Homeಮುಖಪುಟಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

- Advertisement -
- Advertisement -

ದೆಹಲಿಯಲ್ಲಿ ಸಿಎಎ ಹೋರಾಟದ ಜೊತೆಗೆ ಚುನಾವಣೆ ರಂಗೇರಿದೆ. ಆಮ್‌ ಆದ್ಮಿ ಪಕ್ಷ ಮರು ಆಯ್ಕೆ ಬಯಸಿ ನಮ್ಮ ಕೆಲಸಗಳು ನಿಮಗೆ ಇಷ್ಟವಾದರೆ ಮಾತ್ರ ಮತ ಕೊಡಿ ಎಂದು ಘೋಷಿಸಿಬಿಟ್ಟಿವೆ. ಅದಕ್ಕೆ ಬಿಜೆಪಿ ಅವರ ಕೆಲಸಗಳು ಇಷ್ಟವಾಗಿಲ್ಲ ಎಂದು ತೋರಿಸುವ ನಾನಾ ಪ್ರಯತ್ನ ಮಾಡುತ್ತಿದೆ. ಅದರಲ್ಲಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ “ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ” ಘಟನೆ ಜರುಗಿದೆ.

ಜನವರಿ 27 ರಂದು ಬಿಜೆಪಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿದ್ದು, ಇದು ರಾಜಧಾನಿಯಲ್ಲಿ ಶಿಥಿಲಗೊಂಡಿರುವ ಶಾಲೆಯನ್ನು ತೋರಿಸುತ್ತದೆ ಎಂದು ಕರೆದಿದ್ದಾರೆ. “ಅವರು ಶಿಕ್ಷಣದ ಮೇಲೆ ಚುನಾವಣೆ ಎದುರಿಸಿ ಎಂದು ಹೇಳುತ್ತಾರೆ, ನಾನು ಚುನಾವಣೆಯನ್ನು ಸತ್ಯದ ಮೇಲೆ ಎದುರಿಸಿ ಎಂದು ಹೇಳುತ್ತೇನೆ!” ಎಂದು ಬರೆದಿದ್ದು ಆಮ್ ಆದ್ಮಿ ಪಕ್ಷವನ್ನು ಕಳಪೆ ಶಾಲೆಗಳನ್ನು ಸೃಷ್ಟಿಸಿದೆ ಎಂದು ಪ್ರತಿಪಾದಿಸಿದ್ದಾರೆ. ಅವರ ವಿಡಿಯೋ ಮಂದಬೆಳಕಿನಲ್ಲಿ ಚಿತ್ರಿಸಲು ಪ್ರಯತ್ನಿಸಿದೆ.

ಗಂಭೀರ್‌ರವರ ವೈರಲ್ ವೀಡಿಯೊದ ಪ್ರಾರಂಭದಲ್ಲಿ, ಕಟ್ಟಡದ ಗೇಟ್‌ನಲ್ಲಿ ನೋಟಿಸ್ ಒಂದು ಗೋಚರಿಸುತ್ತದೆ. ಆದರೆ ಕ್ಯಾಮೆರಾ ನೋಟಿಸ್‌ನತ್ತ ಗಮನ ಹರಿಸುವುದಿಲ್ಲ. ಪತ್ರಕರ್ತ ಉದಯ್ ರಾಣಾ ಸಿಂಗ್ ಅವರು ನೋಟಿಸ್ ಅನ್ನು ಕ್ಲೋಸ್ ಅಪ್ ಮಾಡಿ ಟ್ವೀಟ್ ಮಾಡಿದ್ದಾರೆ. ಈ ಶಾಲೆಯನ್ನು ಎಸ್‌ಬಿವಿ ಜೆಜೆ ಕಾಲೋನಿಗೆ ಅಕ್ಟೋಬರ್ 9, 2019 ರಂದು ಸ್ಥಳಾಂತರಿಸಲಾಗಿದೆ ಎಂದು ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ. ಅಂದರೆ ಮುಚ್ಚಿರುವ ಶಾಲೆಯ ವಿಡಿಯೋ ಮಾಡಿ ಗಂಭೀರ್‌ ಆಪ್‌ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ!

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಗಂಭೀರ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ “ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಕಟ್ಟಡವು ಇನ್ನು ಮುಂದೆ ಕ್ರಿಯಾತ್ಮಕ ಶಾಲೆಯಾಗಿರುವುದಿಲ್ಲ ಎಂದು ಬರೆದಿದ್ದಾರೆ. ನೀವು ಭೇಟಿ ನೀಡಿದ ಶಾಲೆಯನ್ನು 2019 ರ ಅಕ್ಟೋಬರ್‌ನಲ್ಲಿ ಎಸ್‌ಬಿವಿ ಜೆಜೆ ಕಾಲೋನಿಗೆ ಸ್ಥಳಾಂತರಿಸಲಾಗಿದೆ” ಎಂದು ನೋಟಿಸ್ ಸ್ಪಷ್ಟವಾಗಿ ಗೋಚರಿಸುವ ವೀಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ಆಪ್‌ ಪಕ್ಷವು “ಗಂಭೀರ್‌ರವರು ದಯವಿಟ್ಟು ಕಾಮೆಂಟರಿ ಬಾಕ್ಸ್‌ನಿಂದ ಹೊರಬಂದು ನಮ್ಮ ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಬೇಕೆಂದು” ಕರೆ ನೀಡಿದ್ದಾರೆ.

ಪತ್ರಕರ್ತ ಉದಯ್ ರಾಣಾ ಸಿಂಗ್ ವಿದ್ಯಾರ್ಥಿಗಳಿಗೆ ಒದಗಿಸಿದ ತಾತ್ಕಾಲಿಕ ಶಾಲೆಯ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. “ನಾನು ಖಿಚ್ಡಿಪುರದ ತಾತ್ಕಾಲಿಕ ಶಾಲೆಗೂ ಭೇಟಿ ನೀಡಿದ್ದೆ. ಮಕ್ಕಳ ಶಾಲೆ ನವೀಕರಣಗೊಳ್ಳುತ್ತಿರುವುದರಿಂದ ಅವರು ಅಕ್ಟೋಬರ್‌ನಿಂದ ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ ”ಎಂದು ಅವರು ಬರೆದಿದ್ದಾರೆ.

ಗಂಭೀರ್‌ರವರ ಈ ತಪ್ಪು ಮಾಹಿತಿಯನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಟೀಕಿಸಿದ್ದಾರೆ. “ಸರ್ ಅಮಿತ್‌ಶಾ ಜಿಯವರೆ, ಸಂಸದ ಗೌತಮ್ ಗಂಭೀರ್ ಅವರು ಟ್ವೀಟ್‌ ಮಾಡಿರುವ ವಿಡಿಯೊದಲ್ಲಿ, ಕಟ್ಟಡದ ಗೇಟ್‌ನಲ್ಲಿರುವ ನೋಟೀಸ್‌ನಲ್ಲಿ, ಶಾಲೆಯು ನವೀಕರಣಗೊಳ್ಳುತ್ತಿರುವುದರಿಂದ ಆರು ತಿಂಗಳ ಹಿಂದೆ ನೆರೆಯ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳುತ್ತದೆ” ಸರಿಯಾಗಿ ನೋಡಿ ಎಂದು ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...