Homeಚಳವಳಿಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ.

- Advertisement -
- Advertisement -

ಗೌತಮ್ ನೌಲಾಖ ಅವರು 1980ರ ದಶಕದಲ್ಲಿ ’ಇಂಡಿಪೆಂಡೆಂಟ್ ಇನಿಷಿಯೇಟಿವ್ ಆನ್ ಕಾಶ್ಮೀರ್’ ಎಂಬ ಒಂದು ಅಭಿಯಾನವನ್ನು ಆರಂಭಿಸಿದ್ದರು. ಆಗಲೇ ನಾವು ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರದ ವಿಷಯದಲ್ಲಿ ಸ್ವಲ್ಪ ಮಟ್ಟಿನ ಗಂಭೀರ ಚರ್ಚೆಯನ್ನು ಮಾಡಿದ್ದು. ನಮ್ಮಲ್ಲಿ ಅನೇಕರು ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯನ್ನು ಹೇಗೆ ರೂಪಿಸುವುದು ಎಂಬ ಬಗ್ಗೆಯೇ ತುಂಬಾ ಗೊಂದಲದಲ್ಲಿದ್ದೆವು ಮತ್ತು ಬಹುತೇಕರಿಗೆ ಐತಿಹಾಸಿಕ ವಾಸ್ತವಾಂಶಗಳ ಬಗ್ಗೆ ತಿಳಿದಿರಲಿಲ್ಲ. ಆಗ ’ಇಕನಾಮಿಕ್ ಎಂಡ್ ಪೊಲಿಟಿಕಲ್ ವೀಕ್ಲಿ’ಯ ಜೊತೆಗಿದ್ದ ಗೌತಮ್, ಚರ್ಚೆಯ ಕೇಂದ್ರವಾಗಿದ್ದ ಸ್ವಾಯತ್ತತೆಯ ರಾಜಕೀಯ ಪ್ರಶ್ನೆಯನ್ನು ಸ್ಪಷ್ಟವಾಗಿ ವಿವರಿಸಬಲ್ಲ ಕೆಲವರಲ್ಲಿ ಒಬ್ಬರಾಗಿದ್ದರು. ಗೌತಮ್ ಈ ಸಮಸ್ಯೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡ ಕೆಲವೇ ಕೆಲವರಲ್ಲಿ ಒಬ್ಬರಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನೆಲಮಟ್ಟದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ತನಿಖೆ ಮಾಡಿ, ಭಾರತದಲ್ಲಿ ನಾಗರಿಕ ಹಕ್ಕುಗಳ ಚಳವಳಿಯ ಚಿಂತನೆಯನ್ನು ರೂಪಿಸಿದ ಹಲವಾರು ಸತ್ಯಶೋಧನಾ ವರದಿಗಳನ್ನು ರೂಪಿಸಿ ನೀಡಿದ್ದರು. ಅದು ಅಲ್ಲಿನ ನಾಡಿ ಮಿಡಿತವನ್ನು ಅರ್ಥಮಾಡಿಕೊಳ್ಳಲು ತವಕಿಸುತ್ತಿದ್ದ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆಯ ಜೊತೆಗೆ ಐಕಮತ್ಯದ ಶಪಥ ಮಾಡಲು ಉತ್ಸುಕರಾಗಿದ್ದ ಎಲ್ಲರಿಗೂ ನೆರವಾಯಿತು.

ಹಿಂಸೆ ಮತ್ತು ಪ್ರತಿ ಹಿಂಸೆ ಹೆಚ್ಚುತ್ತಿದ್ದಂತೆ ಮತ್ತು ಭದ್ರತಾ ಪಡೆಗಳ ದಬ್ಬಾಳಿಕೆ ಮತ್ತು ಉಗ್ರಗಾಮಿಗಳ ದಾಳಿಗಳು ಬಿಡದೆ ಮುಂದುವರಿದಂತೆ, ಗೌತಮ್ ಸೇರಿದಂತೆ, ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದ ನಾಗರಿಕ ಹಕ್ಕುಗಳ ಕಾರ್ಯಕರ್ತರು ವಿವೇಕದ ಧ್ವನಿಗಳಾಗಿದ್ದುದು ಮಾತ್ರವಲ್ಲ; ಮಾನವ ಹಕ್ಕುಗಳಿಗೆ ಗೌರವ ನೀಡುವುದು ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಅಗತ್ಯವನ್ನು ಒತ್ತಿಹೇಳುವ ಧ್ವನಿಗಳಾಗಿದ್ದರು. ಗೌತಮ್ ಮತ್ತು ಈ ಪ್ರಜಾಸತ್ತಾತ್ಮಕ ಹಕ್ಕುಗಳ ಪರವಾದ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದ ಹಾಗೂ ಉಳಿದ ಭಾರತದ ಜನರ ನಡುವಿನ ಅತ್ಯಂತ ಗಟ್ಟಿಯಾದ ಕೊಂಡಿಯಾಗಿದ್ದರು. ಇಂದು ನಾವು ನೋಡುವಂತೆ, ಈ ಐಕಮತ್ಯವು ವರ್ಷಗಳು ಕಳೆದಂತೆ ಬೆಳೆಯುತ್ತಲೇ ಬಂದಿದೆ.


ಇದನ್ನೂ ಓದಿ: ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್


ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾದ ದಮನದ ನಡುವೆ, ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಯುತ್ತಿರುವಾಗ, ಗೌತಮ್ ನೌಲಾಖ ಅವರು ಭೀಮಾ ಕೋರೆಗಾಂವ್-12’ರಲ್ಲಿ (ಕೆಲ ದಿನಗಳ ಹಿಂದೆ ಬಂಧಿತರಾದ ದಿಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು ಹನ್ನೆರಡನೆಯವರಾದರು) ಒಬ್ಬರಾಗಿ ಪುಣೆಯ ಜೈಲಿನಲ್ಲಿದ್ದಾರೆ. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಪ್ರಸಿದ್ಧ ಕವಿಗಳು, ವಕೀಲರು, ಶಿಕ್ಷಕರು ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭಾರತದ ಪ್ರಭುತ್ವ ಮಾನವ ಹಕ್ಕು ಕಾರ್ಯಕರ್ತರಿಗೆ ಎಷ್ಟು ಬೆದರುತ್ತಿದೆ ಎಂದು ತೋರಿಸುವ ಈ ಸುಳ್ಳು ಪ್ರಕರಣವು ಭಾರತದಾದ್ಯಂತ ಮತ್ತು ವಿದೇಶಗಳಲ್ಲಿ- ಅತಾರ್ಕಿಕ ನಿರಂಕುಶ ಬಂಧನಗಳು ಮತ್ತು ಕೋವಿಡ್ ಸೋಂಕಿನ ಹೊರತಾಗಿಯೂ ಜಾಮೀನು ನಿರಾಕರಣೆಯ ವಿರುದ್ಧ- ಬಲವಾದ ಪ್ರತಿಭಟನೆಗಳನ್ನು ಪ್ರೇರೇಪಿಸಿದೆ.

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ. ನಾನು ಪಿಯುಡಿಆರ್ (ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್, ದಿಲ್ಲಿ) ಮತ್ತು ಪಿಐಪಿಎಫ್‌ಪಿಡಿ (ಪಾಕಿಸ್ತಾನ್- ಇಂಡಿಯಾ ಪೀಪಲ್ಸ್ ಫೋರಂ ಫಾರ್ ಪೀಸ್ ಎಂಡ್ ಡೆಮೋಕ್ರಸಿ) ಸಂಘಟನೆಗಳಲ್ಲಿ ಗೌತಮ್ ಜೊತೆ ಮೂರು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಹೊಂದಿದ್ದೆ. ತಮ್ಮ ದೃಢ ಸಂಕಲ್ಪ, ಉದ್ದೇಶದ ಸ್ಪಷ್ಟತೆ ಮತ್ತು ಧೈರ್ಯದಿಂದ ಒಂದು ತಲೆಮಾರಿನ ಪ್ರಜಾಸತ್ತಾತ್ಮಕ ಮನೋಭಾವದ ಯುವಜನರನ್ನು ಪ್ರೇರೇಪಿಸುತ್ತಲೇ ಇರುವ ಒಂದು ಪೀಳಿಗೆಯ ಸಾಮಾಜಿಕ ಕಾರ್ಯಕರ್ತ ಬುದ್ಧಿಜೀವಿಗಳನ್ನು ಗೌತಮ್ ಪ್ರತಿನಿಧಿಸುತ್ತಾರೆ.

ಸವಾಲುಗಳ ಹೊರತಾಗಿಯೂ ಪ್ರಜಾಪ್ರಭುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಮತ್ತು ಗೌತಮ್ ಹಾಗೂ ಭೀಮಾ ಕೋರೆಗಾಂವ್ ಪ್ರಕರಣದ ಎಲ್ಲಾ 12 ಮಂದಿ ಹೊರಬಂದು ನಮ್ಮನ್ನು ಮುನ್ನಡೆಸಲು ಖಂಡಿತವಾಗಿಯೂ ನಮ್ಮ ನಡುವೆ ಇರುತ್ತಾರೆ.

ಐಕಮತ್ಯದೊಂದಿಗೆ,

  • ಪ್ರೊ. ಮನೋರಂಜನ್ ಮೊಹಂತಿ, ಪ್ರಾಧ್ಯಾಪಕ, ಸಂಶೋಧಕ ಮತ್ತು ಲೇಖಕ. ರಾಜಕೀಯ ಶಾಸ್ತ್ರಜ್ಞರಾಗಿ, ಮಾನವ ಹಕ್ಕುಗಳ ಕಾರ್ಯಕರ್ತರಾಗಿ ಹಲವು ಚಳವಳಿಗಳ ಸಂಗಾತಿ ಮೊಹಂತಿಯವರು. ದೆಹಲಿ ವಿಶ್ವವಿದ್ಯಾಲಯ ಸುಧೀರ್ಘ ಸೇವೆ ಸಲ್ಲಿಸಿರುವುದಲ್ಲದೆ, ವಿಶ್ವದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚೀನಾ ದೇಶದ ಬಗ್ಗೆ ವಿದ್ವತ್ತು ಹೊಂದಿರುವ ಮೊಹಂತಿ ಅವರು ಚೈನಾ ಅಟ್ ಎ ಟರ್ನಿಂಗ್ ಪಾಯಿಂಟ್, ಕಾಂಟೆಂಪೊರರಿ ಇಂಡಿಯನ್ ಪೊಲಿಟಿಕಲ್ ಥಿಯರಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರು.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...