -
- Advertisement -

ದೆಹಲಿಯಲ್ಲಿ ಸಿಎಎ ಹೋರಾಟದ ಜೊತೆಗೆ ಚುನಾವಣೆ ರಂಗೇರಿದೆ. ಆಮ್‌ ಆದ್ಮಿ ಪಕ್ಷ ಮರು ಆಯ್ಕೆ ಬಯಸಿ ನಮ್ಮ ಕೆಲಸಗಳು ನಿಮಗೆ ಇಷ್ಟವಾದರೆ ಮಾತ್ರ ಮತ ಕೊಡಿ ಎಂದು ಘೋಷಿಸಿಬಿಟ್ಟಿವೆ. ಅದಕ್ಕೆ ಬಿಜೆಪಿ ಅವರ ಕೆಲಸಗಳು ಇಷ್ಟವಾಗಿಲ್ಲ ಎಂದು ತೋರಿಸುವ ನಾನಾ ಪ್ರಯತ್ನ ಮಾಡುತ್ತಿದೆ. ಅದರಲ್ಲಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ “ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ” ಘಟನೆ ಜರುಗಿದೆ.

ಜನವರಿ 27 ರಂದು ಬಿಜೆಪಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿದ್ದು, ಇದು ರಾಜಧಾನಿಯಲ್ಲಿ ಶಿಥಿಲಗೊಂಡಿರುವ ಶಾಲೆಯನ್ನು ತೋರಿಸುತ್ತದೆ ಎಂದು ಕರೆದಿದ್ದಾರೆ. “ಅವರು ಶಿಕ್ಷಣದ ಮೇಲೆ ಚುನಾವಣೆ ಎದುರಿಸಿ ಎಂದು ಹೇಳುತ್ತಾರೆ, ನಾನು ಚುನಾವಣೆಯನ್ನು ಸತ್ಯದ ಮೇಲೆ ಎದುರಿಸಿ ಎಂದು ಹೇಳುತ್ತೇನೆ!” ಎಂದು ಬರೆದಿದ್ದು ಆಮ್ ಆದ್ಮಿ ಪಕ್ಷವನ್ನು ಕಳಪೆ ಶಾಲೆಗಳನ್ನು ಸೃಷ್ಟಿಸಿದೆ ಎಂದು ಪ್ರತಿಪಾದಿಸಿದ್ದಾರೆ. ಅವರ ವಿಡಿಯೋ ಮಂದಬೆಳಕಿನಲ್ಲಿ ಚಿತ್ರಿಸಲು ಪ್ರಯತ್ನಿಸಿದೆ.

ಗಂಭೀರ್‌ರವರ ವೈರಲ್ ವೀಡಿಯೊದ ಪ್ರಾರಂಭದಲ್ಲಿ, ಕಟ್ಟಡದ ಗೇಟ್‌ನಲ್ಲಿ ನೋಟಿಸ್ ಒಂದು ಗೋಚರಿಸುತ್ತದೆ. ಆದರೆ ಕ್ಯಾಮೆರಾ ನೋಟಿಸ್‌ನತ್ತ ಗಮನ ಹರಿಸುವುದಿಲ್ಲ. ಪತ್ರಕರ್ತ ಉದಯ್ ರಾಣಾ ಸಿಂಗ್ ಅವರು ನೋಟಿಸ್ ಅನ್ನು ಕ್ಲೋಸ್ ಅಪ್ ಮಾಡಿ ಟ್ವೀಟ್ ಮಾಡಿದ್ದಾರೆ. ಈ ಶಾಲೆಯನ್ನು ಎಸ್‌ಬಿವಿ ಜೆಜೆ ಕಾಲೋನಿಗೆ ಅಕ್ಟೋಬರ್ 9, 2019 ರಂದು ಸ್ಥಳಾಂತರಿಸಲಾಗಿದೆ ಎಂದು ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ. ಅಂದರೆ ಮುಚ್ಚಿರುವ ಶಾಲೆಯ ವಿಡಿಯೋ ಮಾಡಿ ಗಂಭೀರ್‌ ಆಪ್‌ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ!

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಗಂಭೀರ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ “ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಕಟ್ಟಡವು ಇನ್ನು ಮುಂದೆ ಕ್ರಿಯಾತ್ಮಕ ಶಾಲೆಯಾಗಿರುವುದಿಲ್ಲ ಎಂದು ಬರೆದಿದ್ದಾರೆ. ನೀವು ಭೇಟಿ ನೀಡಿದ ಶಾಲೆಯನ್ನು 2019 ರ ಅಕ್ಟೋಬರ್‌ನಲ್ಲಿ ಎಸ್‌ಬಿವಿ ಜೆಜೆ ಕಾಲೋನಿಗೆ ಸ್ಥಳಾಂತರಿಸಲಾಗಿದೆ” ಎಂದು ನೋಟಿಸ್ ಸ್ಪಷ್ಟವಾಗಿ ಗೋಚರಿಸುವ ವೀಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ಆಪ್‌ ಪಕ್ಷವು “ಗಂಭೀರ್‌ರವರು ದಯವಿಟ್ಟು ಕಾಮೆಂಟರಿ ಬಾಕ್ಸ್‌ನಿಂದ ಹೊರಬಂದು ನಮ್ಮ ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಬೇಕೆಂದು” ಕರೆ ನೀಡಿದ್ದಾರೆ.

ಪತ್ರಕರ್ತ ಉದಯ್ ರಾಣಾ ಸಿಂಗ್ ವಿದ್ಯಾರ್ಥಿಗಳಿಗೆ ಒದಗಿಸಿದ ತಾತ್ಕಾಲಿಕ ಶಾಲೆಯ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. “ನಾನು ಖಿಚ್ಡಿಪುರದ ತಾತ್ಕಾಲಿಕ ಶಾಲೆಗೂ ಭೇಟಿ ನೀಡಿದ್ದೆ. ಮಕ್ಕಳ ಶಾಲೆ ನವೀಕರಣಗೊಳ್ಳುತ್ತಿರುವುದರಿಂದ ಅವರು ಅಕ್ಟೋಬರ್‌ನಿಂದ ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ ”ಎಂದು ಅವರು ಬರೆದಿದ್ದಾರೆ.

ಗಂಭೀರ್‌ರವರ ಈ ತಪ್ಪು ಮಾಹಿತಿಯನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಟೀಕಿಸಿದ್ದಾರೆ. “ಸರ್ ಅಮಿತ್‌ಶಾ ಜಿಯವರೆ, ಸಂಸದ ಗೌತಮ್ ಗಂಭೀರ್ ಅವರು ಟ್ವೀಟ್‌ ಮಾಡಿರುವ ವಿಡಿಯೊದಲ್ಲಿ, ಕಟ್ಟಡದ ಗೇಟ್‌ನಲ್ಲಿರುವ ನೋಟೀಸ್‌ನಲ್ಲಿ, ಶಾಲೆಯು ನವೀಕರಣಗೊಳ್ಳುತ್ತಿರುವುದರಿಂದ ಆರು ತಿಂಗಳ ಹಿಂದೆ ನೆರೆಯ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳುತ್ತದೆ” ಸರಿಯಾಗಿ ನೋಡಿ ಎಂದು ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...