Homeಮುಖಪುಟಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿಯ ಗೌತಮ್‌ ಗಂಭೀರ್‌!

- Advertisement -
- Advertisement -

ದೆಹಲಿಯಲ್ಲಿ ಸಿಎಎ ಹೋರಾಟದ ಜೊತೆಗೆ ಚುನಾವಣೆ ರಂಗೇರಿದೆ. ಆಮ್‌ ಆದ್ಮಿ ಪಕ್ಷ ಮರು ಆಯ್ಕೆ ಬಯಸಿ ನಮ್ಮ ಕೆಲಸಗಳು ನಿಮಗೆ ಇಷ್ಟವಾದರೆ ಮಾತ್ರ ಮತ ಕೊಡಿ ಎಂದು ಘೋಷಿಸಿಬಿಟ್ಟಿವೆ. ಅದಕ್ಕೆ ಬಿಜೆಪಿ ಅವರ ಕೆಲಸಗಳು ಇಷ್ಟವಾಗಿಲ್ಲ ಎಂದು ತೋರಿಸುವ ನಾನಾ ಪ್ರಯತ್ನ ಮಾಡುತ್ತಿದೆ. ಅದರಲ್ಲಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ “ಸತ್ಯದ ಮೇಲೆ ಚುನಾವಣೆ ನಡೆಸಿ ಎಂದು ಕರೆಕೊಟ್ಟು ಸುಳ್ಳು ಹೇಳಿ ಸಿಕ್ಕಿಬಿದ್ದ” ಘಟನೆ ಜರುಗಿದೆ.

ಜನವರಿ 27 ರಂದು ಬಿಜೆಪಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿದ್ದು, ಇದು ರಾಜಧಾನಿಯಲ್ಲಿ ಶಿಥಿಲಗೊಂಡಿರುವ ಶಾಲೆಯನ್ನು ತೋರಿಸುತ್ತದೆ ಎಂದು ಕರೆದಿದ್ದಾರೆ. “ಅವರು ಶಿಕ್ಷಣದ ಮೇಲೆ ಚುನಾವಣೆ ಎದುರಿಸಿ ಎಂದು ಹೇಳುತ್ತಾರೆ, ನಾನು ಚುನಾವಣೆಯನ್ನು ಸತ್ಯದ ಮೇಲೆ ಎದುರಿಸಿ ಎಂದು ಹೇಳುತ್ತೇನೆ!” ಎಂದು ಬರೆದಿದ್ದು ಆಮ್ ಆದ್ಮಿ ಪಕ್ಷವನ್ನು ಕಳಪೆ ಶಾಲೆಗಳನ್ನು ಸೃಷ್ಟಿಸಿದೆ ಎಂದು ಪ್ರತಿಪಾದಿಸಿದ್ದಾರೆ. ಅವರ ವಿಡಿಯೋ ಮಂದಬೆಳಕಿನಲ್ಲಿ ಚಿತ್ರಿಸಲು ಪ್ರಯತ್ನಿಸಿದೆ.

ಗಂಭೀರ್‌ರವರ ವೈರಲ್ ವೀಡಿಯೊದ ಪ್ರಾರಂಭದಲ್ಲಿ, ಕಟ್ಟಡದ ಗೇಟ್‌ನಲ್ಲಿ ನೋಟಿಸ್ ಒಂದು ಗೋಚರಿಸುತ್ತದೆ. ಆದರೆ ಕ್ಯಾಮೆರಾ ನೋಟಿಸ್‌ನತ್ತ ಗಮನ ಹರಿಸುವುದಿಲ್ಲ. ಪತ್ರಕರ್ತ ಉದಯ್ ರಾಣಾ ಸಿಂಗ್ ಅವರು ನೋಟಿಸ್ ಅನ್ನು ಕ್ಲೋಸ್ ಅಪ್ ಮಾಡಿ ಟ್ವೀಟ್ ಮಾಡಿದ್ದಾರೆ. ಈ ಶಾಲೆಯನ್ನು ಎಸ್‌ಬಿವಿ ಜೆಜೆ ಕಾಲೋನಿಗೆ ಅಕ್ಟೋಬರ್ 9, 2019 ರಂದು ಸ್ಥಳಾಂತರಿಸಲಾಗಿದೆ ಎಂದು ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ. ಅಂದರೆ ಮುಚ್ಚಿರುವ ಶಾಲೆಯ ವಿಡಿಯೋ ಮಾಡಿ ಗಂಭೀರ್‌ ಆಪ್‌ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ!

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಗಂಭೀರ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ “ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಕಟ್ಟಡವು ಇನ್ನು ಮುಂದೆ ಕ್ರಿಯಾತ್ಮಕ ಶಾಲೆಯಾಗಿರುವುದಿಲ್ಲ ಎಂದು ಬರೆದಿದ್ದಾರೆ. ನೀವು ಭೇಟಿ ನೀಡಿದ ಶಾಲೆಯನ್ನು 2019 ರ ಅಕ್ಟೋಬರ್‌ನಲ್ಲಿ ಎಸ್‌ಬಿವಿ ಜೆಜೆ ಕಾಲೋನಿಗೆ ಸ್ಥಳಾಂತರಿಸಲಾಗಿದೆ” ಎಂದು ನೋಟಿಸ್ ಸ್ಪಷ್ಟವಾಗಿ ಗೋಚರಿಸುವ ವೀಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ಆಪ್‌ ಪಕ್ಷವು “ಗಂಭೀರ್‌ರವರು ದಯವಿಟ್ಟು ಕಾಮೆಂಟರಿ ಬಾಕ್ಸ್‌ನಿಂದ ಹೊರಬಂದು ನಮ್ಮ ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಬೇಕೆಂದು” ಕರೆ ನೀಡಿದ್ದಾರೆ.

ಪತ್ರಕರ್ತ ಉದಯ್ ರಾಣಾ ಸಿಂಗ್ ವಿದ್ಯಾರ್ಥಿಗಳಿಗೆ ಒದಗಿಸಿದ ತಾತ್ಕಾಲಿಕ ಶಾಲೆಯ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. “ನಾನು ಖಿಚ್ಡಿಪುರದ ತಾತ್ಕಾಲಿಕ ಶಾಲೆಗೂ ಭೇಟಿ ನೀಡಿದ್ದೆ. ಮಕ್ಕಳ ಶಾಲೆ ನವೀಕರಣಗೊಳ್ಳುತ್ತಿರುವುದರಿಂದ ಅವರು ಅಕ್ಟೋಬರ್‌ನಿಂದ ಇಲ್ಲಿ ಅಧ್ಯಯನ ಮಾಡುತ್ತಿದ್ದಾರೆ ”ಎಂದು ಅವರು ಬರೆದಿದ್ದಾರೆ.

ಗಂಭೀರ್‌ರವರ ಈ ತಪ್ಪು ಮಾಹಿತಿಯನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಟೀಕಿಸಿದ್ದಾರೆ. “ಸರ್ ಅಮಿತ್‌ಶಾ ಜಿಯವರೆ, ಸಂಸದ ಗೌತಮ್ ಗಂಭೀರ್ ಅವರು ಟ್ವೀಟ್‌ ಮಾಡಿರುವ ವಿಡಿಯೊದಲ್ಲಿ, ಕಟ್ಟಡದ ಗೇಟ್‌ನಲ್ಲಿರುವ ನೋಟೀಸ್‌ನಲ್ಲಿ, ಶಾಲೆಯು ನವೀಕರಣಗೊಳ್ಳುತ್ತಿರುವುದರಿಂದ ಆರು ತಿಂಗಳ ಹಿಂದೆ ನೆರೆಯ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳುತ್ತದೆ” ಸರಿಯಾಗಿ ನೋಡಿ ಎಂದು ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...