Homeಮುಖಪುಟಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

- Advertisement -
- Advertisement -

ದೆಹಲಿಯಲ್ಲಿ ಸಿಎಎ ಹೋರಾಟದ ಜೊತೆಗೆ ಚುನಾವಣೆ ರಂಗೇರಿದೆ. ಆಮ್‌ ಆದ್ಮಿ ಪಕ್ಷ ಮರು ಆಯ್ಕೆ ಬಯಸಿ ನಮ್ಮ ಕೆಲಸಗಳು ನಿಮಗೆ ಇಷ್ಟವಾದರೆ ಮಾತ್ರ ಮತ ಕೊಡಿ ಎಂದು ಘೋಷಿಸಿಬಿಟ್ಟಿವೆ. ಅದಕ್ಕೆ ಬಿಜೆಪಿ ಅವರ ಕೆಲಸಗಳು ಇಷ್ಟವಾಗಿಲ್ಲ ಎಂದು ತೋರಿಸುವ ನಾನಾ ಪ್ರಯತ್ನ ಮಾಡುತ್ತಿದೆ. ಅದರಲ್ಲಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ “ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ” ಘಟನೆ ಜರುಗಿದೆ.

ಜನವರಿ 27 ರಂದು ಬಿಜೆಪಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿದ್ದು, ಇದು ರಾಜಧಾನಿಯಲ್ಲಿ ಶಿಥಿಲಗೊಂಡಿರುವ ಶಾಲೆಯನ್ನು ತೋರಿಸುತ್ತದೆ ಎಂದು ಕರೆದಿದ್ದಾರೆ. “ಅವರು ಶಿಕ್ಷಣದ ಮೇಲೆ ಚುನಾವಣೆ ಎದುರಿಸಿ ಎಂದು ಹೇಳುತ್ತಾರೆ, ನಾನು ಚುನಾವಣೆಯನ್ನು ಸತ್ಯದ ಮೇಲೆ ಎದುರಿಸಿ ಎಂದು ಹೇಳುತ್ತೇನೆ!” ಎಂದು ಬರೆದಿದ್ದು ಆಮ್ ಆದ್ಮಿ ಪಕ್ಷವನ್ನು ಕಳಪೆ ಶಾಲೆಗಳನ್ನು ಸೃಷ್ಟಿಸಿದೆ ಎಂದು ಪ್ರತಿಪಾದಿಸಿದ್ದಾರೆ. ಅವರ ವಿಡಿಯೋ ಮಂದಬೆಳಕಿನಲ್ಲಿ ಚಿತ್ರಿಸಲು ಪ್ರಯತ್ನಿಸಿದೆ.

ಗಂಭೀರ್‌ರವರ ವೈರಲ್ ವೀಡಿಯೊದ ಪ್ರಾರಂಭದಲ್ಲಿ, ಕಟ್ಟಡದ ಗೇಟ್‌ನಲ್ಲಿ ನೋಟಿಸ್ ಒಂದು ಗೋಚರಿಸುತ್ತದೆ. ಆದರೆ ಕ್ಯಾಮೆರಾ ನೋಟಿಸ್‌ನತ್ತ ಗಮನ ಹರಿಸುವುದಿಲ್ಲ. ಪತ್ರಕರ್ತ ಉದಯ್ ರಾಣಾ ಸಿಂಗ್ ಅವರು ನೋಟಿಸ್ ಅನ್ನು ಕ್ಲೋಸ್ ಅಪ್ ಮಾಡಿ ಟ್ವೀಟ್ ಮಾಡಿದ್ದಾರೆ. ಈ ಶಾಲೆಯನ್ನು ಎಸ್‌ಬಿವಿ ಜೆಜೆ ಕಾಲೋನಿಗೆ ಅಕ್ಟೋಬರ್ 9, 2019 ರಂದು ಸ್ಥಳಾಂತರಿಸಲಾಗಿದೆ ಎಂದು ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ. ಅಂದರೆ ಮುಚ್ಚಿರುವ ಶಾಲೆಯ ವಿಡಿಯೋ ಮಾಡಿ ಗಂಭೀರ್‌ ಆಪ್‌ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ!

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಗಂಭೀರ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ “ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಕಟ್ಟಡವು ಇನ್ನು ಮುಂದೆ ಕ್ರಿಯಾತ್ಮಕ ಶಾಲೆಯಾಗಿರುವುದಿಲ್ಲ ಎಂದು ಬರೆದಿದ್ದಾರೆ. ನೀವು ಭೇಟಿ ನೀಡಿದ ಶಾಲೆಯನ್ನು 2019 ರ ಅಕ್ಟೋಬರ್‌ನಲ್ಲಿ ಎಸ್‌ಬಿವಿ ಜೆಜೆ ಕಾಲೋನಿಗೆ ಸ್ಥಳಾಂತರಿಸಲಾಗಿದೆ” ಎಂದು ನೋಟಿಸ್ ಸ್ಪಷ್ಟವಾಗಿ ಗೋಚರಿಸುವ ವೀಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ಆಪ್‌ ಪಕ್ಷವು “ಗಂಭೀರ್‌ರವರು ದಯವಿಟ್ಟು ಕಾಮೆಂಟರಿ ಬಾಕ್ಸ್‌ನಿಂದ ಹೊರಬಂದು ನಮ್ಮ ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಬೇಕೆಂದು” ಕರೆ ನೀಡಿದ್ದಾರೆ.

ಪತ್ರಕರ್ತ ಉದಯ್ ರಾಣಾ ಸಿಂಗ್ ವಿದ್ಯಾರ್ಥಿಗಳಿಗೆ ಒದಗಿಸಿದ ತಾತ್ಕಾಲಿಕ ಶಾಲೆಯ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. “ನಾನು ಖಿಚ್ಡಿಪುರದ ತಾತ್ಕಾಲಿಕ ಶಾಲೆಗೂ ಭೇಟಿ ನೀಡಿದ್ದೆ. ಮಕ್ಕಳ ಶಾಲೆ ನವೀಕರಣಗೊಳ್ಳುತ್ತಿರುವುದರಿಂದ ಅವರು ಅಕ್ಟೋಬರ್‌ನಿಂದ ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ ”ಎಂದು ಅವರು ಬರೆದಿದ್ದಾರೆ.

ಗಂಭೀರ್‌ರವರ ಈ ತಪ್ಪು ಮಾಹಿತಿಯನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಟೀಕಿಸಿದ್ದಾರೆ. “ಸರ್ ಅಮಿತ್‌ಶಾ ಜಿಯವರೆ, ಸಂಸದ ಗೌತಮ್ ಗಂಭೀರ್ ಅವರು ಟ್ವೀಟ್‌ ಮಾಡಿರುವ ವಿಡಿಯೊದಲ್ಲಿ, ಕಟ್ಟಡದ ಗೇಟ್‌ನಲ್ಲಿರುವ ನೋಟೀಸ್‌ನಲ್ಲಿ, ಶಾಲೆಯು ನವೀಕರಣಗೊಳ್ಳುತ್ತಿರುವುದರಿಂದ ಆರು ತಿಂಗಳ ಹಿಂದೆ ನೆರೆಯ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳುತ್ತದೆ” ಸರಿಯಾಗಿ ನೋಡಿ ಎಂದು ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...